ರಾಯಚೂರು | ವಸತಿ ಶಾಲೆಗಳ ನೌಕರರ ಬೇಡಿಕೆ ಈಡೇರಿಕೆಗೆ ಒತ್ತಾಯ

Date:

ವಸತಿ ಶಿಕ್ಷಣ ನಿರ್ದೇಶನಾಲಯ ಸ್ಥಾಪನೆ, ಜ್ಯೋತಿ ಸಂಜೀವಿನಿ ಅನುಷ್ಠಾನ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ವಸತಿ ಶಾಲೆಗಳ ನೌಕರರ ಸಂಘದ ವತಿಯಿಂದ ಮೌನ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.

ನಗರದ ಅಂಬೇಡ್ಕರ್ ವೃತ್ತದಿಂದ ನೂತನ ಜಿಲ್ಲಾ ಧಿಕಾರಿ ಕಚೇರಿವರೆಗೆ ಮೆರವಣಿಗೆ ಮೂಲಕ ತೆರಳಿ ಸ್ಥಾನಿಕ ಅಧಿಕಾರಿ ಮೂಲಕ ಮುಖ್ಯಮಂತ್ರಿ ಗಳಿಗೆ ಮನವಿ ಸಲ್ಲಿಸಿದರು.

ವಸತಿ ಶಾಲೆಗಳಲ್ಲಿ ಕೆಲಸ ಮಾಡುತ್ತಿರುವ ನೌಕರರಿಗೆ ಮರಣ ಮತ್ತು ನಿವೃತ್ತಿ ಉಪದಾನ ಸೌಲಭ್ಯ ಗಳನ್ನು ಒದಗಿಸಿಕೊಡಬೇಕು, ಮನೆ ಬಾಡಿಗೆ ಕಡಿತದಿಂದ ವಿನಾಯಿತಿ ನೀಡಬೇಕು, ಶೇ.10 ರಷ್ಟು ವಿಶೇಷ ಭತ್ಯೆ ಮಂಜೂರಾತಿ ನೀಡಬೇಕು ಎಂದು ಆಗ್ರಹಿಸಿದರು.ಮೇ.26 ರಿಂದ 28 ರವರೆಗೆ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಗಿದೆ ಎಂದರು.

- Advertisement -

ಈ ಸುದ್ದಿ ಓದಿದ್ದೀರಾ? ರಾಯಚೂರು | ಮೈಮೇಲೆ ಕೆಸರು ಸಿಡಿದಕ್ಕೆ ಬಸ್ ಚಾಲಕ,ನಿರ್ವಾಹಕ ಜೊತೆ ಯುವಕನೋರ್ವ ವಾಗ್ವಾದ : ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಈ ದಿನ ಕವಿತೆ | ಇಸ್ರೇಲಿನ ವಾಯುದಾಳಿಯ ರಾತ್ರಿಯಲಿ...

ಈ ಬಾರಿ ಪ್ಯಾಲೆಸ್ತೀನ್‌ನ ಕವಿ ಮೊಸಾಬ್ ಅಬು ತೋಹಾ ಅವರ ಕವನವನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ತಂದಿದ್ದಾರೆ ಸಿ ಎಚ್‌ ಭಾಗ್ಯ ಅವಳು ತನ್ನ ಹಾಸಿಗೆಯ ಸುತ್ತಾ ಇರುವ ಮಕ್ಕಳನ್ನು ಒಟ್ಟೈಸುವಳು.ಹೊಟೇಲ್ ಬಿಡುವ...

29 ರಂದು ಎಲ್ಲಾ ವಸತಿ ಶಾಲೆಗಳಲ್ಲಿ ಕಪ್ಪು ಪಟ್ಟಿ ದರಿಸಿ ಕರ್ತವ್ಯ ನಿರ್ವಹಿಸಲಾಗಿದೆ, ನಿನ್ನೆ ತರಗತಿಗಳನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸಲಾಯಿತು.ಇಂದು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ ಬೇಡಿಕೆ ಈಡೇರಿಕೆಗೆ ಸ್ಪಂದಿಸದಿದ್ದರೆ ಜೂ.2 ರಿಂದ ಜಿಲ್ಲಾಧಿಕಾರಿ ಕಚೇರಿ ಹಾಗೂ ವಸತಿ ಶಾಲೆಗಳ ಮುಂದೆ ಧರಣಿ ಸತ್ಯಾಗ್ರಹ ನಡೆಸಲಾಗುತ್ತದೆ ಎಂದು ಮನವಿಯಲ್ಲಿ ಎಚ್ಚರಿಸಿದ್ದಾರೆ.

ಈ ಸಂದರ್ಭದಲ್ಲಿ ಅಧ್ಯಕ್ಷ ಶೈಲ ನಾಯಕ, ಉಪಾಧ್ಯಕ್ಷ ರುದ್ರೇಶ, ಪ್ರಧಾನ ಕಾರ್ಯದರ್ಶಿ ಸಾಬುಗೌಡ, ಸಹ ಕಾರ್ಯದರ್ಶಿ ಪ್ರಕಾಶ ರಾಂಪೂರ, ಸಂಘಟನಾ ಕಾರ್ಯದರ್ಶಿ ಶಶಿಧರ, ಖಜಾಂಚಿ ಲಾಲ್ ಅಹ್ಮದ್ ಸೇರಿದಂತೆ ಶಿಕ್ಷಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಕೆ.ಎಸ್. ಗಣೇಶ್ ನೇತೃತ್ವದಲ್ಲಿ ಬೆಳೆದ ಸಂಘದಿಂದ ಎರಡು ಜಿಲ್ಲೆಗಳ ಪತ್ರಕರ್ತರಿಗೆ ಆರ್ಥಿಕ, ಆರೋಗ್ಯ ಹಾಗೂ ಸಾಮಾಜಿಕ ನೆರವು

ಪತ್ರಕರ್ತರ ಆರ್ಥಿಕ ಹಾಗೂ ಸಾಮಾಜಿಕ ಅಗತ್ಯಗಳಿಗೆ ಸ್ಪಂದಿಸುವ ಉದ್ದೇಶದಿಂದ ಆರಂಭಗೊಂಡಿರುವ ಕೋಲಾರ...

ಚಿಕ್ಕಮಗಳೂರು | ಸಿಎಂ ಭೇಟಿ: ಕಾಂಗ್ರೆಸ್ ಸರ್ಕಾರ ಜನಪರ ಕಾಳಜಿಗೆ ಸಾಕ್ಷಿಯಾಗಿದೆ; ಹೆಚ್.ಪಿ ಮಂಜೇಗೌಡ

ಚಿಕ್ಕಮಗಳೂರು ನಗರದ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಪಿ.ಮಂಜೇಗೌಡ ಮಾತನಾಡಿ,"ಕಸ್ತೂರಿ ರಂಗನ್...

‌ಮೈಸೂರು ವಿವಿ ಸಂಜೆ ಕಾಲೇಜು: ಸಾಂಸ್ಕೃತಿಕ ಹಾಗೂ NSS ಚಟುವಟಿಕೆಗಳಿಗೆ ಚಾಲನೆ

ಮೈಸೂರು ವಿವಿ ಸಂಜೆ ಕಾಲೇಜಿನ ಪಠ್ಯೇತರ ಚಟುವಟಿಕೆಗಳ ಸಮಿತಿಯಿಂದ 2026-27ನೇ ಶೈಕ್ಷಣಿಕ...

ಚಿಕ್ಕಮಗಳೂರು | ಮಲೆನಾಡಿನ ಕರಾಳ ಅರಣ್ಯ ಕಾಯ್ದೆ ರದ್ದಾಗಬೇಕು; ಹಕ್ಕು ವಂಚಿತರಿಗೆ ಹಕ್ಕು ಸಿಗಬೇಕು; ಕೆ.ಎಲ್ ಅಶೋಕ್ 

ಚಿಕ್ಕಮಗಳೂರು ನಗರದ ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ಜನಶಕ್ತಿ ರಾಜ್ಯ ಕಾರ್ಯದರ್ಶಿ ಕೆ. ಎಲ್...