ರಾಯಚೂರು | ಕೃಷಿ ವಿಶ್ವವಿದ್ಯಾಲಯದ ಸಂಸ್ಥಾಪನಾ ದಿನಾಚರಣೆ

Date:

Advertisements

ಕೃಷಿ ವಿಶ್ವವಿದ್ಯಾಲಯವು ಸಂಶೋಧನೆ ಮತ್ತು ಗುಣಮಟ್ಟದ ಶಿಕ್ಷಣದಿಂದ ಬೆಳೆಯಲು ಸಾಧ್ಯವಾಗಿದೆ. ಜೊತೆಗೆ ವಿಜ್ಞಾನಗಳ ಯಶಸ್ಸುನಿಂದ ವಿಶ್ವವಿದ್ಯಾಲಯವು ಮುನ್ನಡೆಯುತ್ತಿದೆ ಎಂಧು ತೋಟಗಾರಿಕೆ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ.ಸಿ ವಾಸುದೇವಪ್ಪ ಹೇಳಿದ್ದಾರೆ.

ರಾಯಚೂರಿನ ಕೃಷಿ ವಿಶ್ವವಿದ್ಯಾಲಯದ ಪ್ರೇಕ್ಷಾ ಗೃಹದಲ್ಲಿ ನಡೆದ 15ನೇ ಸಂಸ್ಥಾಪನಾ ದಿನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. “ರಾಯಚೂರು ಕೃಷಿ ವಿಶ್ವವಿದ್ಯಾಲಯವು ಈ ಹಿಂದೆ ಧಾರವಾಡ ವಿಶ್ವವಿದ್ಯಾಲಯಕ್ಕೆ ಒಳಪಟ್ಟಿತು. ಅಂದಿನ ಸಂದರ್ಭದಲ್ಲಿ ಕೃಷಿ ವಿಶ್ವವಿದ್ಯಾಲಯ ಸಾಕಷ್ಟು ಸಂಶೋಧನೆ ಮಾಡಿದೆ. ಜೊತೆಗೆ ಗುಣಮಟ್ಟದ ಶಿಕ್ಷಣ ಒದಗಿಸಿದೆ. 2005ರಲ್ಲಿ ಧಾರವಾಡ ವಿಶ್ವವಿದ್ಯಾಲಯದಿಂದ ಬೇರ್ಪಟ್ಟು ಪ್ರತೇಕ ವಿಶ್ವವಿದ್ಯಾಲಯವಾಗಿ ಸಾಕಷ್ಟು ಸಾಧನೆಗಳನ್ನು ಮಾಡಿದೆ” ಎಂದರು.

“ಕೃಷಿ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳು ಸಾಕಷ್ಟು ಸಂಶೋಧನೆ ನಡೆಸಿದ್ದು, ದೇಶದಲ್ಲಿ ಗುರುತಿಸಿಕೊಂಡಿದೆ. ಇಲ್ಲಿ ಅಭ್ಯಾಸ ಮಾಡಿದವರು ಅನೇಕ ಕ್ಷೇತ್ರದಲ್ಲಿ ಬೆಳೆಯಲು ಬುನಾದಿ ಹಾಕಿಕೊಟ್ಟಿದೆ. ಅದರಲ್ಲಿ ವಿಜಯನಗರ ಜಿಲ್ಲಾಧಿಕಾರಿ ದಿವಾಕರ ಕೂಡ ಒಬ್ಬರಾಗಿದ್ದಾರೆ” ಎಂದು ಅವರು ತಿಳಿಸಿದರು.

Advertisements

ವಿಜಯನಗರ ಜಿಲ್ಲಾಧಿಕಾರಿ ಎಮ್ ಎಸ್ ದಿವಾಕರ ಮಾತನಾಡಿ, “ಕೃಷಿ ವಿಶ್ವವಿದ್ಯಾಲಯದ ವಿದ್ಯಾರ್ಥಿಯಾಗಿದ್ದ ಸಂದರ್ಭದಲ್ಲಿ ಸಾಕಷ್ಟು ಕಲಿತಿದ್ದೇನೆ. ಇಲ್ಲಿನ ಅಧ್ಯಾಪಕರ ಪ್ರೋತ್ಸಾಹದಿಂದ ಕೃಷಿ ಇಲಾಖೆ ಸಹಾಯಕ ಕೃಷಿ ಅಧಿಕಾರಿಯಾಗಿ, ಜಂಟಿ ಕೃಷಿ ಅಧಿಕಾರಿಯಾಗಿದ್ದ ಕೆಲಸ ಮಾಡಿದ್ದೇನೆ. ಇದೀಗ ಐಎಎಸ್ ಮುಗಿಸಿ ಜಿಲ್ಲಾಧಿಕಾರಿಯಾಗಿದ್ದೇನೆ” ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕುಲಪತಿ ಡಾ.ಎಂ ಹನುಮಂತಪ್ಪ, ಮಾಜಿ ಶಾಸಕ ಬಸನಗೌಡ ಬ್ಯಾಗವಾಟ್, ವಿಶ್ರಾಂತ ಕುಲಪತಿ ಬಿವಿ ಪಾಟೀಲ್, ಎಸ್‌ಕೆ ಮೇಟಿ, ಮಲ್ಲಿಕಾರ್ಜುನ ಡಿ, ತ್ರಿವಿಕ್ರಮ ಜೋಷಿ, ಕೊಟ್ರೇಶಪ್ಪ ಕೊರಿ, ಶ್ರೀಧರ ಕೆಸರಟ್ಟಿ, ಸುನಿಲ್, ನೇಮಿಚಂದ್ರಪ್ಪ, ವಿಶ್ವನಾಥ, ಗೌಡಪ್ಪ ಸೇರಿದಂತೆ, ಪ್ರಾದ್ಯಾಪಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.

ವರದಿ : ಹಫೀಜುಲ್ಲ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

ವಿಜಯನಗರ | ಅಲೆಮಾರಿ ಸಮುದಾಯಗಳ ಅಭಿವೃದ್ಧಿಯೇ ನಿಗಮದ ಮುಖ್ಯ ಧ್ಯೇಯ: ಪಲ್ಲವಿ

ಅಲೆಮಾರಿ ಬುಡಕಟ್ಟು ಸಮುದಾಯಗಳನ್ನು ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ರಾಜಕೀಯವಾಗಿ ಮತ್ತು ಔದ್ಯೋಗಿಕವಾಗಿ ಮುಂಚೂಣಿಗೆ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ಯಾದಗಿರಿ | ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸಹಾಯ ಧನ ನೀಡುವಂತೆ ಒತ್ತಾಯ

ಕಾರ್ಮಿಕರ ಮಕ್ಕಳಿಗೆ ಸಹಾಯ ಧನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಕಲ್ಯಾಣ...

Download Eedina App Android / iOS

X