ರಾಯಚೂರು | ಗ್ರಾಮೀಣ ಬ್ಯಾಂಕ್‌ಗಳಲ್ಲಿ ಖಾಲಿ ಹುದ್ದೆ ಭರ್ತಿ; ಗುತ್ತಿಗೆ ನೌಕರರ ಖಾಯಂಗೆ ಒತ್ತಾಯ

Date:

Advertisements

ರಾಯಚೂರು ಗ್ರಾಮೀಣ ಬ್ಯಾಂಕ್‌ಗಳಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿ ಹಾಗೂ ಗುತ್ತಿಗೆ ನೌಕರರನ್ನು ಖಾಯಂಗೊಳಿಸುವದು ಸೇರಿ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕೆಜಿಬಿ ಪ್ರಾದೇಶಿಕ ಕಚೇರಿ ಮುಂದೆ ನೌಕರರ ಪ್ರತಿಭಟನೆ ನಡೆಸಿದ್ದಾರೆ.

ಕರ್ನಾಟಕ ಗ್ರಾಮೀಣ ನೌಕರರ ಸಂಘ ಮತ್ತು ಕರ್ನಾಟಕ ಗ್ರಾಮೀಣ ಬ್ಯಾಂಕ್ ಅಧಿಕಾರಿಗಳ ಸಂಘ, ಸಮನ್ವಯ ಮತ್ತು ಜಂಟಿ ಕ್ರಿಯಾ ಸಮಿತಿಗಳ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಎಲ್ಲಾ ಗ್ರಾಮೀಣ ಬ್ಯಾಂಕ್‌ಗಳನ್ನು ಒಗ್ಗೂಡಿಸಿ ರಾಷ್ಟ್ರಮಟ್ಟದಲ್ಲಿ ಬ್ಯಾಂಕ್ ಸ್ಥಾಪನೆ ಹಾಗೂ ಖಾಲಿಯಿರುವ ಹುದ್ದೆಗಳನ್ನು ಭರ್ತಿಮಾಡಿ, ಕೆಲಸ ಒತ್ತಡ ತಡೆಯುವಂತೆ ಪ್ರತಿಭಟನಾನಿರತ ನೌಕರರು ಆಗ್ರಹಿಸಿದರು.

ನೌಕರರ ಸಂಘದ ಮುಖಂಡ ಎಂ.ಡಿ. ಯೂನಸ್ ಮಾತನಾಡಿ, ರಾಷ್ಟ್ರೀಯ ಬ್ಯಾಂಕ್ ವಿಲೀನ ಮಾದರಿಯಲ್ಲಿಯೇ ಎಲ್ಲಾ ಗ್ರಾಮೀಣ ಬ್ಯಾಂಕ್‌ಗಳನ್ನು ಒಗ್ಗೂಡಿಸಿ ರಾಷ್ಟ್ರೀಯ ಬ್ಯಾಂಕ್ ಸ್ಥಾಪಿಸಬೇಕಿದೆ. ಗ್ರಾಮೀಣ ಬ್ಯಾಂಕ್‌ಗಳಲ್ಲಿ 2 ಲಕ್ಷಕ್ಕೂ ಅಧಿಕ ಹುದ್ದೆಗಳು ಖಾಲಿಯಿವೆ. ಭರ್ತಿ ಮಾಡದೇ ಇರುವದರಿಂದ ನೌಕರರು ಒತ್ತಡದಲ್ಲಿ ಕೆಲಸ ಮಾಡುವಂತಾಗಿದೆ. ಕೂಡಲೇ ಭರ್ತಿಗೆ ಮುಂದಾಗಬೇಕು ಎಂದರು.

Advertisements

ಅಲ್ಲದೇ ಬ್ಯಾಂಕ್‌ಗಳಲ್ಲಿ ಕಳೆದ ಹತ್ತಾರು ವರ್ಷಗಳಿಂದ ಕೆಲಸ ಮಾಡುತ್ತಿರುವ ಗುತ್ತಗೆ ನೌಕರರನ್ನು ಖಾಯಂಗೊಳಿಸುವಂತೆ ಕಾರ್ಮಿಕ ನ್ಯಾಯಾಲಯ ಆದೇಶ ನೀಡಿದೆ. ಆದರೆ, ಆಡಳಿತ ಮಂಡಳಿ ಹೈಕೋರ್ಟನಲ್ಲಿ ಆಕ್ಷೇಪಣಾ ಅರ್ಜಿ ಸಲ್ಲಿಸಿದ್ದು ಕೂಡಲೇಹಿಂಪಡೆದು ಖಾಯಂಗೊಳಿಸುವಂತೆ ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಪವನ, ರಮೇಶಬಾಬು, ಮಂಜುನಾಥ, ಸತ್ಯನಾರಾಯಣ, ಕೃಪಾ ಜೋಷಿ ಸೇರಿದಂತೆ ಸಂಘಗಳ ಪದಾಧಿಕಾರಿಗಳು, ನೌಕರರು ಭಾಗಿಯಾದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X