ರಾಯಚೂರು | ನೀರು ಉಳಿಸಲು ‘ಸೆಕ್ಷನ್ 144’ ಜಾರಿ

Date:

Advertisements

ತುಂಗಾಭದ್ರ ಜಲಾಶಯದಿಂದ ರಾಯಚೂರಿಗೆ ನೀರು ಹರಿಸಲು ರಾಯಚೂರು ಜಿಲ್ಲಾಡಳಿತವು ಕಾಲುವೆಗಳ ಆಸುಪಾಸಿನಲ್ಲಿ ಐಪಿಸಿ ಸೆಕ್ಷನ್ 144ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದೆ.

ಜೂನ್ ಮೂರನೇ ವಾರ ಕಳೆದರೂ ರಾಜ್ಯದಲ್ಲಿ ಮಾನ್ಸೂನ್ ಮಳೆಯ ಸುಳಿವಿಲ್ಲ. ರಾಜ್ಯದ ನದಿಗಳು ಬತ್ತುತ್ತಿದ್ದು, ಹಲವೆಡೆ ನೀರಿನ ಅಭಾವ ಸೃಷ್ಠಿಯಾಗಿದೆ. ಜಲಾಶಯಗಳಲ್ಲಿ ಇರುವ ನೀರನ್ನು ಕುಡಿಯುವ ಉದ್ದೇಶಕ್ಕಷ್ಟೇ ಬಳಸಲು ನಿರ್ಧರಿದ್ದು, ಕೃಷಿಗೆ ನೀರಿಗೆ ಪೂರೈಕೆ ಇಲ್ಲವೆಂದು ಹೇಳಲಾಗಿದೆ.

ಈ ಹಿನ್ನೆಲೆಯಲ್ಲಿ, ರಾಯಚೂರಿನ ಕುಡಿಯುವ ನೀರು ಪೂರೈಸಲು ತುಂಗಭದ್ರ ಎಡದಂಡೆ ಕಾಲುವೆಗೆ (ಟಿಎಲ್‌ಬಿಸಿ) ಜಲಾಶಯದಿಂದ ನೀರು ಹರಿಸಲಾಗುತ್ತಿದೆ. ಕಾಲುವೆ ಉದ್ದಕ್ಕೂ ನೀರನ್ನು ಬೇರೆಡೆಗೆ ತಿರುಗಿಸದಂತೆ ತಡೆಯುವ ಉದ್ದೇಶದಿಂದ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಜಿಷೇಧಾಜ್ಞೆಯು ಜೂನ್ 27ರವರೆಗೆ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಡಳಿತ ಹೇಳಿದೆ.

Advertisements

ತುಂಗಾಭದ್ರ ಅಣೆಕಟ್ಟೆಯಿಂದ ನೀರು ಪೂರೈಸುವುದರ ಜೊತೆಗೆ, ಕೃಷ್ಣಾ ನದಿಯಿಂದಲೂ ಐದು ದಿನಕ್ಕೊಮ್ಮೆ ನೀರು ಸರಬರಾಜು ಮಾಡಲಾಗುತ್ತಿದೆ ಎಂದು ತಿಳಿದುಬಂದಿದೆ.

“ತುಂಗಾಭದ್ರ ಅಣೆಕಟ್ಟಿನಿಂದ ಹರಿಸುವ ನೀರು ಟಿಎಲ್‌ಬಿಸಿ ಮೂಲಕ ಸುಮಾರು 130 ಮೈಲುಗಳವರೆಗೆ ಹರಿಯುತ್ತದೆ. ಮೊದಲು ಬಂಗಾರಪ್ಪ ಕೆರೆಯಲ್ಲಿರುವ ಬ್ಯಾಲೆನ್ಸಿಂಗ್ ಜಲಾಶಯದಲ್ಲಿ ನೀರು ಸಂಗ್ರಹಗೊಂಡು ನಂತರ ರಾಂಪುರ ಕೆರೆ ಜಲಾಶಯಕ್ಕೆ ಹರಿಸಲಾಗುವುದು. ನಂತರ ರಾಯಚೂರು ನಗರಕ್ಕೆ ಕುಡಿಯುವ ಉದ್ದೇಶಕ್ಕೆ ನೀರು ಪೂರೈಕೆ ಮಾಡಲಾಗುವುದು” ಎಂದು ಜಿಲ್ಲಾಡಳಿತ ಹೇಳಿದೆ.

“ಕಾಲುವೆಯುದ್ದಕ್ಕೂ ನಿಷೇಧಾಜ್ಞೆ ಜಾರಿಯಲ್ಲಿದೆ. ಗಸ್ತು ತಿರುಗಲು ಎಂಜಿನಿಯರ್‌ಗಳನ್ನು ನಿಯೋಜಿಸಲಾಗಿದೆ. ಆದರೂ, ಜನರು ಗೇಜ್‌ಗಳನ್ನು ಬಳಸಿ ನೀರು ತಿರುಗಿಸುವ ಸಾಧ್ಯತೆಗಳಿವೆ” ಎಂದು ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯ್ಕ ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X