ರಾಯಚೂರು | ಎಸ್‌ಟಿ ನಕಲಿ ಪ್ರಮಾಣಪತ್ರ ತಡೆಗೆ ಆಯೋಗ ರಚಿಸಿ; ವಾಲ್ಮೀಕಿ ನಾಯಕ ಸಂಘ ಆಗ್ರಹ

Date:

Advertisements

ಹಿಂದುಳಿದ ವರ್ಗದಲ್ಲಿ ಬರುವ ತಳವಾರ ಮತ್ತು ಪರಿವಾರ ಎಸ್‌ಟಿ ಸಮುದಾಯದ ನಕಲಿ ಪ್ರಮಾಣ ಪತ್ರ ಹಾವಳಿ ತಡೆಯುವುದಕ್ಕೆ ಆಯೋಗ ರಚನೆ ಮಾಡಬೇಕು ಎಂದು ಹೈದರಾಬಾದ್ ಕರ್ನಾಟಕ ಪ್ರದೇಶ ವಾಲ್ಮೀಕಿ ನಾಯಕ ಸಂಘದ ವಿಭಾಗೀಯ ಕಾರ್ಯದರ್ಶಿ ಎನ್ ರಘುವೀರ್ ನಾಯಕ ಆಗ್ರಹಿಸಿದರು.

ನಗರದಲ್ಲಿ ಪತ್ರಿಕಾಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, “ಪರಿಶಿಷ್ಠ ಪಂಗಡದ ತಳವಾರ ಮತ್ತು ಪರಿವಾರ ಹೆಸರಿನ ಮೇಲೆ ಹಿಂದುಳಿದ ವರ್ಗದಲ್ಲಿ ಬರುವ ಇತರೆ ಸಮುದಾಯದವರು ಎಸ್‌ಟಿ (ಪ.ಪಂಗಡ) ಪ್ರಮಾಣ ಪತ್ರ ಪಡೆದು ನೈಜ ಫಲಾನುಭವಿಗಳಿಗೆ ಸಿಗಬೇಕಾದ ಸೌಲಭ್ಯಗಳನ್ನು ಕಸಿಯುತ್ತಿದ್ದಾರೆ. ಮುಖ್ಯವಾಗಿ ನಾಡಕಚೇರಿ ತತ್ರಾಂಶದಲ್ಲಿ ಇರುವ ದೋಷವೇ ಎಲ್ಲಾ ನಕಲಿ ಪ್ರಮಾಣ ಪತ್ರಗಳು ವಿತರಣೆಯಾಗಲು ಕಾರಣವಾಗಿದೆ” ಎಂದು ಆರೋಪಿಸಿದರು.

“ಹಿಂದುಳಿದ ವರ್ಗದಲ್ಲಿ ಬರುವ ಯಾರಾದರೂ ತಳವಾರ ಎಂದು ಅರ್ಜಿ ಸಲ್ಲಿಸಿದರೆ ಅವರಿಗೆ ಎಸ್‌ಟಿ ಪ್ರಮಾಣಪತ್ರಗಳು ವಿತರಣೆಯಾಗುತ್ತಿವೆ. ಇದರಿಂದ ಎರಡು ಸಮುದಾಯಗಳಿಗೆ ಅನ್ಯಾಯವಾಗುತ್ತಿದೆ. ಕೂಡಲೇ ಸರ್ಕಾರ ಇದಕ್ಕೆ ಕಡಿವಾಣ ಹಾಕಲು ನಾಡಕಚೇರಿ ತತ್ರಾಂಶದಲ್ಲಿ ಹಿಂದುಳಿದ ವರ್ಗದಲ್ಲಿ ಬರುವ ತಳವಾರ ಎನ್ನುವ ಪದವನ್ನು ಅಲ್ಲಿಯೇ ಸೇರಿಸುವ ಮೂಲಕ ಎರಡು ಸಮುದಾಯಗಳಿಗೆ ನ್ಯಾಯ ಒದಗಿಸಬೇಕು” ಎಂದು ಆಗ್ರಹಿಸಿದರು.

“ಈಗಾಗಲೇ ವಿತರಣೆ ಆಗಿರುವ ನಕಲಿ ಪ್ರಮಾಣ ಪತ್ರಗಳನ್ನು ಹಿಂಪಡೆಯಲು ಆಯೋಗ ರಚನೆ ಮಾಡಿ, ಎಸ್‌ಟಿಗೆ ಸೇರದ ಇತರೆ ಸಮುದಾಯದವರು ಸರ್ಕಾರದ ಅಧಿಸೂಚನೆ ಮೇರೆಗೆ ನಾಯ್ಕಡ, ನಾಯಕ ಜಾತಿ ಹೆಸರಿನಲ್ಲಿ ಪಡೆದ ಎಸ್‌ಟಿ ಜಾತಿ ಪ್ರಮಾಣ ಪತ್ರಗಳನ್ನು ರದ್ದುಗೊಳಿಸಬೇಕು. ಬದಲಿಗೆ ಆಯಾ ಜಾತಿ ಪ್ರಮಾಣಪತ್ರಗಳನ್ನು ವಿತರಿಸಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ?: ರಾಯಚೂರು | ʼಮಾದಕ ವ್ಯಸನದಿಂದ ಯುವಕರ ರಕ್ಷಣೆಗೆ ಪೊಲೀಸ್ ಇಲಾಖೆ ಮುಂದಾಗಬೇಕುʼ

ಈ ವೇಳೆ ಮಲ್ಲಿಕಾರ್ಜುನ ನಾಯಕ, ರಮೇಶ ನಾಯಕ, ರಾಮು ನಾಯಕ ಹಾಗೂ ನರೇಂದ್ರ ನಾಯಕ ಇದ್ದರು.

Advertisements
ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X