ರಾಯಚೂರು | ಎದ್ದೇಳು ಕರ್ನಾಟಕ ಮತ್ತು ಕರ್ನಾಟಕ ರಾಜ್ಯ ರೈತ ಸಂಘದ ಸಹಯೋಗದಲ್ಲಿ ಸಂವಾದ ಕಾರ್ಯಕ್ರಮ

Date:

Advertisements

ಬಹುಸಂಖ್ಯಾತರಿರುವ ದೇಶದಲ್ಲಿ ನಾಲ್ಕೆದು ಜನ ಕಾರ್ಪೋರೇಟ್ ಜನರ ಕೂಲಿ, ಜೀತದಾಳನ್ನಾಗಿಸುವ ಶಕ್ತಿಯನ್ನು ಹಿಮ್ಮೆಟ್ಟಿಸಿ ವಾಸ್ತವ ವಿಷಯ ತಿಳಿದು ಮತ ನೀಡಬೇಕಾದ ಅವಶ್ಯಕತೆಯಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಹೇಳಿದರು.

ರಾಯಚೂರು ನಗರದ ಖಾಸಗಿ ಹೋಟೆಲ್‌ನಲ್ಲಿ ಎದ್ದೇಳು ಕರ್ನಾಟಕ ಮತ್ತು ಕರ್ನಾಟಕ ರಾಜ್ಯ ರೈತ ಸಂಘದ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಸಂವಾದ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.

“ದೇಶದಲ್ಲಿ ಡಾ ಬಿ ಆರ್ ಅಂಬೇಡ್ಕರ್‌ ನೀಡಿರುವ ಸಂವಿಧಾನ ಆಶಯಗಳು ಉಳಿಯಬೇಕಾದರೆ ಜನರ ಬದುಕು ರೂಪಿಸುವ ಆಧಾರ ಅವಶ್ಯಕವಾಗಿದೆಯೇ ಹೊರತು ಕಟ್ಟುಕಥೆಗಳಿಂದಲ್ಲ. ಎಲ್ಲ ಜಾತಿಯ ರೈತರು, ಮಹಿಳೆಯರು, ಕಾರ್ಮಿಕರು ಸೇರಿದಂತೆ ಶೇ.70ರಷ್ಟು ಬಹುಸಂಖ್ಯಾತರಿದ್ದಾರೆ. ಕೆಲವೇ ಕೆಲವರ ಹಿತಕ್ಕಾಗಿ ವ್ಯವಸ್ಥೆ ರೂಪಿತವಾಗಬಾರದು. ಕೇಂದ್ರ ಸರ್ಕಾರ ಶೇ.65ರಷ್ಟು ಮತ್ತು ರಾಜ್ಯ ಸರ್ಕಾರ ಶೇ.35ರಷ್ಟು ಅಧಿಕಾರ ವ್ಯಾಪ್ತಿಯನ್ನು ಹೊಂದಿದೆ. ಒಕ್ಕೂಟ ವ್ಯವಸ್ಥೆಯಲ್ಲಿ ನಂಬಿಕೆಯಿರುವ ಸರ್ಕಾರ ರಾಜ್ಯಗಳ ಸಮಾನ ಆಭಿವೃದ್ದಿ ದೃಷ್ಟಿಕೋನದಿಂದ ಕಾರ್ಯ ನಿರ್ವಹಿಸಬೇಕಾಗುತ್ತದೆ. ಆದರೆ ಅನುದಾನ ಹಂಚಿಕೆಯಲ್ಲಿ ಆಗುತ್ತಿರುವ ಅನ್ಯಾಯ ಧೋರಣೆ ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ” ಎಂದರು.

“ಕೇಂದ್ರದಿಂದ ರಾಜ್ಯಕ್ಕೆ ಬಿಡುಗಡೆಯಾಗಬೇಕಿರುವ ರಾಜ್ಯದ ಪಾಲಿನ ಅನುದಾನ ಹಂಚಿಕೆ ಅನ್ಯಾಯದ ಕುರಿತು ವಿವರಿಸಿ, ತೆರಿಗೆ ಹಣವೂ ಸೇರಿದಂತೆ ರಾಜಕ್ಕೆ ಸಾವಿರ ಕೋಟಿ ರೂ. ಕೇಂದ್ರ ಬಿಡುಗಡೆ ಮಾಡದೆ ಬಾಕಿ ಉಳಿಸಿಕೊಂಡಿದೆ. ಆದರೆ ಯಾವುದೇ ಹಣ ಬಾಕಿಯಿಲ್ಲವೆಂದು ಸುಳ್ಳು ಹೇಳುತ್ತಿದೆ” ಎಂದರು.

Advertisements
Bose Military School

“ಸಂವಿಧಾನ ಆಶಯದಂತೆ ಜನರಪರ ಕಲ್ಯಾಣ ಯೋಜನೆಗಳನ್ನು ಅನುಷ್ಠಾನಗೊಳ್ಳುಸುವ ಬಹುದೊಡ್ಡ ಜವಾಬ್ದಾರಿ ರಾಜ್ಯ ಸರ್ಕಾರದ ಮೇಲೆ ಅವಲಂಬಿತಗೊಂಡಿದೆ. ಆದರೆ ಸಂವಿಧಾನ ಬದ್ಧವಾಗಿ ಕೇಂದ್ರದಿಂದ ರಾಜ್ಯ ಸರ್ಕಾರಕ್ಕೆ ಬರಬೇಕಾದ ತೆರಿಗೆಯನ್ನು ಕೇಂದ್ರ ಬಿಜೆಪಿ ಸರ್ಕಾರ ರಾಜ್ಯಕ್ಕೆ ನೀಡದೆ ತೀವ್ರ ಅನ್ಯಾಯ ಮಾಡಿದೆ” ಎಂದು ವಾಗ್ದಾಳಿ ನಡೆಸಿದರು.

“ಕೇಂದ್ರ ಬಿಜೆಪಿ ಸರ್ಕಾರ ಸರ್ವಾಧಿಕಾರ ಧೋರಣೆ ಮುಂದುವರಿಸುತ್ತದೆ. ಅವರ ಕಪಿಮುಷ್ಟಿಯಾಗಿ ಕೆಲಸ ಮಾಡುವ ದುಃಸ್ಥಿತಿ ಎದುರಾಗಿದೆ. ದೇಶದ ಎಲ್ಲ ರಾಜ್ಯ ಸರ್ಕಾರಗಳು ಕೇಂದ್ರ ಬಿಜೆಪಿ ಸರ್ಕಾರದ ಹಿಡಿತದಲ್ಲಿ ಇರಬೇಕು. ಅದು ನರೇಂದ್ರ ಮೋದಿ ಅವರ ನಾಯಕತ್ವದ ಕೇಂದ್ರ ಬಿಜೆಪಿ ಸರ್ಕಾರದ ಉದ್ದೇಶ. ಕಳೆದ ವರ್ಷದ ಅವಧಿಯಲ್ಲಿ ದೇಶದ ಬಡವರು ಶ್ರಮಿಕರು ಮತ್ತು ದುಡಿಯುವ ವರ್ಗದ ಜನರ ಪಾಲು ಶ್ರೀಮಂತರ ಜೇಬಿಗೆ ಸೇರುತ್ತದೆ. ಅದರಲ್ಲಿ ರೈತರ ಪಾಲೂ ಇದೆ” ಎಂದರು.

“ಕೇಂದ್ರ ಬಿಜೆಪಿ ಸರ್ಕಾರ ರೈತರ ಮೇಲೆ ದಬ್ಬಾಳಿಕೆ ನಡೆಸಿ ಅವರ ಹಕ್ಕುಗಳನ್ನು ಕಸಿದುಕೊಳ್ಳುತ್ತಿದೆ. ಆದರೆ‌, ʼಕಾಂಗ್ರೆಸ್ ಪಕ್ಷದಲ್ಲಿ ಸಂಸ್ಕೃತಿ ಇಲ್ಲ. ರೈತರ ಹೋರಾಟಗಳನ್ನು ಬೆಂಬಲಿಸುತ್ತೇವೆ. ರೈತರಿಗೆ ನ್ಯಾಯ ಒದಗಿಸುವ ಕೆಲಸ ಮಾಡುತ್ತೇವೆʼ ಎಂದರು. ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಉಳಿಸುವ ಬಹುದೊಡ್ಡ ಸವಾಲು ಎದುರಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಭತ್ತದ ಗದ್ದೆಗೆ ಉರುಳಿದ ಕೆಎಸ್‌ಆರ್‌ಟಿಸಿ ಬಸ್;‌ 40ಕ್ಕೂ ಅಧಿಕ ಮಂದಿಗೆ ಗಾಯ

ಈ ಸಂದರ್ಭದಲ್ಲಿ ರೈತ ಸಂಘದ ರಾಜ್ಯ ಗೌರವಾಧ್ಯಕ್ಷ ಚಾಮರಸಮಾಲಿ ಪಾಟೀಲ್, ಪದ್ಮಾವತಿ, ರೈತ ಮುಖಂಡರು, ದಲಿತಪರ ಮುಖಂಡರು, ಎದ್ದೇಳು ಕರ್ನಾಟಕ ಸಂಘಟನೆಯ ಕುಮಾರ ಸಮತಳ, ಮಾರೆಪ್ಪ ಹರವಿ ಸೇರಿದಂತೆ ಇತರರು ಇದ್ದರು.

ವರದಿ : ಹಫೀಜುಲ್ಲ

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Advertisements
Advertisements
Advertisements

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಬಳ್ಳಾಪುರ | ʼಬಯಲು ಸೀಮೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಿʼ

ಸುಮಾರು ವರ್ಷಗಳಿಂದ ಬಯಲು ಸೀಮೆ ಜಿಲ್ಲೆಗಳಲ್ಲಿ ಶಾಶ್ವತ ಕುಡಿಯುವ ನೀರಿಗಾಗಿ ಹೋರಾಟ...

ಉಡುಪಿ | ಜಗತ್ತಿನಾದ್ಯಂತ ಪ್ರತೀ ವರ್ಷ ನೂರಾರು ಮುದ್ರಣ ಪತ್ರಿಕೆಗಳು ಮುಚ್ಚಿಕೊಳ್ಳುತ್ತಿವೆ – ರಾಜಾರಾಂ ತಲ್ಲೂರು

ಕೃತಕ ಬುದ್ದಿಮತ್ತೆ ಸುದ್ದಿಮನೆಯ ಒಳಗೆ ಪ್ರವೇಶಿಸಿದರೆ, ಭಾಷಾಂತರ, ಸುದ್ದಿ, ಸಾರಾಂಶ, ವಿವಿಧ...

ಹಾವೇರಿ | ತಹಶೀಲ್ದಾರ ಕಚೇರಿಗೆ ಜಿಲ್ಲಾಧಿಕಾರಿ ಭೇಟಿ

ಹಾವೇರಿ ಜಿಲ್ಲೆಯ ಹಿರೇಕೆರೂರ ತಾಲ್ಲೂಕು ತಹಶೀಲ್ದಾರ ಕಚೇರಿಗೆ ಮಂಗಳವಾರ ಜಿಲ್ಲಾಧಿಕಾರಿ ಡಾ....

Download Eedina App Android / iOS

X