ರಾಯಚೂರು | ಕಸ ವಿಲೇವಾರಿ ಘಟಕದಿಂದ ಗ್ರಾಮಸ್ಥರಿಗೆ ಸಮಸ್ಯೆ; ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡ ಬಸನಗೌಡ ಬಾದರ್ಲಿ

Date:

Advertisements

ಸಿಂಧನೂರು ನಗರದ ಹೊರವಲಯದಲ್ಲಿರುವ ನಗರಸಭೆಯ ಕಸವಿಲೇವಾರಿ ಸಂಗ್ರಹ ಘಟಕಕ್ಕೆ ವಿಧಾನ ಪರಿಷತ್ ಶಾಸಕ ಬಸನಗೌಡ ಬಾದರ್ಲಿ ಭೇಟಿ ನೀಡಿ, ಬೇಜವಾಬ್ದಾರಿಯಿಂದ ಕೆಲಸ ಮಾಡುತ್ತಿರುವ ನಗರಸಭೆ ಅಧಿಕಾರಿ, ಸಿಬ್ಬಂದಿಗಳಿಗೆ ತರಾಟೆ ತೆಗೆದುಕೊಂಡರು.

ನಗರದಲ್ಲಿ ಸಂಗ್ರಹಿಸಿದ ಕಸ ವೈಜ್ಞಾನಿಕವಾಗಿ ಸಂಸ್ಕರಣೆ ಮಾಡುವ ಮೂಲಕ ಜನರ ಆರೋಗ್ಯ ರಕ್ಷಣೆಗೆ ಮುಂದಾಗಬೇಕು. ಕಸಕ್ಕೆ ಬೆಂಕಿ ಹಚ್ಚಿ ಸುಡುವುದರಿಂದ ನಗರದ ನಾಗರಿಕರು ಹಾಗೂ ಕಸ ಸಂಗ್ರಹ ಘಟಕದ ಹತ್ತಿರ ಇರುವ ಹಳ್ಳಿಗಳ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆಗಳಿವೆ. ನಗರಸಭೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಮಯಕ್ಕೆ ಸರಿಯಾಗಿ ಕೆಲಸಕ್ಕೆ ಹಾಜರಾಗಿ ಸರ್ಕಾರಿ ನೀಡುವ ಸಂಬಳಕ್ಕೆ ಪ್ರಾಮಾಣಿಕತೆಯಿಂದ ಕೆಲಸ ಮಾಡಬೇಕು ಎಂದು ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಂಡರು.

ವಿಲೇವಾರಿ ಘಟಕದ ವ್ಯವಸ್ಥಾಪಕ ಸಮಯಕ್ಕೆ ಸರಿಯಾಗಿ ಕೆಲಸಕ್ಕೆ ಹಾಜರಾಗಿಲ್ಲದಿರುವುದು ಆಕ್ರೋಶಗೊಂಡ ಬಸನಗೌಡ ಬಾದರ್ಲಿ ದೂರವಾಣಿ ಮೂಲಕ ಕರೆ ಮಾಡಿ, ತರಾಟೆ ತೆಗೆದುಕೊಂಡರು. ನಗರಸಭೆ ಪೌರಾಯುಕ್ತರಿಗೆ ಕರೆ ಮಾಡಿ ಅಸಡ್ಡೆ ತೋರಿದ ಸಿಬ್ಬಂದಿ ವಿರುದ್ಧ ಕ್ರಮಕೈಗೊಳ್ಳಲು ಶಿಫಾರಸು ಮಾಡಿ ಎಂದು ತಿಳಿಸಿದರು.

ಮಲ್ಲಾಪುರ ಸೇರಿದಂತೆ ಇತರೆ ಸುತ್ತಮುತ್ತಲಿನ ಗ್ರಾಮಸ್ಥರು ಕಸ ವಿಲೇವಾರಿ ಘಟಕ ಬೇರೆಡೆಗೆ ಸ್ಥಳಾಂತರಿಸಲು ಕ್ರಮಕೈಗೊಳ್ಳಲು ಬಸನಗೌಡ ಬಾದರ್ಲಿ ಅವರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ವೀರೇಶ ರಾರಾವಿ, ಪ್ರಭುದೇವರಗುಡಿ, ಪರಶುರಾಮ್ ಮಲ್ಲಾಪುರ ಸೇರಿದಂತೆ ಹಲವರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

Download Eedina App Android / iOS

X