ರಾಯಚೂರು | ಹಟ್ಟಿ ಪಟ್ಟಣಕ್ಕೆ ಶಾಶ್ವತ ಕುಡಿಯುವ ನೀರಿಗಾಗಿ ಕಾಲ್ನಡಿಗೆ ಜಾಥಾ

Date:

Advertisements

ರಾಯಚೂರು : ಲಿಂಗಸುಗೂರು ತಾಲೂಕಿನ ಹಟ್ಟಿ ಪಟ್ಟಣಕ್ಕೆ ಶಾಶ್ವತ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಮತ್ತು ಪಟ್ಟಣದ ಸಮಗ್ರ ಅಭಿವೃದ್ದಿಗೆ ಮುಂದಾಗಬೇಕು ಎಂದು ಆಗ್ರಹಿಸಿ ನವ ಭಾರತ ಹಿಂದೂ ದಲಿತ ಸಂಘಟನೆ ಕಾರ್ಯಕರ್ತರು ಕಾಲ್ನಡಿಗೆ ಜಾಥಾ ನಡೆಸಿದರು.

ಹಟ್ಟಿಯಿಂದ ಜಾಥಾ ಆರಂಭಿಸಿ ರಾಯಚೂರಿಗೆ ಆಗಮಿಸಿದ ಪ್ರತಿಭಟನಾಕಾರರು, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

“ಹಟ್ಟಿ ಪಟ್ಟಣಕ್ಕೆ 15 ದಿನಗಳ ಒಳಗಾಗಿ ಶುದ್ಧ ಕುಡಿಯುವ ನೀರು ಪೂರೈಕೆ ಮಾಡಬೇಕು. ಶಾಶ್ವತ ಕುಡಿಯುವ ನೀರಿನ ಯೋಜನೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆಸಬೇಕು. ಹಿಂದೂ ರುದ್ರಭೂಮಿಗಾಗಿ ಸ್ಥಳ ನಿಗದಿಪಡಿಸಬೇಕು” ಎಂದು ಪ್ರತಿಭಟಿಸಿದರು.

Advertisements

“ಹಟ್ಟಿ ಪಟ್ಟಣಕ್ಕೆ ಮಂಜೂರಾಗಿರುವ ಬಸ್ ಡಿಪೋ ಕೂಡಲೇ ಕಾರ್ಯಾರಂಭವಾಗಬೇಕು. ಲಿಂಗಸುಗೂರಿನಿಂದ ಕಲಬುರಗಿಗೆ ತೆರಳುವ ಸಾರಿಗೆ ಬಸ್‌ಗಳನ್ನು ಹಟ್ಟಿ ಮಾರ್ಗವಾಗಿ ಸಂಚರಿಸಲು ಆದೇಶಿಸಬೇಕು” ಎಂದು ಜಿಲ್ಲಾಧಿಕಾರಿಗಳಿಗೆ ಒತ್ತಾಯಿಸಿದರು.

“ರಾಯಚೂರು ಜಿಲ್ಲೆಯಲ್ಲಿಯೇ ಅತಿ ಹೆಚ್ಚು ಚುನಾವಣಾ ಬೂತ್‌ ಹಾಗೂ ಅಧಿಕ ಜನಸಂಖ್ಯೆಯನ್ನು ಹೊಂದಿದ ಹಟ್ಟಿ ಪಟ್ಟಣವನ್ನು ತಾಲೂಕು ಕೇಂದ್ರವಾಗಿ ಘೋಷಣೆ ಮಾಡಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಮತ್ತೆ ಬೇಡಿಕೆ ಇಟ್ಟ ಮಾಜಿ ಸಚಿವ ವಿ ಸೋಮಣ್ಣ

ಹಟ್ಟಿ ಪಟ್ಟಣದಲ್ಲಿ ಡಿಪ್ಲೊಮಾ ಇನ್ ಮೈನಿಂಗ್ ಎಂಜಿನಿಯರಿಂಗ್‌, ಡಿಪ್ಲೊಮಾ ಕಾಲೇಜು ಮಂಜೂರು ಮಾಡಬೇಕು. ಸರ್ಕಾರಿ ಜಾಗ ಅತಿಕ್ರಮಣ ಮಾಡಿರುವ ಕುರಿತು ಸಮಗ್ರ ತನಿಖೆ ನಡೆಸಬೇಕು. ಹೈಟೆಕ್ ಗ್ರಂಥಾಲಯ ನಿರ್ಮಾಣದ ಜೊತೆಗೆ ಹಲವು ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿದರು.

ಕಾಲ್ನಡಿಗೆ ಜಾಥಾದಲ್ಲಿ ಸಂಘಟನೆ ಜಿಲ್ಲಾಧ್ಯಕ್ಷ ವಿನೋದ್ ಕುಮಾರ್, ಗೌರವಾಧ್ಯಕ್ಷ ಅಮರೇಶ್, ಹಟ್ಟಿ ಘಟಕದ ಅಧ್ಯಕ್ಷ ವೆಂಕಟೇಶ್, ಕಾರ್ಯದರ್ಶಿ ಭೀಮರಾಯ ಭಜೆಂತ್ರಿ, ಯಂಕೋಬ ಪವಾಡೆ ಸೇರಿದಂತೆ ಮತ್ತಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X