ರಾಯಚೂರು | ಒಳಮೀಸಲಾತಿ ಜಾರಿಗೆ ಮತ್ತೊಂದು ಸಮಿತಿ ರಚನೆ ತರಾತುರಿಯ ತೀರ್ಮಾನ : ಎಸ್ ಮಾರೆಪ್ಪ

Date:

Advertisements

ಪರಿಶಿಷ್ಟ ಜಾತಿಗಳ ಒಳಮೀಸಲಾತಿ ವರ್ಗೀಕರಣದ ಕುರಿತಾಗಿ ರಾಜ್ಯ ಸಚಿವ ಸಂಪುಟದಲ್ಲಿ ತೀರ್ಮಾನ ತೆಗೆದುಕೊಂಡು ಮತ್ತೊಂದು ಸಮಿತಿ ರಚಿಸಲು ನಿರ್ಧರಿಸಿರುವುದು ತರಾತುರಿಯ ನಿರ್ಧಾರವಾಗಿದೆ ಎಂದು ಮಾದಿಗ ಮೀಸಲಾತಿ ಹೋರಾಟ ಸಮಿತಿ ರಾಜ್ಯ ಗೌರವಾಧ್ಯಕ್ಷ ಎಸ್.ಮಾರೆಪ್ಪ ಹೇಳಿದರು.

ರಾಯಚೂರು ಪ್ರೆಸ್‌ಕ್ಲಬ್‌ನಲ್ಲಿ ಮಂಗಳವಾರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ಬಳಿ ಪರಿಶಿಷ್ಟ ಜಾತಿಗಳ ದತ್ತಾಂಶವಿದ್ದರೂ ಉದ್ದೇಶಪೂರ್ವಕವಾಗಿ ವಿಳಂಬ ಮಾಡುವ ಉದ್ದೇಶದಿಂದ ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಅಧ್ಯಕ್ಷತೆಯಲ್ಲಿ ಮತ್ತೊಂದು ಸಮಿತಿ ರಚಿಸಲು ನಿರ್ಧರಿಸಲಾಗಿದೆ. ಮೂರು ತಿಂಗಳೊಳಗೆ ಸಮುದಾಯ ಸಮೀಕ್ಷೆ ನಡೆಸಲು ಸಾಧ್ಯವಾಗುವುದಿಲ್ಲ ಎಂದು ಹೇಳಿದರು.

ಹಿಂದಿನ ಬಿಜೆಪಿ ಸರ್ಕಾರ ನ್ಯಾಯಮೂರ್ತಿ. ಎ.ಜೆ.ಸದಾಶಿವ ಆಯೋಗದ ವರದಿ ಅಂಕಿ-ಅಂಶಗಳ ಆಧಾರದ ಮೇಲೆ ಒಳ ಮೀಸಲಾತಿ ವರ್ಗಿಕರಣಕ್ಕೆ ಕೇಂದ್ರಕ್ಕೆ ಶಿಫಾರಸ್ಸು ಮಾಡಿತ್ತು. ಆಯೋಗದ ವರದಿಯಲ್ಲಿಯೇ ಆದಿ ಕರ್ನಾಟಕ, ಆದಿ ದ್ರಾವಿಡದ ಕುರಿತು ಪ್ರತ್ಯೇಕ ಕಲಂಗಳನ್ನು ಸಮೀಕ್ಷೆ ಫಾರಂನಲ್ಲಿ ಅಳವಡಿಸಲಾಗಿತ್ತು. ವೈಜ್ಞಾನಿಕವಾಗಿಯೇ ಸಮೀಕ್ಷೆ ನಡೆಸಲಾಗಿದೆ. ಆದರೆ ಕಾಂಗ್ರೆಸ್ ಸರ್ಕಾರದ ರಾಜ್ಯದಲ್ಲಿ ನಡೆಯುತ್ತಿರುವ ಮೂರು ಉಪ ಚುನಾವಣೆಯಲ್ಲಿ ಮಾದಿಗ ಸಮುದಾಯದ ಮತ ಪಡೆಯುವ ಉದ್ದೇಶದಿಂದ ತರಾತುರಿಯಲ್ಲಿ ನಿರ್ಧರಿಸಿರುವುದು ಸಮಾಧಾನ ತಂದಿಲ್ಲ ಎಂದು ಹೇಳಿದರು.

Advertisements
IMG 20241029 WA0003

ಒಳಮೀಸಲಾತಿ ಜಾರಿಗೆ ತರುವ ನಿರ್ದಾರ ಸ್ವಾಗತಾರ್ಹವಾಗಿದ್ದರೂ ಜನರನ್ನು ದಾರಿತಪ್ಪಿಸುವ ಕೆಲಸ ಸಚಿವ ಸಂಪುಟ ಕೈಗೊಂಡಿದೆ. ಹೊಸದಾಗಿ ಸಮಿತಿ ರಚಿಸುವ ಅವಶ್ಯಕತೆ ಇರಲಿಲ್ಲ. ಜಾರಿಗೊಳಿಸಲು ಮತ್ತಷ್ಟು ವಿಳಂಬ ಮಾಡುವ ಉದ್ದೇಶ ಸರ್ಕಾರ ಹೊಂದಿರುವ ಸಂಶಯಗಳಿವೆ. ಈಗಾಗಲೇ ಸಂಡೂರು, ಹಾವೇರಿ ಉಪ ಚುನಾವಣೆಯಲ್ಲಿ ಮಾದಿಗ ಸಮೂದಾಯ ಜನರು ಕಾಂಗ್ರೆಸ್ ಬೆಂಬಲಿಸಲು ಮುಂದಾಗಿಲ್ಲ. ಇನ್ನೆರಡು ದಿನಗಳಲ್ಲಿ ಹೋರಾಟ ಸಮಿತಿಯ ಸಭೆ ನಡೆಸಿ, ಮುಂದಿನ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಕೇರಳ ಮುಖ್ಯಮಂತ್ರಿ ತೆರಳುತ್ತಿದ್ದ ಕಾರು – ಬೆಂಗಾವಲು ವಾಹನಗಳ ಮಧ್ಯೆ ಸರಣಿ ಅಪಘಾತ

ಈಗಾಗಲೇ ಕಾಂಗ್ರೆಸ್ ಸೋಲಿಸಲು ಪ್ರಚಾರ ಕಾರ್ಯವನ್ನು ಹೋರಾಟ ಸಮಿತಿ ಕೈಗೊಂಡಿದೆ. ಸಚಿವ ಸಂಪುಟ ತೀರ್ಮಾನದಂತೆ ಮೇಲ್ನೋಟಕ್ಕೆ ಒಳಮೀಸಲಾತಿ ಜಾರಿಗೊಳಿಸುವುದಾಗಿ ಹೇಳಿದ್ದರೂ ವಿಳಂಬವಾಗುವ ಎಲ್ಲ ಲಕ್ಷಣಗಳಿವೆ. ಸಮುದಾಯದ ಜನರು ಯಾವುದೇ ಅವಸರದ ನಿರ್ಧಾರ ಕೈಗೊಳ್ಳದೇ ಹೋರಾಟ ತಾರ್ಕಿಕ ಅಂತ್ಯ ಕಾಣಿಸುವ ನಿರ್ಧಾರಕ್ಕೆ ಬೆಂಬಲಿಸಬೇಕೆಂದರು.

ಸುದ್ದಿಗೋಷ್ಠಿಯಲ್ಲಿ ಹೋರಾಟ ಸಮಿತಿ ರಾಜ್ಯಾಧ್ಯಕ್ಷ ಶಿವರಾಯ ಅಕ್ಕರಕಿ, ಉಪಾಧ್ಯಕ್ಷ ಹೇಮರಾಜ ಅಸ್ಕಿಹಾಳ, ನರಸಿಂಹ ಮರ್ಚಟ್ಹಾಳ, ಆಂಜಿನಯ್ಯ ಉಟ್ಕೂರು, ತಾಯಪ್ಪ ಗಧಾರ, ಆಂಜಿನೇಯ್ಯ ಕುರಬದೊಡ್ಡಿ, ನರಸಿಂಹಲು, ಶ್ರೀನಿವಾಸ ಕೊಪ್ಪರ, ಅಬ್ರಹಾಂ ಕಮಲಾಪುರು ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X