ರಾಯಚೂರು |ಭೂಮಿ ಮಂಜೂರಾತಿ, ಹಕ್ಕುಪತ್ರ ವಿತರಣೆಗೆ ಒತ್ತಾಯಿಸಿ ಅನಿರ್ದಿಷ್ಟಾವಧಿ ಧರಣಿ

Date:

  • ʼಅರ್ಜಿ ಸಲ್ಲಿಸಿದ ಎಲ್ಲ ಬಡವರಿಗೆ ಭೂಮಿ ನೀಡಬೇಕುʼ
  • ʼಭೂಮಿ ವಸತಿ ನೀಡದಿದ್ದರೆ, ಮತದಾನ ಬಹಿಷ್ಕಾರʼ

ಸಾಗುವಳಿ ಮಾಡಿಕೊಂಡು ಅರ್ಜಿ ಸಲ್ಲಿಸಿರುವ ಎಲ್ಲರಿಗೂ ಭೂಮಿ ಮಂಜೂರಾತಿ ನೀಡಬೇಕು ಹಾಗೂ ಸರ್ಕಾರಿ ಜಾಗದಲ್ಲಿ ನಗರ ಪ್ರದೇಶವನ್ನೊಳಗೊಂಡಂತೆ ವಾಸಿಸುವವರಿಗೆ ಜಾಗಗಳಿಗೆ ಹಕ್ಕು ಪತ್ರ ನೀಡಬೇಕು ಎಂದು ಒತ್ತಾಯಿಸಿ ಭೂಮಿ ಮತ್ತು ವಸತಿ ಹೋರಾಟ ಸಮಿತಿ ಜಿಲ್ಲಾ ಘಟಕದ ಪದಾಧಿಕಾರಿಗಳು ಸೋಮವಾರ ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದ್ದಾರೆ.

“ರಾಯಚೂರು ಜಿಲ್ಲೆಯಲ್ಲಿ ಭೂಹೀನ ರೈತರು ಸರ್ಕಾರಿ, ಇನಾಮ, ಗೈರಾಣ(ಗೋಮಾಳ), ಪರಂಪೋಕ್, ಗ್ರಾಮ್‌ಠಾಣ, ಖಾರೀಜ ಖಾತಾ, ಅರಣ್ಯದ ಹೆಸರಿನಲ್ಲಿರುವ ಜಾಗಗಳಲ್ಲಿ ಅನೇಕ ವರ್ಷಗಳಿಂದಲೂ ಸಾಗುಳಿ ಮಾಡುತ್ತಿದ್ದಾರೆ. ಭೂಮಿಯ ಹಕ್ಕು ಪತ್ರಕ್ಕಾಗಿ ಕಾಯುತ್ತಿದ್ದಾರೆ. ಈ ಬಗ್ಗೆ ಸರ್ಕಾರ ನಿರ್ಲಕ್ಷ್ಯವಹಿಸಿದೆ. ಅರ್ಜಿ ಸಲ್ಲಿಸಿದ ಎಲ್ಲ ಬಡವರಿಗೆ ಭೂಮಿ ನೀಡಬೇಕು. ಭೂಮಿ ವಸತಿ ನೀಡದೇ ಇದ್ದರೆ, ಮತದಾನ ಮಾಡುವುದಿಲ್ಲ” ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.

“ಭೂಮಿಗಾಗಿ ಅರ್ಜಿ ಸಲ್ಲಿಸಿರುವ ಎಲ್ಲ ಭೂಮಿಗಳನ್ನು ಸರ್ವೆ, ಜಿಪಿಎಸ್ ಮಾಡಿದ ನಂತರ ಬಗರ್ ಹುಕುಂ ಸಮಿತಿ ಮುಂದೆ ಮಂಜೂರಾತಿಗಾಗಿ ಇಡಬೇಕು. ತಹಶೀಲ್ದಾರರು ಒಳಗೊಂಡಂತೆ ಭೂಮಿಯ ವಾಸ್ತವದ ಬಗ್ಗೆ ತಿಳಿದುಕೊಳ್ಳದೇ ಕಚೇರಿಯಿಂದಲೇ ಅಂದಾಜು ಮೇಲೆ ತೀರ್ಮಾನಿಸುತ್ತಿದ್ದಾರೆ. ಕೂಡಲೇ ಇದನ್ನು ಸರಿಪಡಿಸಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಬಳ್ಳಾರಿ | ಶಾಲಾ ಬಸ್‌ನಲ್ಲಿ ಬೆಂಕಿ; 50ಕ್ಕೂ ಹೆಚ್ಚು ಮಕ್ಕಳು ಪಾರು

“ಈ ಪ್ರದೇಶಲ್ಲಿ ಸಾಗುವಳಿ ಮಾಡುತ್ತಿರುವವರು ಹಾಗೂ ವಾಸವಿರುವವರನ್ನು ಒಕ್ಕಲೆಬ್ಬಿಸಬಾರದು. ಭೂಮಿ, ವಸತಿ ಸಮಸ್ಯೆ ಪರಿಹರಿಸಲು ಜಿಲ್ಲಾ ಮಟ್ಟದ ಹೋರಾಟಗಾರರನ್ನು ಒಳಗೊಂಡಂತೆ ಅಧಿಕಾರಿಗಳ ಸಭೆ ನಡೆಸಬೇಕು” ಎಂದು ಆಗ್ರಹಿಸಿದರು.

ಸಮಿತಿಯ ಸಂಚಾಲಕ ಮಾರೆಪ್ಪ ಹರವಿ, ಆಂಜನೇಯ ಕುರಬದೊಡ್ಡಿ, ಖಾಜಾ ಅಸ್ಲಂ ಅಹಮ್ಮದ್, ಹನುಮಂತ ಗುಂಜಹಳ್ಳಿ, ನರಸಿಂಗ ಬಂಗಾರಿ, ರಂಗರೆಡ್ಡಿ ಜೇಗರಕಲ್ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಡ್ಯ | ರಸ್ತೆಯಲ್ಲಿ ಸಂಚರಿಸುವ ಒಂಟಿ ಮಹಿಳೆಯರಿಗೆ ಲೈಂಗಿಕ ಕಿರುಕುಳ; ಆರೋಪಿ ಬಂಧನ

ಬೈಕ್​​ನಲ್ಲಿ ಬಂದು ರಸ್ತೆಯಲ್ಲಿ ಓಡಾಡುವ ಒಂಟಿ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ...

ಮೈತ್ರಿ ಕಗ್ಗಂಟು | ಪ್ರತಾಪ್ ಸಿಂಹಗೆ ಬಿಜೆಪಿ ಟಿಕೆಟ್ ಸಿಗುವುದೇ ಡೌಟು!

ಲೋಕಸಭಾ ಚುನಾವಣೆಗಾಗಿ ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿ ಮಾಡಿಕೊಂಡಿವೆ. ರಾಜ್ಯದಲ್ಲಿ...

ಕಲಬುರಗಿ | ಕೆಇಎ ಪರೀಕ್ಷಾ ಅಕ್ರಮ ಪ್ರಕರಣ; ಇಬ್ಬರು ಪ್ರಾಂಶುಪಾಲರ ಬಂಧನ

ಕಳೆದ ಅಕ್ಟೋಬರ್‌ 28 ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸಿದ...

ಧಾರವಾಡ | ಅನೀಮಿಯಾ ಮುಕ್ತ ಪೌಷ್ಠಿಕ ಕರ್ನಾಟಕ ಕಾರ್ಯಕ್ರಮಕ್ಕೆ ಚಾಲನೆ

ಅನೀಮಿಯಾ ಮುಕ್ತ ಪೌಷ್ಠಿಕ ಕರ್ನಾಟಕ ಕಾರ್ಯಕ್ರಮ ಮೂಲಕ ರಾಜ್ಯದಲ್ಲಿ ಮಕ್ಕಳು ಮತ್ತು...