ಮಾನ್ವಿ | ಸುಂಕೇಶ್ವರ: ಗ್ರಾಮ ಪಂಚಾಯತಿ ಕಚೇರಿಗೆ ಗ್ರಾಮಸ್ಥರಿಂದ ಬೇಲಿ

Date:

Advertisements

ನರೇಗಾ ಯೋಜನೆ ಅಡಿಯಲ್ಲಿ ಕೆಲಸ ಮಾಡಿದ್ದ ಕೂಲಿಕಾರ್ಮಿಕರಿಗೆ ಕೂಲಿ ಹಣ ಪಾವತಿಸದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಕೂಲಿಕಾರ್ಮಿಕರು ಹಾಗೂ ಗ್ರಾಮಸ್ಥರು ಗ್ರಾಮ ಪಂಚಾಯಿತಿ ಕಚೇರಿಗೆ ಬೇಲಿ ಹಾಕಿದ ಘಟನೆ ಶನಿವಾರ ಮಾನ್ವಿ ತಾಲ್ಲೂಕಿನ ಸುಂಕೇಶ್ವರ ಗ್ರಾಮದಲ್ಲಿ ಜರುಗಿದೆ.

ಮೇ ತಿಂಗಳಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ನರೇಗಾ ಯೋಜನೆ ಅಡಿಯಲ್ಲಿ ನಾಲಾ ಹೂಳೆತ್ತುವ ಕಾಮಗಾರಿ ಕೈಗೊಳ್ಳಲಾಗಿತ್ತು. ಆ ಕಾಮಗಾರಿಗೆ ಕೆಲಸ ಮಾಡಿದ್ದ ಕೂಲಿಕಾರ್ಮಿಕರಿಗೆ ಕೂಲಿ ಹಣ ಪಾವತಿಸಲು ಅಧಿಕಾರಿಗಳು‌ ನಿರಾಕರಿಸಿರುವುದು ಘಟನೆಗೆ ಕಾರಣ ಎನ್ನಲಾಗಿದೆ.

ಶನಿವಾರ ಮತ್ತೆ ಅದೇ ನಾಲಾ ಹೂಳೆತ್ತುವ ಕಾಮಗಾರಿಗೆ ಕೆಲಸ ಮಾಡಲು ಬರುವಂತೆ ಅಧಿಕಾರಿಗಳು ಕೂಲಿಕಾರ್ಮಿಕರಿಗೆ ಹೇಳಿದ್ದರು. ಆದರೆ ಕಾಮಗಾರಿ ಸ್ಥಳದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮತ್ತಿತರ ಸಿಬ್ಬಂದಿ ಗೈರಾಗಿದ್ದರು. ಕಾಮಗಾರಿ ಸ್ಥಳದಲ್ಲಿ ಗ್ರಾಮ ಪಂಚಾಯಿತಿ ಅಧಿಕಾರಿ ಮತ್ತು ಸಿಬ್ಬಂದಿಗಾಗಿ ಮೂರ್ನಾಲ್ಕು ತಾಸು ಕಾದು ಕುಳಿತ ಕೂಲಿಕಾರ್ಮಿಕರು ಅಸಮಾಧಾನಗೊಂಡಿದ್ದಾರೆ.ನಂತರ ಗ್ರಾಮ ಪಂಚಾಯಿತಿ ಕಚೇರಿಗೆ ಆಗಮಿಸಿ ಕೆಲಹೊತ್ತು ಪ್ರತಿಭಟನೆ ನಡೆಸಿದರು.

1000133323

ಪ್ರತಿಭಟನಾ ಸ್ಥಳಕ್ಕೆ ಯಾವುದೇ ಅಧಿಕಾರಿ ಬಾರದ ಹಿನ್ನೆಲೆಯಲ್ಲಿ ಆಕ್ರೋಶಗೊಂಡು ಗ್ರಾಮ ಪಂಚಾಯಿತಿ ಕಚೇರಿಗೆ ಬೇಲಿ ಹಾಕಿದರು ಎಂದು ಪ್ರತ್ಯೇಕದರ್ಶಿಗಳು ತಿಳಿಸಿದ್ದಾರೆ.ಈ ಹಿಂದೆ ಮಾಡಿದ್ದ ಕೆಲಸಕ್ಕೆ ಕೂಲಿಕಾರ್ಮಿಕರಿಗೆ ಕೂಲಿ ಹಣ ನೀಡಿಲ್ಲ’ ಎಂದು ಗ್ರಾಮಸ್ಥರು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಕಾರಿನ ಟೈ‌ರ್ ಬ್ಲಾಸ್ಟ್ ಸ್ಥಳದಲ್ಲಿಯೇ ಓರ್ವ ಯುವಕ ಸಾವು; ಓರ್ವ ಗಾಯ

ಘಟನೆ ಕುರಿತು ಪ್ರತಿಕ್ರಿಯಿಸಿದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನಾಗಭೂಷಣ ಕಾಂಬ್ಳೆ, ‘ ವೈಯಕ್ತಿಕ ಕೆಲಸ ನಿಮಿತ್ತ ನಾನು ಬೇರೆ ಊರಿಗೆ ಬಂದಿರುವೆ. ನೈಜ ಕೂಲಿಕಾರ್ಮಿಕರಿಗೆ ಮಾತ್ರ ನರೇಗಾ ಯೋಜನೆ ಅಡಿಯಲ್ಲಿ ಕೆಲಸ ಮತ್ತು ಕೂಲಿ ಹಣ ಪಾವತಿಸುವ ಬಗ್ಗೆ ಕೂಲಿಕಾರ್ಮಿಕರಿಗೆ ತಿಳಿಸಲಾಗಿತ್ತು. ಕೂಲಿಕಾರ್ಮಿಕರ ಹೆಸರಿನಲ್ಲಿ ಬೇರೆಯವರಿಗೆ ಹಣ ಪಾವತಿಸಲು ನಿರಾಕರಿಸಿದ ಕಾರಣ ಇಂದಿನ ಘಟನೆ ನಡೆದಿದೆ’ ಎಂದು ತಿಳಿಸಿದರು.

1000133326
ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಕಾಡುಕೋಣ ದಾಳಿ ವ್ಯಕ್ತಿ ಗಂಭೀರ

ಕಾಡುಕೋಣ ದಾಳಿಯಿಂದ ವ್ಯಕ್ತಿ ಗಂಭೀರ ಗಾಯವಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಬಾಳೂರು...

ರಾಯಚೂರು | ರಕ್ತಹೀನತೆ, ತಾಯಿ ಶಿಶು ಮರಣ ನಿಯಂತ್ರಣಕ್ಕೆ ಒತ್ತಾಯಿಸಿ ಮಹಿಳಾ ಒಕ್ಕೂಟ ಪ್ರತಿಭಟನೆ

ಕಲ್ಯಾಣ ಕರ್ನಾಟಕ ಭಾಗದಲ್ಲಿ ಅತಿ ಹೆಚ್ಚು ಮಹಿಳೆಯರಲ್ಲಿ ರಕ್ತ ಹೀನತೆ ಹಾಗೂ...

ಚಿಕ್ಕಮಗಳೂರು l ಗುಡ್ಡಹಳ್ಳದಲ್ಲಿ ಪುಂಡಾನೆ ಸೆರೆ; ಕಾರ್ಯಾಚರಣೆ ಯಶಸ್ವಿಗೊಳಿಸಿದ ಅರಣ್ಯ ಇಲಾಖೆ

ಸುಮಾರು ಒಂದುವರೆ ವರ್ಷಗಳಿಂದ ಬೀಡು ಬಿಟ್ಟಿದ್ದ, ಪುಂಡಾನೆ ಕೊನೆಗೂ ಸೆರೆಯಾಗಿರುವ ಘಟನೆ,...

ಚಿಕ್ಕಮಗಳೂರು l 1% ಮೀಸಲಾತಿಯನ್ನು ಕೂಡಲೇ ಜಾರಿ ಮಾಡಬೇಕು; ಎದ್ದೇಳು ಕರ್ನಾಟಕ

ಬದುಕಿನ್ನುದ್ದಕ್ಕೂ ಅಲೆಯುತ್ತಲೇ ಬದುಕಿದ ಅಲೆಮಾರಿ ಬಂಧುಗಳು ಇಂದು ನ್ಯಾಯ ಅರೆಸುತ್ತಾ ದೆಹಲಿಗೆ...

Download Eedina App Android / iOS

X