ರಾಯಚೂರು | ಪ್ರವಾದಿ ಮಹಮ್ಮದ್‌ರಿಗೆ ಅವಹೇಳನ; ಶಾಸಕ ಯತ್ನಾಳ್‌ ಬಂಧನಕ್ಕೆ ಒತ್ತಾಯ

Date:

Advertisements

ಪ್ರವಾದಿ ಮಹಮ್ಮದ್‌ ಪೈಗಂಬರ್ ಅವರ ಕುರಿತು ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಕೂಡಲೇ ಬಂಧಿಸಿ, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ‌ (ಎಸ್‌ಡಿಪಿಐ) ಪಕ್ಷ ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ ಸಲ್ಲಿಸಿತು.

ಬಿಜೆಪಿ ಶಾಸಕ ಯತ್ನಾಳ್, ಮುಸ್ಲಿಂ ಸಮುದಾಯದ ವಿರುದ್ಧ ಅನೇಕ ಬಾರಿ ಅವಹೇಳನಕಾರಿ ಹೇಳಿಕೆ ನೀಡಿ, ಪ್ರವಾದಿ ಅವರನ್ನು ನಿಂದಿಸುತ್ತಿದ್ದಾರೆ. ನಾವು ಗೌರವಿಸುವ ಪ್ರವಾದಿ ಅವರ ಬಗ್ಗೆ ಕೀಳು ಮಟ್ಟದ ಹೇಳಿಕೆ ನೀಡಿ ಸಮುದಾಯದ ಭಾವನೆಗೆ ಧಕ್ಕೆ ತಂದಿದ್ದಾರೆ. ಯತ್ನಾಳ್ ವಿರುದ್ಧ ಪ್ರಕರಣಗಳು ದಾಖಲಾಗಿವೆ. ಕೂಡಲೇ ಅವರನ್ನು ಬಂಧಿಸಬೇಕೆಂದು ಒತ್ತಾಯಿಸಿದರು.

ಯತ್ನಾಳ ಅವರು ಒಂದು ಸಮುದಾಯದ ವಿರುದ್ಧ ಪದೇ ಪದೇ ನಾಲಿಗೆ ಹರಿಬಿಟ್ಟು ಕೋಮು ದ್ವೇಷಕ್ಕೆ ಪ್ರಚೋದನೆ ನೀಡುತ್ತಿದ್ದಾರೆ. ಏಪ್ರಿಲ್ 13 ರಂದು ಲಿಂಗಸುಗೂರು ತಾಲೂಕಿನಲ್ಲಿ ಬಜರಂಗದಳ ಹಾಗೂ ಶ್ರೀರಾಮಸೇನೆ ಆಯೋಜಿಸಿರುವ ಶ್ರೀ ರಾಮನವಮಿಗೆ ಆಗಮಿಸುತ್ತಿರುವ ಶಾಸಕ ಯತ್ನಾಳ ಹಾಗೂ ಪ್ರಮೋದ್ ಮುತಾಲಿಕ್ ಅವರ ಅನುಮತಿ ರದ್ದುಪಡಿಸಬೇಕು ಎಂದು ಆಗ್ರಹಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ರಾಯಚೂರು | ನಾಗ ಮೋಹನ್‌ದಾಸ್ ಏಕ ಸದಸ್ಯ ವಿಚಾರಣಾ ಸಮಿತಿ ಸಂವಿಧಾನ ಬಾಹಿರ: ಮಹೇಂದ್ರ ಕುಮಾರ್

ಶಾಂತಿ ಸೌಹಾರ್ದತೆಗೆ ಹೆಸರುವಾಗಿರುವ ಲಿಂಗಸುಗೂರು ತಾಲೂಕಿನಲ್ಲಿ ಪ್ರಚೋದನಾತ್ಮಕ ಹೇಳಿಕೆ ನೀಡಿ ಕೋಮುಗಲಭೆ ಏನಾದರೂ ಸಂಭವಿಸಿದಲ್ಲಿ ಪೊಲೀಸ್ ಇಲಾಖೆಯೇ ನೇರ ಹೊಣೆ ಎಂದು ಪಕ್ಷ ಎಚ್ಚರಿಕೆ ನೀಡಿದೆ.

ಈ ಸಂದರ್ಭದಲ್ಲಿ ಪಕ್ಷದ ಜಿಲ್ಲಾ ಮುಖಂಡ ತೌಸೀಫ್ ಅಹ್ಮದ್, ಸೈಯದ್ ಇರ್ಫಾನ್ ಮತ್ತು ಶೇಕ್ ದಾವೂದ್ ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X