ರಾಯಚೂರು | ಬಡವರಿಗೆ ಭೂಮಿ ಮಂಜೂರಾತಿ ಗ್ಯಾರಂಟಿ ನೀಡಲಿ: ಮಾರೆಪ್ಪ ಹರವಿ

Date:

ರಾಜ್ಯದ ಹಲವೆಡೆ ಬಗರ್ ಹುಕುಂ ಸಾಗುವಳಿದಾರರಿಗೆ ಭೂಮಿ ಮಂಜುರಾತಿ ನೀಡುವ ಮೂಲಕ ಬದುಕಿನ ಗ್ಯಾರಂಟಿ ನೀಡಬೇಕು ಎಂದು ಭೂಮಿ ವಸತಿ ಹೋರಾಟ ಸಮಿತಿಯ ರಾಜ್ಯ ಸದಸ್ಯ ಮಾರೆಪ್ಪ ಹರವಿ ಒತ್ತಾಯಿಸಿದರು.

- Advertisement -

ರಾಯಚೂರು ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. “ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಬಡ ಜನರಿಗೆ ಹಲವಾರು ಗ್ಯಾರಂಟಿಗಳನ್ನು ನೀಡುವ ಮೂಲಕ ಆಸರೆಯಾಗಿದೆ. ಸರ್ಕಾರ ನೀಡುವ ಸೌಲಭ್ಯಗಳನ್ನು ಆಧರಿಸಿ ಬದುಕುವುದಕ್ಕಿಂತ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಫಾರಂ ನಂಬರ್ 50, 53 ಮತ್ತು 57ರಲ್ಲಿ ಅರ್ಜಿ ಸಲ್ಲಿಸಿರುವ ಬಗರ್ ಹುಕುಂ ಸಾಗುವಳಿದಾರರಿಗೆ ಭೂಮಿ ಮಂಜೂರಾತಿ ಮಾಡುವ ಮೂಲಕ ಬದುಕಿನ ಗ್ಯಾರಂಟಿ ನೀಡಬೇಕು” ಎಂದು ಸರ್ಕಾರಕ್ಕೆ ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ರಾಜ್ಯದಲ್ಲಿ ಲಕ್ಷಾಂತರ ಭೂರಹಿತರು ಸರ್ಕಾರಿ ಗೋಮಾಳ, ಸರ್ಕಾರಿ ವಿರಾಜ್, ಪರಂಬೋಕು, ಇನಾಂ, ಅರಣ್ಯ ಭೂಮಿಗಳಲ್ಲಿ ಸಾಗುವಳಿ ಮಾಡುತ್ತಾ ಭೂಮಿ ಮಂಜೂರಾತಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ಭೂಮಿಯ ಮೇಲಿನ ಹಕ್ಕಿಗಾಗಿ ಕಳೆದ ಹಲವು ದಶಕಗಳಿಂದಲೂ ಹೋರಾಡುತ್ತಾ 30 ಲಕ್ಷಕ್ಕೂ ಅಧಿಕ ಕುಟುಂಬಗಳು ಜಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ. ಸರ್ಕಾರಗಳು ಈವರೆಗೆ ನೀಡಿರುವ ಭರವಸೆಗಳು ನೀರಿನ ಮೇಲಿನ ಗುಳ್ಳೆಯಂತಾಗಿದೆ” ಎಂದು ಆರೋಪಿಸಿದರು.

“ಕಳೆದ ಬಾರಿ ಬಿಜೆಪಿ ಸರ್ಕಾರ ಬಡ ಜನರ ಭೂಮಿಯ ವಿಷಯವನ್ನು ನಿರ್ಲಕ್ಷ್ಯ ಮಾಡಿದ್ದು, ಬೃಹತ್ ಕಂಪನಿಗಳಿಗೆ ಎಸ್ಟೇಟ್ ಮಾಲೀಕರಿಗೆ, ಮಠಮಾನ್ಯಗಳಿಗೆ ನೀಡಿತ್ತು. ಅಷ್ಟೇ ಅಲ್ಲದೇ ಬಲಾ‌ಢ್ಯರು ಟ್ರಸ್ಟ್ ಹೆಸರಿನಲ್ಲಿ ರಾಜಕಾರಣಿಗಳು ತಮ್ಮ ಹೆಸರು ಹಾಗೂ ಬೇನಾಮಿ ಹೆಸರಿನಲ್ಲಿ ಸರ್ಕಾರಿ ಭೂಮಿಗಳನ್ನು ವಶ ಮಾಡಿಕೊಂಡಿದ್ದಾರೆ” ಎಂದು ಆಪಾದಿಸಿದರು.

ಈ ಸುದ್ದಿ ಓದಿದ್ದೀರಾ? ಬಳ್ಳಾರಿ | ಕಂದಾಯ ಇಲಾಖೆ ಅಧಿಕಾರಿಗಳಿಂದಲೇ ಭೂಗಳ್ಳರಿಗೆ ಬೆಂಬಲ; ಆರೋಪ

“ಹಲವು ದಶಕಗಳಿಂದ ಸರ್ಕಾರಿ ಭೂಮಿಯಲ್ಲಿ ತಾತ್ಕಾಲಿಕವಾಗಿ ವಾಸವಾಗಿರುವ ಬಡವರು ಸೂರಿಗಾಗಿ ಕಾಯುತ್ತಿದ್ದು, ಶಾಶ್ವತ ಪರಿಹಾರ ಕಲ್ಪಿಸುತ್ತಿಲ್ಲ. ರಾಜ್ಯದಲ್ಲಿ ಭೂಮಿಗಾಗಿ ಅರ್ಜಿ ಸಲ್ಲಿಸಿರುವ ಬಡವರಿಗೆ ಭೂಮಿ ಮಂಜೂರಾತಿ ನೀಡಿ ಬಡವರ ಪರ ಆಡಳಿತ ನಡೆಸಬೇಕು” ಎಂದು ಮನವಿ ಮಾಡಿದರು.

ಆಂಜಿನೆಯ್ಯ ಕುರುಬದೊಡ್ಡಿ, ರಂಗಾರೆಡ್ಡಿ, ಹನುಮಂತ ಜೋಗಿ, ನರಸಿಂಹಲು ಕುರುಬದೊಡ್ಡಿ, ಬಂಗಾರಿ ನರಸಿಂಹಲು ಗುಂಜಳ್ಳಿ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...