ರಾಯಚೂರು | ಎರಡನೇ ಮದುವೆ ಆಸೆಗೆ ಮಗುವನ್ನೇ ಕೊಂದ ತಂದೆ; ಆರೋಪಿ ಬಂಧನ

Date:

Advertisements

ಎರಡನೇ ಮದುವೆಗೆ ಮಗು ಅಡ್ಡಿಯಾಗುತ್ತದೆಂದು ಭಾವಿಸಿ ವಿಕೃತ ತಂದೆಯೊಬ್ಬ ತನ್ನ ಮಗುವನ್ನೇ ಕೊಂದು, ಕಲ್ಲಿನ ಕೆಳಗೆ ಮುಚ್ಚಿಟ್ಟಿದ್ದ ಧಾರುಣ ಘಟನೆ ರಾಯಚೂರು ಜಿಲ್ಲೆ ಲಿಂಗಸೂಗೂರು ತಾಲೂಕಿನ ಮುದಗಲ್ ಸಮೀಪದ ಕನಸಾವಿ ಗ್ರಾಮದಲ್ಲಿ ನಡೆದಿದೆ.

ಅಭಿನವ(14 ತಿಂಗಳು) ಎಂಬ ಮಗುವನ್ನು ಕೊಂದ ದುಷ್ಕರ್ಮಿ ತನ್ನ ತಂದೆ ಮಹಾಂತೇಶ ಎಂದು ತಿಳಿದುಬಂದಿದೆ. ಮರು ಮದುವೆ ಆಗಲು ಆಸೆಪಟ್ಟಿದ್ದ ಮಹಾಂತೇಶ್ ಪತ್ನಿಗೆ ಪರಪುರುಷನೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಳು ಎಂಬ ಸಬೂಬು ಉತ್ತರ ನೀಡಿದ್ದಾನೆ.

ಮಹಾಂತೇಶ ಮತ್ತೊಂದು ಮದುವೆಯಾಗುವ ತಯಾರಿ ನಡೆಸಿದ್ದು, ಈ ಮದುವೆಗೆ ತನ್ನ ಮಗು ಅಡ್ಡಿಯಾಗುತ್ತದೆಂದು ತಿಳಿದು ತನ್ನ ಮಗುವನ್ನೇ ಕೊಲೆ ಮಾಡಿ ಕಲ್ಲಿನ ಸಂದಿಯಲ್ಲಿ ಮುಚ್ಚಿಟ್ಟದ್ದಾನೆ.

Advertisements

ಈ ಸುದ್ದಿ ಓದಿದ್ದೀರಾ? ಹಾಸನ | ಸೇಬು, ಮೋಸಂಬಿ ಹಣ್ಣಿನೊಳಗೆ ಗಾಂಜಾ; ಜೈಲಿನೊಳಗೆ ಎಸೆಯಲು ಯತ್ನಿಸಿದ ಇಬ್ಬರ ಬಂಧನ

ಮಗು ಕಾಣೆಯಾದ ಕುರಿತು ನಾಪತ್ತೆ ಪ್ರಕರಣವನ್ನು ದಾಖಲಿಸಲಾಗಿತ್ತು. ಪ್ರಕರಣ ಬೆನ್ನತ್ತಿದ ಪೊಲೀಸರು ತಂದೆ ಮಹಾಂತೇಶನನ್ನು ಠಾಣೆಗೆ ಕರೆಸಿ ವಿಚಾರಣೆ ನಡೆಸಿದ್ದಾರೆ. ಬಳಿಕ ಮಹಾಂತೇಶ ತಪ್ಪು ಒಪ್ಪಿಕೊಂಡಿದ್ದಾನೆ.
ಮೂರು ದಿನಗಳ ಬಳಿಕ ಮಗುವನ್ನು ಪೊಲೀಸರು ಪತ್ತೆ ಮಾಡಿ, ಮಗುವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಈ ಕುರಿತು ಮುದಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X