ರಾಯಚೂರು | ಟೋಲ್‌ಗೇಟ್ ತೆರವಿಗೆ ಒತ್ತಾಯಿಸಿ ರೈತ ಸಂಘ ಪ್ರತಿಭಟನೆ

Date:

Advertisements

ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಗೊಬ್ಬುರ ಹೋಬಳಿ ವ್ಯಾಪ್ತಿಯ ಕಾಕರಗಲ್ ಬಳಿಯಿರುವ ಟೋಲ್‌ಗೇಟ್ ತೆರವುಗೊಳಿಸಲು ಒತ್ತಾಯಿಸಿ ಕರ್ನಾಟಕ ರೈತ ಸಂಘಟನೆ ಪ್ರತಿಭಟನೆ ನಡೆಸಿತು.

ಕಲ್ಮಲ್‌ನಿಂದ ತಿಂಥಣಿ ಬ್ರಿಡ್ಜ್ ವರೆಗಿನ ರಾಜ್ಯ ಹೆದ್ದಾರಿ‌ವರೆಗೆ ‌ಅವಜ್ಞಾನಿಕವಾಗಿ ಟೋಲ್‌ಗೇಟ್ ನಿರ್ಮಾಣ ಮಾಡಿ ಹಣ ವಸೂಲಿ ಮಾಡುತ್ತಿರುವುದು ಸರಿಯಲ್ಲ. ಕಲ್ಮಲ್ ಮತ್ತು ತಿಂಥಣಿ ಬ್ರಿಡ್ಜ್ ರಾಜ್ಯ ಹೆದ್ದಾರಿಗೆ ಒಳಪಟ್ಟರೂ ತಾಲೂಕಿನಲ್ಲಿ ಹೇಳಿಕೊಳ್ಳುವಂತಹ ಯಾವುದೇ ಕಾರ್ಖಾನೆಗಳಾಗಲಿ, ವಾಣಿಜ್ಯ ವ್ಯಾಪಾರಗಳಲೀ ನಡೆಯುತ್ತಿಲ್ಲ. ರಾಜಕೀಯ ಲಾಭಕ್ಕಾಗಿ ಜನ ಪ್ರತಿನಿಧಿಗಳು 2010ರಲ್ಲಿ 192 ಕೋಟಿ ರೂ. ವೆಚ್ಚದಲ್ಲಿ ರಸ್ತೆ ನಿರ್ಮಿಸಲಾಗಿದ್ದ ಅದೇ ರಸ್ತೆಗೆ ಕೆಆರ್‌ಡಿಸಿಎಲ್ ನಿಂದ 70 ಕೋಟಿ ವೆಚ್ಚದಲ್ಲಿ ಪ್ಯಾಚ್ ವರ್ಕ್ ಡಾಂಬರೀಕರಣ ಮಾಡಿದ್ದಾರೆ. ಈ ಸಮಸ್ಯೆಗಳನ್ನು ಬಗರೆಹರಿಸುವುದು ಬಿಟ್ಟು ಟೋಲ್‌ ನಿರ್ಮಿಸಿ ಸಾಮಾನ್ಯ ಜನರಿಂದ ಹಣ ಪೀಕುತ್ತಿದ್ದಾರೆ” ಎಂದು ಸಂಘಟನೆಯ ಸದಸ್ಯರು, ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.

“ಜಿಲ್ಲೆಯ ಅತ್ಯಂತ ಹಿಂದುಳಿದ ದೇವದುರ್ಗ ತಾಲೂಕಿನಲ್ಲಿ ಶೇ. 80 ರಷ್ಟು ರೈತರು, ಕೂಲಿ ಕಾರ್ಮಿಕರು ದಿನ ನಿತ್ಯ ಹೊಲದ ಕೆಲಸಗಳಿಗೆ ಎಣ್ಣೆ ಗೊಬ್ಬರ ಹಾಗೂ ಇತರೆ ಸಾಮಗ್ರಿ ತರಲು, ಧವಸ ಧಾನ್ಯ ಮಾರಾಟ ಮಾಡಲು, ಎತ್ತು, ಹಸು, ಕುರಿ, ಖರೀದಿಸಲು, ಮಾರಾಟ ಮಾಡಲು ಗ್ರಾಮೀಣ ಪ್ರದೇಶದಿಂದ ಪಕ್ಕದ ದೇವದುರ್ಗಕ್ಕೆ ಓಡಾಡುತ್ತಾರೆ. ಅದಕ್ಕೂ ಟೋಲ್‌ ಕಟ್ಟಬೇಕು. ಕೂಡಲೇ ಈ ನಡೆಯಿಂದ ಹಿಂದೆ ಸರಿಯಬೇಕು. ಸಂಬಂಧಪಟ್ಟ ಇಲಾಖೆ, ಆಡಳಿತ ವರ್ಗ ಅಧಿಕಾರಿಗಳು ಟೋಲ್‌ಗೇಟ್‌ ತೆರವಿಗೆ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

ಇದನ್ನೂ ಓದಿ: ರಾಯಚೂರು | ಮೂಲ ಸೌಕರ್ಯ ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ

ಈ ವೇಳೆ ಮಲ್ಲಯ್ಯ ಕಟ್ಟಿಮನಿ, ಕೆ.ಗಿರಿಲಿಂಗ ಸ್ವಾಮಿ, ರಮೇಶ ಮರಗಣ್ಣ ಇರಬಗೇರಾ, ಸಿದ್ದಲಿಂಗಪ್ಪ, ಬಾಬು ದುಬೈ, ಮಲ್ಲೇಶ್ ಇನ್ನಿತರರು ಇದ್ದರು.

Advertisements
ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X