ರಾಯಚೂರು | ಆಸ್ಪತ್ರೆಯಲ್ಲಿ ಮಗು ಅದಲು ಬದಲು; ಕುಟುಂಬಸ್ಥರ ಆರೋಪ

Date:

Advertisements

ಸಿಂಧನೂರು ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಹೆರಿಗೆಯಾದಾಗ ಮೊದಲು ಗಂಡು ಮಗು ಜನಿಸಿದೆ. ನಂತರ ಹೆಣ್ಣು ಮಗು ಹುಟ್ಟಿದೆ ಎಂದು ಆಸ್ಪತ್ರೆ ಸಿಬ್ಬಂದಿ ಬದಲಾಯಿಸಿದ್ದಾರೆ ಎಂದು ತಾಯಿಯ ಕುಟುಂಬಸ್ಥರು ಆರೋಪಿಸಿದ್ದಾರೆ.

ಸಿಂಧನೂರು ನಗರದ ಗಾಂಧಿನಗರ ನಿವಾಸಿ ರೇವತಿಗೆ ಹೆರಿಗೆಯಾದಾಗ ಗಂಡು ಮಗುವೆಂದು ನೀಡಿ ಹಾಲುಣಿಸಿ ನಂತರ ಬದಲಾಯಿಸಿ ನಿಮಗೆ ಹೆಣ್ಣು ಮಗು ಹುಟ್ಟಿದೆ ನಮ್ಮಿಂದ ತಪ್ಪಾಗಿದೆ ಎಂದು ಸಿಬ್ಬಂದಿ ಹೇಳಿರುವುದು ಅನುಮಾನಕ್ಕೆ ಕಾರಣವಾಗಿದೆ.

ಈ ಬಗ್ಗೆ ತಾಯಿ ರೇವತಿ ಮಾತನಾಡಿ, ಸಿಂಧನೂರು ತಾಲ್ಲೂಕು ಆಸ್ಪತ್ರೆಯಲ್ಲಿ ವೈದ್ಯರು ಹಾಗೂ ಸಿಬ್ಬಂದಿಯಿಂದ ಮಕ್ಕಳ ಬದಲಾವಣೆ ನಡೆಯುತ್ತಿದೆ. ನಮಗೆ ಹುಟ್ಟಿದ್ದು ಗಂಡು ಮಗು. ಮಗುವಿಗೆ ಹಾಲುಣಿಸಿದ ನಂತರ ನಿಮಗೆ ಹೆಣ್ಣು ಮಗು ಜನನವಾಗಿದೆ ಎಂದು ನಮ್ಮಿಂದ ತಪ್ಪಾಗಿದೆ ಎಂದು ಸಿಬ್ಬಂದಿಯೊಬ್ಬರು ಹೇಳಿದ್ದಾರೆ. ಬೇಕಿದ್ದರೆ ಡಿಎನ್ಎ ಪರೀಕ್ಷೆ ಮಾಡಿಕೊಳ್ಳಲಿ ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಮೊಹರಂ ಅಲಾಯಿ ಕುಣಿಯಲ್ಲಿ ಬಿದ್ದು ವ್ಯಕ್ತಿ ಗಂಭೀರ ಗಾಯ ; ಆಸ್ಪತ್ರೆಗೆ ದಾಖಲು

ಘಟನೆಯ ಬಗ್ಗೆ ಹುಲ್ಲಪ್ಪ ಅವರು ಸಿಂಧನೂರು ನಗರ ಪೊಲೀಸ್ ಠಾಣೆಗೆ ದೂರು ನೀಡಿ, ನಮಗೆ ಮದ್ಯಾಹ್ನ 12:00 ಕ್ಕೆ ಗಂಡು ಮಗು ಜನಿಸಿರುತ್ತದೆ ಎಂದು ನಮಗೆ ಮಗುವನ್ನು ಹಸ್ತಾಂತರಿಸಿರುತ್ತಾರೆ. ಮಗುವು ಜನಿಸಿರುವುದನ್ನು ಆಶಾಕಾರ್ಯಕರ್ತೆಯವರು, ಮಗುವಿನ ಅಜ್ಜಿ, ಮಗುವಿನ ತಂದೆಯವರು ಸಹ ನೋಡಿರುತ್ತಾರೆ. ಅದಾದ ನಂತರ ಮಗುವನ್ನು ಐಸಿಯುಗೆ ಕರೆದುಕೊಂಡು ಹೋದ ನಂತರ ನಮಗೆ ಹೆಣ್ಣು ಮಗುವನ್ನು ಹಸ್ತಾಂತರಿಸಿರುತ್ತಾರೆ. ನಾವು ಅವರಿಗೆ ಅದಲು ಬದಲು ಬಗ್ಗೆ ಕೇಳಿದಾಗ ಅವಾಗ ತರಾತುರಿಯಲ್ಲಿ ಬೇರೆ ಮಗುವನ್ನು ನಿಮಗೆ ಕೊಟ್ಟಿದ್ದೆವು ಎಂದು ಹೇಳುತ್ತಿದ್ದಾರೆ.

Advertisements

ಕೂಡಲೇ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಿ, ಮಗುವಿನ ಡಿಎನ್ಎ ಟೆಸ್ಟ್ ಮಾಡಿಸಿ ನಂತರ ನಮಗೆ ಮಗುವನ್ನು ನಮಗೆ ನೀಡಬೇಕು ಎಂದು ಮನವಿ ಮಾಡಿದ್ದಾರೆ.

1000147181



eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X