ರಾಯಚೂರು | ಹೊನ್ನಟಗಿ ಗ್ರಾಮವು ಹೆಸರಿಗೆ ಮಾತ್ರ ಆದರ್ಶ ಗ್ರಾಮ; ಅಭಿವೃದ್ಧಿ ಮರೀಚಿಕೆ

Date:

Advertisements

ಸರ್ಕಾರ ಪ್ರತಿ ಜಿಲ್ಲೆಯಲ್ಲಿ ಆದರ್ಶ ಗ್ರಾಮ ಮಾಡಬೇಕೆಂದು ಆಶಿಸಿ ಸಂಸತ್ ಸದಸ್ಯರು ತಮ್ಮ ಆಯ್ಕೆಯ ಗ್ರಾಮ ಪಂಚಾಯಿತಿವೊಂದನ್ನು ದತ್ತು ಪಡೆದುಕೊಂಡು ಸಂಪೂರ್ಣವಾಗಿ ಅಭಿವೃದ್ಧಿ ಮಾಡಬೇಕೆಂಬುದು ಸರ್ಕಾರದ ನಿಯಮ. ಆದರೆ ದೇವದುರ್ಗ ತಾಲೂಕಿನ ಹೊನ್ನಟಗಿ ಗ್ರಾಮವು ಹೆಸರಿಗೆ ಮಾತ್ರ ಆದರ್ಶ ಗ್ರಾಮ, ಅಭಿವೃದ್ಧಿಯಲ್ಲಿ ಶೂನ್ಯ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದರು.

“ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಹೇಮನಾಳ ಪಂಚಾಯಿತಿ ವ್ಯಾಪ್ತಿಗೆ ಬರುವ ಹೊನ್ನಟಗಿ ಗ್ರಾಮ ಕೇವಲ ಸರ್ಕಾರದ ಪಟ್ಟಿಯಲ್ಲಿ ಮಾತ್ರ ಆದರ್ಶ ಗ್ರಾಮ.‌ ಆದರೆ ಸಂಪೂರ್ಣ ಮೂಲಸೌಕರ್ಯಗಳಿಂದ ವಂಚಿತಗೊಂಡಿದ್ದು, ಸಮಸ್ಯೆಗಳ ಪರಿಹಾರಕ್ಕೆ ಅಧಿಕಾರಿಗಳು ಗಮನ ಹರಿಸುತ್ತಿಲ್ಲ. ಹೆಸರಿಗೆ ಮಾತ್ರ ಆದರ್ಶ” ಎಂದು ಗ್ರಾಮಸ್ಥರು ಬೇಸರ ವ್ಯಕ್ತಪಡಿಸಿದ್ದಾರೆ.

ಸ್ಥಳೀಯ ನಿವಾಸಿ ಶಾಂತಕುಮಾರ ಹೊನ್ನಟಗಿ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಹೇಮನಾಳ ಪಂಚಾಯಿತಿ ವ್ಯಾಪ್ತಿಗೆ ಬರುವ ಹೊನ್ನಟಗಿ ಗ್ರಾಮ ಸರ್ಕಾರದ ಪಟ್ಟಿಯಲ್ಲಿ 2019/20ನೇ ಸಾಲಿನಲ್ಲಿ ಪ್ರಧಾನ ಮಂತ್ರಿ ಆದರ್ಶ ಗ್ರಾಮವೆಂದು ಆಯ್ಕೆಯಾದರೂ ಸಹಿತ ಪ್ರಸ್ತುತದವರೆಗೆ ರಸ್ತೆ, ಚರಂಡಿ, ಶುದ್ದ ಕುಡಿಯುವ ನೀರು, ಮಹಿಳಾ ಶೌಚಾಲಯ, ಅಂಗನವಾಡಿ, ಶಾಲೆ, ಪ್ರಾಥಮಿಕ ಶಾಲೆ, ಜನಸಾಮಾನ್ಯರು, ಮಕ್ಕಳು ಬಹಳ ಉತ್ತಮವಾದ ವಾತಾವರಣದಲ್ಲಿ ಜೀವಿಸಲು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ಆದರ್ಶ ಗ್ರಾಮವಾಗಬೇಕಾಗಿತ್ತು. ಆದರೆ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಅಸ್ತವ್ಯಸ್ತಕ್ಕೆ ಕಾರಣವಾಗಿದೆ” ಎಂದು ದೂರಿದರು.

Advertisements

“ಗ್ರಾಮದಲ್ಲಿರುವ ಅನೈರ್ಮಲ್ಯವನ್ನು ಶುಚಿಗೊಳಿಸಿಕೊಡುವಂತೆ ಅಪರ ಜಿಲ್ಲಾಧಿಕಾರಿ ಶಿವಪ್ಪ ಭಜಂತ್ರಿ ಅವರಿಗೂ ಮನವಿ ನೀಡಿದ್ದೇವೆ” ಎಂದು ಹೇಳಿದರು.

ಮನವಿ 6

“ಅಧಿಕಾರಿಗಳ ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದ ವಾಸ್ತವದಲ್ಲಿ ಸಿಸಿ ರಸ್ತೆ ಇಲ್ಲದೆ ಜನ ತಿರುಗಾಡಲು ಕಷ್ಟಪಡುತ್ತಿದ್ದಾರೆ. ಚರಂಡಿ ನೀರು ಊರ ಹೊರಗೆ ಹೋಗಲು ಸರಿಯಾಗಿ ಚರಂಡಿ ಇಲ್ಲದ ಕಾರಣ ಈ ಗ್ರಾಮದ ಅಂಗನವಾಡಿ ಕೇಂದ್ರದ ಮುಂದೆ ಕೆರೆಯಾಗಿ ಮಾರ್ಪಟ್ಟು ಅಲ್ಲಿ ಮಕ್ಕಳು ರೋಗ ರುಜುನಗಳಿಗೆ ತುತಾಗುತ್ತಿದ್ದಾರೆ. ಮಲೇರಿಯಾ, ಡೆಂಘೀ, ಚಿಕುನ್ ಗುನ್ಯಾ, ಕಾಲರಾ ಸೇರಿದಂತೆ ಇನ್ನು ಮುಂತಾದ ಅನೇಕ ಸಮಸ್ಯೆಗಳಿವೆ” ಎಂದರು.

“ಆದರ್ಶ ಗ್ರಾಮವೆಂದಲ್ಲಿ ಸರಿಯಾಗಿ ಮೂಲಸೌಕರ್ಯಗಳೂ ಇಲ್ಲದೆ ನಾವು ಅಧಿಕಾರಿಗಳಿಗೆ ಶಾಪ ಹಾಕುತ್ತಿದ್ದೇವೆ. ಸರ್ಕಾರ ಬರೀ ಹೆಸರಿಗೆ ಮಾತ್ರ‌ ಆದರ್ಶ ಗ್ರಾಮವೆಂದು ಘೋಷಣೆ ಮಾಡಿರುವುದಕ್ಕೂ ಗ್ರಾಮ ಇರುವ ಸ್ಥಿತಿಗೂ ಎದ್ದು ಎದ್ದು ಕಾಣಿಸುತ್ತಿದೆ” ಎಂದು ಹೇಳಿದರು.

IMG 20240928 WA0002

“ಮೂಲಸೌಕರ್ಯ ಅಭಿವೃದ್ಧಿಯ ಜತೆಗೆ ಸಾಮಾಜಿಕ ಅಭಿವೃದ್ಧಿಯನ್ನೂ ಸಾಧಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಆದರೆ ಈ ಗ್ರಾಮದಲ್ಲಿ ಅಭಿವೃದ್ಧಿ ವಿಷಯದಲ್ಲಿ ಶೂನ್ಯವಾಗಿದೆ. ಆದರ್ಶ ಗ್ರಾಮಗಳು ಸ್ಥಳೀಯವಾಗಿ ಅಭಿವೃದ್ಧಿ ಹೊಂದಿ ಆದರ್ಶ ಶಾಲೆಗಳಾಗಿ ಮುಂದುವರೆದು ಉಳಿದ ಗ್ರಾಮ ಪಂಚಾಯಿತಿಗಳಿಗೆ ಸ್ಫೂರ್ತಿಯಾಗಬೇಕಾಗಿದೆ” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಚುನಾವಣಾ ಬಾಂಡ್ ಹಗರಣ | ಕೋರ್ಟ್‌ ಸೂಚನೆಯ ಬೆನ್ನಲ್ಲೇ ನಿರ್ಮಲಾ ಸೀತಾರಾಮನ್ ವಿರುದ್ಧ ಎಫ್‌ಐಆರ್

“ಸಂಸದರು ಹಾಗೂ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಮಾದರಿ ಪಂಚಾಯಿತಿಯನ್ನಾಗಿ ಮಾಡಿ ಸುತ್ತಮುತ್ತ ಉಳಿದ ಗ್ರಾಮ ಪಂಚಾಯಿತಿಗಳಿಗೂ ಸ್ಪೂರ್ತಿಯಾಗಬೇಕು” ಎಂದರು.

ಈ ಸಂದರ್ಭದಲ್ಲಿ ಸೂಗಪ್ಪ ಗೌಡ, ಬಸನ ಗೌಡ, ಪರ್ತಪ್ಪ ರೆಡ್ಡಿ, ಭೀಮನಗೌಡ ಸೇರಿದಂತೆ ಇತರರು ಇದ್ದರು.

Rafi
ರಫಿ ಗುರುಗುಂಟ
+ posts

ಗುಲಬರ್ಗಾ ವಿವಿಯಿಂದ ಪತ್ರಿಕೋದ್ಯಮದಲ್ಲಿ ಎಂ ಎ ಪದವಿ, ಕಲ್ಯಾಣ ಕರ್ನಾಟಕ ವಲಯ ಕೋರ್ಡಿನೇಟರ್

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ರಫಿ ಗುರುಗುಂಟ
ರಫಿ ಗುರುಗುಂಟ
ಗುಲಬರ್ಗಾ ವಿವಿಯಿಂದ ಪತ್ರಿಕೋದ್ಯಮದಲ್ಲಿ ಎಂ ಎ ಪದವಿ, ಕಲ್ಯಾಣ ಕರ್ನಾಟಕ ವಲಯ ಕೋರ್ಡಿನೇಟರ್

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X