ರಾಯಚೂರು | ಏಪ್ರಿಲ್ 13;ಉಚಿತ ಆರೋಗ್ಯ ತಪಾಸಣೆ ಶಿಬಿರ

Date:

Advertisements

ಭಾರತೀಯ ವೈದ್ಯಕೀಯ ಸಂಘದ ನೇತೃತ್ವದಲ್ಲಿ ಏ.13 ರಂದು ನಗರದ ಮಹಾತ್ಮಗಾಂಧೀ ಕ್ರೀಡಾಂಗಣದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿದೆ ಎಂದು ವೈದ್ಯಕೀಯ ಸಂಘದ ಕಾರ್ಯದರ್ಶಿ ಶುಶೂತ್ ನಿಲೋಫರ್ ಹೇಳಿದರು.

ಅವರಿಂದು ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿ, ರಾಜೀವ ಗಾಂಧಿ ಸೂಪರಸ್ಪೆಷಾಲಿಟಿ ಆಸ್ಪತ್ರೆ, ನವೋದಯ ವೈಧ್ಯಕೀಯ ಕಾಲೇಜು ಮತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗಳ ಸಹಯೋಗದೊಂದಿಗೆ ಬೆಳಿಗ್ಗೆ 7 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಆರೋಗ್ಯ ಶಿಬಿರ ನಡೆಯಲಿದೆ ಎಂದರು.

ಈ ಸುದ್ಡಿ ಓದಿದ್ದೀರಾ? ರಾಯಚೂರು | ಸಿಡಿಲು ಬಡಿದು ಕುರಿಗಾಯಿ ಸಾವು

ಸಾಮಾನ್ಯ ಆರೋಗ್ಯ, ಶಸ್ತ್ರ ಚಿಕಿತ್ಸಾ, ಇಸಿಜಿ, ಇಕೋ ತಪಾಸಣೆ, ಮೂಳೆ, ಕೀಲು ಚಿಕಿತ್ಸೆ, ನೇತ್ರ, ಮನೋವೈದ್ಯ, ಚರ್ಮರೋಗ, ಕಿವಿ,ಮೂಗು, ಗಂಟಲು, ಮಕ್ಕಳ ತಪಾಸಣೆ ಮೂತ್ರ, ಮೂತ್ರಪಿಂಡ, ಹೃದಯ ರೋಗ, ನರರೋಗ, ಪಾಸ್ಟೀಕ್ ಶಸ್ತ್ರ ಚಿಕಿತ್ಸೆ ವಿಭಾಗಗಳ ವೈದ್ಯರು ತಪಾಸಣಡೆ ನಡೆಸಲಿದ್ದಾರೆ. ಅಗತ್ಯ ಬಿದ್ದರೆ ರಾಜೀವಗಾಂಧಿ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ನಡೆಸಲಾಗುತ್ತದೆ. ಉಚಿತವಾಗಿ ಔಷಧಿಯೂ ವಿತರಿಸಲಾಗುತ್ತದೆ. ಸಾರ್ವಜನಿಕರು ಸ್ವಯಂಪ್ರೇರಿತವಾಗಿ ಬಂದು ತಪಾಸಣೆ ಪಡೆಯಬಹುದಾಗಿದೆ ಎಂದರು.

ವೈದ್ಯಕೀಯ ಸಂಘದ ಅಧ್ಯಕ್ಷ ಶ್ರೀಶೈಲ ಅಮರಖೇಡ್ ಮಾತನಾಡಿ ವೈಧ್ಯಕೀಯ ಸಂಘದಿಂದ ನಾಲ್ಕನೇ ಆರೋಗ್ಯ ಶಿಬಿರ ನಡೆಸಲಾಗುತ್ತಿದೆ. ನಗರ ಎಲ್ಲಾ ವೈಧ್ಯರು, ವೈಧ್ಯಕೀಯ ಸಂಸ್ಥೆಗಳ ಸಹಕಾರದಿಂದ ಶಿಬಿರ ನಡೆಸಲಾಗುತ್ತದೆ. ಶಿಬಿರದಲ್ಲಿ ಭಾಗವಹಿಸುವ ಪ್ರತಿಯೊಬ್ಬ ವ್ಯಕ್ತಿಗೂ ತಪಾಸಣೆ, ಅಗತ್ಯ ಬಿದ್ದರೆ ಶಸ್ತ್ರ ಚಿಕಿತ್ಸೆ ಒದಗಿಸಲಾಗುತ್ತದೆ. ಸಾರ್ವಜನಿಕರು ಸದುಪಯೋಗ ಪಡೆಯಬೇಕೆಂದರು.

ಈ ಸಂದರ್ಭದಲ್ಲಿ ಐಎಂಎ ಪದಾಧಿಕಾರಿಗಳಾದ ಡಾ. ಶ್ರೀಧರ ವೈಟ್ಲ, ಡಾ.ರಾಘವೇಂದ್ರ. ಎಸ್, ಡಾ.ದೀಪಶ್ರೀ, ಡಾ.ರಾಮನಗೌಡ ಇದ್ದರು.

Advertisements
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X