ರಾಯಚೂರು | ಸಮಾಜದಲ್ಲಿ ಸುಧಾರಣೆ ತರಲಿಕ್ಕಾಗಿ ನೈತಿಕತೆಯ ಸ್ವಾತಂತ್ರ್ಯ ಅಭಿಯಾನ: ಅರ್ಷಿಯಾ ಬೇಗಂ

Date:

Advertisements

ನೈತಿಕತೆಯೇ ಸ್ವಾತಂತ್ರ್ಯ ಎಂಬ ಧ್ಯೇಯವಾಕ್ಯದಡಿ ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕದ ಮಹಿಳಾ ಘಟಕದ ವತಿಯಿಂದ ಅಭಿಯಾನವನ್ನು ಆಯೋಜಿಸಲಾಗಿದೆ ಎಂದು ಜಮಾಅತೆ ಇಸ್ಲಾಂ ಹಿಂದ್ ತಾಲೂಕು ಘಟಕದ ಅಧ್ಯಕ್ಷೆ‌ ಅರ್ಷಿಯಾ ಬೇಗಂ ಹೇಳಿದರು.

ನಗರದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾಜದಲ್ಲಿ ಜಾಗೃತಿ ಮೂಡಿಸಲಿಕ್ಕಾಗಿ ಮತ್ತು ಪ್ರಸಕ್ತ ಸ್ಥಿತಿಯಲ್ಲಿ ಸುಧಾರಣೆ ತರಲಿಕ್ಕಾಗಿ ಜಮಾಅತೆ ಇಸ್ಲಾಮಿ ಹಿಂದ್ ಮಹಿಳಾ ವಿಭಾಗವು ‘ನೈತಿಕತೆಯೇ ಸ್ವಾತಂತ್ರ್ಯ’ ಎಂಬ ಧ್ಯೇಯ ವಾಕ್ಯದಡಿ ರಾಜ್ಯಾದ್ಯಂತ ಅಭಿಯಾನವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.

ಪ್ರಸಕ್ತ ಕಾಲದಲ್ಲಿ ನಮ್ಮ ಸಮಾಜವು ಎದುರಿಸುತ್ತಿರುವ ಸಮಸ್ಯೆಗಳು ಮತ್ತು ಸವಾಲುಗಳು ಬಹಳ ಕಳವಳಕಾರಿಯಾಗಿದೆ. ಜೊತೆಗೆ ಹೆಚ್ಚುತ್ತಿರುವ ನಗ್ನತೆ, ಜೂಜು, ಮದ್ಯಪಾನ, ಮಾದಕ ವ್ಯಸನ, ಲಿವಿಂಗ್ ರಿಲೇಶನ್ಶಿಪ್, ಸಲಿಂಗಕಾಮ ಹಾಗೂ ವೇಶ್ಯಾವಾಟಿಕೆಗಳಂತಹ ಕೆಡುಕುಗಳು ಸಮಾಜದ ಹದಗೆಡುತ್ತಿರುವ ನೈತಿಕ ಮಟ್ಟಕ್ಕೆ ಕೈಗನ್ನಡಿಯಾಗಿದೆ. ಇನ್ನೊಂದೆಡೆ ನೈತಿಕ ಸಾಮಾಜಿಕ ಮತ್ತು ಜೈವಿಕಮಟ್ಟದಲ್ಲಿ ಅಸಂಖ್ಯ ಸಮಸ್ಯೆಗಳನ್ನು ಹುಟ್ಟು ಹಾಕಿವೆ ಎಂದು ತಿಳಿಸಿದರು.

Advertisements

ಸಮಾಜದಲ್ಲಿ ವಿನಮ್ರತೆ ಪರಿಶುದ್ಧತೆ ಮತ್ತು ನಿಷ್ಠೆ ಅಂತ ಮೌಲ್ಯಗಳನ್ನು ತೀವ್ರವಾಗಿ ಹಾನಿಗೊಳಿಸಿದೆ. ಲೈಂಗಿಕ ನೈತಿಕತೆ ಮತ್ತು ಕುಟುಂಬ ವ್ಯವಸ್ಥೆ ಮೇಲೆ ಅದು ಕೆಟ್ಟ ಪರಿಣಾಮ ಬೀರಿದೆ. ಮಾನವ ಸಂಬಂಧಗಳ ಪಾವಿತ್ರ್ಯವನ್ನು ಉಲ್ಲಂಘಿಸಲಾಗುತ್ತಿದೆ. ನಾಗರಿಕತೆಯ ಸೋಗಿನಲ್ಲಿರುವ ಅನಾಗರಿಕತೆ ಮತ್ತು ನೈತಿಕ ಅವನತಿಯ ಬಿರುಗಾಳಿಯನ್ನು ತಡೆಯಲು ನಾವೆಲ್ಲರೂ ಒಗ್ಗೂಡಬೇಕಿದೆ. ಶಾಂತಿ ಮತ್ತು ಸಮೃದ್ಧಿಯನ್ನು ಖಾತ್ರಿಪಡಿಸುವ ಮಾರ್ಗದ ಕಡೆಗೆ ಜನರಿಗೆ ಮಾರ್ಗ ತೋರಿಸಬೇಕುದೆ ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ರಾಯಚೂರು | ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ: ಅಪರಾಧಿಗೆ ಜೀವಾವಧಿ ಶಿಕ್ಷೆ

ಜಮಾಅತೆ ಇಸ್ಲಾಮೀ ಹಿಂದ್‌ ತಾಲೂಕು ಘಟಕ ಕಾರ್ಯದರ್ಶಿ ಫರ್ಹಾದಿಬಾ, ಸಬೀಹಾ ಬೇಗಂ, ಸುಮೇರಾ, ಉಮ್ಮುಸಲ್ಮಾ, ಪರ್ವೀನ್ ಬೇಗಂ, ಅಮ್ಜದ್‌ ಅಲಿ ಇನ್ನಿತರರು ಹಾಜರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X