ರಾಯಚೂರು | ಅಭ್ಯರ್ಥಿ ಘೋಷಣೆ ಬಳಿಕ ಪ್ರತ್ಯೇಕ ಸಭೆ, ಪ್ರತಿಭಟನೆ ನಡೆಸುವದು ಪಕ್ಷ ವಿರೋಧಿ ಚಟುವಟಿಕೆ: ರಾಜಾ ಅಮರೇಶ್ವರ ನಾಯಕ

Date:

ಲೋಕಸಭಾ ಚುನಾವಣೆಗೆ ಬಿಜೆಪಿಯ ಅಧಿಕೃತ ಅಭ್ಯರ್ಥಿ ಎಂದು ಘೋಷಣೆ ಆದ ನಂತರವೂ ಪ್ರತ್ಯೇಕ ಸಭೆ, ಪ್ರತಿಭಟನೆ ನಡೆಸುವುದು ಪಕ್ಷ ವಿರೋಧಿ ಚಟುವಟಿಕೆಯಾಗುತ್ತದೆ. ಎಲ್ಲರಿಗೂ ಆಸೆ ಇರುವುದು ಸಹಜ. ಪಕ್ಷದ ಹಿರಿಯರು ಎಲ್ಲವನ್ನು ಪರಿಶೀಲಿಸಲಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ಹೇಳಿದರು.

ರಾಯಚೂರಿನಲ್ಲಿ ಅವರೆನ್ನು ಭೇಟಿಯಾದ ಮಾಧ್ಯಮಗಳೊಂದಿಗೆ ಮಾತನಾಡಿ, “ಚುನಾವಣೆಯಲ್ಲಿ ಸ್ಪರ್ಧಿಸಲು ಅನೇಕರು ಪ್ರಯತ್ನಗಳನ್ನು ನಡೆಸಿದ್ದರು. ಪಕ್ಷ ಮತ್ತೆ ಅವಕಾಶವನ್ನು ನನಗೆ ನೀಡಿ ಅಭ್ಯರ್ಥಿಯೆಂದು ಘೋಷಿಸಿದೆ. ಮಾಜಿ ಸಂಸದ ಬಿ ವಿ ನಾಯಕರೊಂದಿಗೆ ಮಾತನಾಡಲು ಸಿದ್ದವಿದ್ದು ಅವರೊಂದಿಗೆ ಸೇರಿ ಚುನಾವಣೆ ಪ್ರಚಾರ ನಡೆಸಲಾಗುವುದು” ಎಂದು ಹೇಳಿದರು.

“ಮಾಜಿ ಶಾಸಕ ತಿಪ್ಪರಾಜ ಹವಲ್ದಾರ್‌ ಕೂಡ ಟಿಕೆಟ್ ಆಕಾಂಕ್ಷಿಯಾಗಿದ್ದು‌, ಅವರು ಸಭೆ ಕರೆದಿರುವುದು ಪಕ್ಷದ ಪರವಾಗಿ ಹೊರತು ವಿರೋಧಿಸಿ ಅಲ್ಲ. ಪಕ್ಷದ ಪ್ರಮುಖರೊಂದಿಗೆ ಚರ್ಚಿಸಲು ಸಭೆ ಕರೆದಿರುವುದಾಗಿ ಹೇಳಿದ್ದಾರೆ” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಪ್ರಧಾನಿ ನರೇಂದ್ರ ಮೋದಿಯವರ ವಿಕಸಿತ ಭಾರತ ಪರಿಕಲ್ಪನೆಯಲ್ಲಿ ದೇಶವನ್ನು ಜಗತ್ತಿನಲ್ಲಿಯೇ ಮೂರನೇ ಸ್ಥಾನಕ್ಕೆ ತರಲು ಬೇಕಾದ ಎಲ್ಲ ಕ್ಷೇತ್ರಗಳ ಅಭಿವೃದ್ಧಿಗೆ ಒತ್ತು ನೀಡಲಾಗುತ್ತಿದೆ. 2047  ವೇಳೆಗೆ ದೇಶಕ್ಕೆ ಸ್ವಾತಂತ್ರ್ಯ ದೊರಕಿ ನೂರು ವರ್ಷ ಪೂರೈಸುವ ವೇಳೆಯಲ್ಲಿ ದೇಶ ಜಗತ್ತಿನಲ್ಲಿಯೇ ಮೊದಲ ಸ್ಥಾನಕ್ಕೆ ತರಲು ದೂರದೃಷ್ಟಿಯ ಯೋಜನೆಗಳನ್ನು ರೂಪಿಸಿ ಕಾರ್ಯನಿರ್ವಹಿಸಲಾಗುತ್ತದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | 2 ದಿನದಲ್ಲಿ ತೀರ್ಮಾನ ಕೈಗೊಳ್ಳದಿದ್ದರೆ ಜನರ ತೀರ್ಮಾನಕ್ಕೆ ಬದ್ಧ; ಬಿಜೆಪಿ ಟಿಕೆಟ್ ಆಕಾಂಕ್ಷಿ ಬಿ ವಿ ನಾಯಕ

“ಮಹತ್ವಾಂಕ್ಷೆ ಜಿಲ್ಲೆಗಳೆಂದು ಗುರುತಿಸಿಕೊಂಡಿರುವ ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ. 12 ಸಾವಿರ ಕೋಟಿ ರೂ. ವೆಚ್ಚದ ರಾಷ್ಟ್ರೀಯ ಹೆದ್ದಾರಿಗಳ ನಿರ್ಮಾಣ ಪ್ರಗತಿಯಲ್ಲಿದೆ. ಯಾದಗಿರಿ ವೈದ್ಯಕೀಯ ಕಾಲೇಜು ಮಂಜೂರಾಗಿದೆ. ಐಎಸ್‌ಐ ಆಸ್ಪತ್ರೆಗಳು ಸೇರಿದಂತೆ ನೀರಾವರಿ ಯೋಜನೆಗಳಿಗೆ ಅನುದಾನ ನೀಡಲಾಗಿದೆ. 3800 ಕೋಟಿ ರೂ. ವೆಚ್ಚದಲ್ಲಿ ನಾರಾಯಣಪುರ ಕಾಲುವೆ ಬಲಗೊಳಿಸುವ ಕಾಮಗಾರಿ ನಡೆಯುತ್ತಿದೆ. ಇನ್ನಷ್ಟು ಪ್ರಗತಿಯ ಪಥದಲ್ಲಿ ಮುನ್ನಡೆಯಲು ಬಿಜೆಪಿಗೆ ಜನರು ಬೆಂಬಲಿಸಬೇಕು” ಎಂದರು.

ವರದಿ : ಹಫೀಜುಲ್ಲ

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಅರೆಬೆಂದ ಊಟ ಸೇವಿಸಿ ವಸತಿ ನಿಲಯದ ವಿದ್ಯಾರ್ಥಿನಿಯರು ಅಸ್ವಸ್ಥ

ಅಂಬೇಡ್ಕರ್ ವಸತಿ ನಿಲಯವೊಂದರಲ್ಲಿ ಅರೆಬೆಂದ ಊಟ ಸೇವಿಸಿ 24 ವಿದ್ಯಾರ್ಥಿನಿಯರು ಅಸ್ವಸ್ಥರಾಗಿರುವ...

ಲೋಕಸಭಾ ಚುನಾವಣೆ | ಮೊದಲ ಹಂತದ ಮತದಾನ ದಿನ 2,172 ಪ್ರಕರಣ ದಾಖಲು

ಲೋಕಸಭಾ ಚುನಾವಣೆ ಹಿನ್ನೆಲೆ, ಏ.26 ರಂದು ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ...

ಚಿಕ್ಕಮಗಳೂರು | ಹಿಂದು ಕಾರ್ಯಕರ್ತನ ಮೇಲೆ ಬಿಜೆಪಿಗರ ಹಲ್ಲೆ

ಹಿಂದುತ್ವವಾದಿ ಕಾರ್ಯಕರ್ತನ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ಮಾಡಿ, ಥಳಿಸಿರುವ ಘಟನೆ...

ಮಂಡ್ಯ | 8,000 ಕಿ.ಮೀ ದೂರದಿಂದ ಬಂದು ಮತದಾನ ಮಾಡಿದ ಯುವತಿ!

ಯುವತಿಯೊಬ್ಬರು ಬರೋಬರಿ 8,000 ಕಿ.ಮೀ ದೂರದ ಲಂಡನ್‌ನಿಂದ ಮಂಡ್ಯಕ್ಕೆ ಬಂದು ಮತದಾನ...