ರಾಯಚೂರು | ಎಸ್‌ಇಪಿ/ಟಿಎಸ್‌ಪಿ ಅನುದಾನದಲ್ಲಿ ಅಕ್ರಮ; ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸೂಚನೆ

Date:

Advertisements

ರಾಯಚೂರು ನಗರಸಭೆಯ ನಗರೋತ್ಥಾನ ಮೂರನೇ ಹಂತದ ಯೋಜನೆಯಡಿ ಎಸ್‌ಇಪಿ ಮತ್ತು ಟಿಎಸ್‌ಪಿ ಯೋಜನೆಯ 3 ಕೋಟಿ 74 ಲಕ್ಷ ರೂ ಅನುದಾನವನ್ನು ಎಸ್‌ಸಿ ಸಮುದಾಯದ ಜನರೇ ಇಲ್ಲದಿರುವ ಕಡೆ ನಿರ್ವಹಿಸಿರುವ ಜನಪ್ರತಿನಿಧಿ ಮತ್ತು ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಮಾಜ ಕಲ್ಯಾಣ ಇಲಾಖೆ, ನಗರಾಭಿವೃದ್ದಿ ಇಲಾಖೆ ಸೂಚನೆ ನೀಡಿದೆ ಎಂದು ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ರಾಜುಪಟ್ಟಿ ಹೇಳಿದರು.

ರಾಯಚೂರು ನಗರದಲ್ಲಿ ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿ, “ಎಸ್‌ಇಪಿ ಮತ್ತು ಟಿಎಸ್‌ಪಿ ಅನುದಾನದ ನಿಯಮಗಳನ್ನು ಉಲ್ಲಂಘಿಸಿರುವ ಕುರಿತು ಜಾರಿ ನಿರ್ದೇಶನಾಲಯ ಮತ್ತು ಎಸ್‌ಇಪಿ ಮತ್ತು ಟಿಎಸ್‌ಪಿ ಕೋಶಕೆ ದೂರು ನೀಡಲಾಗಿತ್ತು. ದೂರಿನ ವಿಚಾರಣೆ ನಡೆಸಿ ತನಿಖಾ ವರದಿಯನ್ನು ಇಲಾಖೆಗೆ ಸಲ್ಲಿಸಲಾಗಿದೆ. ಅಲ್ಲದೇ ಸಮಾಜ ಕಲ್ಯಾಣ ಇಲಾಖೆ ಸಚಿವರ ಅಧ್ಯಕ್ಷತೆಯ ಸಮಿತಿಯೂ ಅಧಿಕಾರಿಗಳ ವಿರುದ್ದ ಶಿಸ್ತುಕ್ರಮಕ್ಕೆ ಸೂಚಿಸಿದೆ” ಎಂದರು.

“2016-17ನೇ ಸಾಲಿನ ಎಸ್‌ಇಪಿ ಅನುದಾನದಲ್ಲಿ ನಗರದ ಗೋಶಾಲಾದಿಂದ ಹಿಂದಿ ವರ್ಧಮಾನ್ ಶಾಲೆ ಮೂಲಕ ಜಮುನಾ ಹೋಟೆಲ್‌ವರೆಗೆ ರಸ್ತೆ ಹಾಗೂ ಬೀದಿದೀಪ ಅಳವಡಿಕೆಗೆ ₹80 ಲಕ್ಷ, ಸರಾಫ್ ಬಜಾರನಿಂದ ಮೋಚಿವಾಡದವರೆಗೆ ಬಿಟಿ ರಸ್ತೆಗೆ ₹80 ಲಕ್ಷ, ಎಂ.ಈರಣ್ಣನವರ ಮನೆಯಿಂದ ತೀನ್ ಕಂದೀಲ್‌ವರೆಗೆ ಬಿಟಿ ರಸ್ತೆ ನಿರ್ಮಾಣಕ್ಕೆ ₹70 ಲಕ್ಷ ಅನುದಾನ ನೀಡಲಾಗಿತ್ತು. ಅದೇ ರೀತಿ ಟಿಎಸ್‌ಪಿ ಅನುದಾನದಲ್ಲಿ ಮಂಗಳವಾರಪೇಟೆ ಸೂಗಮ್ಮ ಟೀಚರ್ ಮನೆಯಿಂದ ಡಾ.ಸಿನ್ಹಾ ಮನೆ, ಸತ್ಯನಾರಾಯಣ ಮನೆಯವರಿಗೆ ಸಿಸಿ ರಸ್ತೆ,‌ ಚರಂಡಿ ನಿರ್ಮಾಣಕ್ಕೆ ₹50 ಲಕ್ಷ, ಎಸ್‌ಆರ್‌ಎಸ್ ಹೋಟೆಲ್‌ನಿಂದ ಸಿಯಾತಲಾಬ್‌ವರೆಗೆ ₹60 ಲಕ್ಷ, ಎಸ್‌ಬಿಎಚ್ ಕಾಲೋನಿಯಿಂದ ಆಮತಲಾಬ್‌ವರೆಗೆ ರಾಜ್ ಕಾಲುವೆ ನಿರ್ಮಾಣಕ್ಕೆ ₹54 ಲಕ್ಷದ ಯೋಜನೆ ರೂಪಿಸಿದ್ದು, ನಿಯಮಗಳನ್ನ ಉಲ್ಲಂಘಿಸಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿತ್ತು” ಎಂದರು.

Advertisements

“ರಾಯಚೂರು ವಿಮಾನ ನಿಲ್ದಾಣ ಕಾಮಗಾರಿಗೆ ಎಸ್‌ಇಪಿ ಮತ್ತು ಟಿಎಸ್‌ಪಿ ಅನುದಾನದಲ್ಲಿ 28.94 ಕೋಟಿ ರೂ ಅನುದಾನ ಕೆಕೆಆರ್‌ಡಿಪಿ ನೀಡಿರುವುದನ್ನು ಆಕ್ಷೇಪಿಸಿ ದೂರು ನೀಡಲಾಗಿತ್ತು. ದೂರಿನ ಮೇರೆಗೆ ಕೆಕೆಆರ್‌ಡಿಬಿಯಿಂದ ನೀಡಲಾಗಿದ್ದ 28.94 ಕೋಟಿ ರೂ. ಅನುದಾನದಲ್ಲಿ ಬಿಡುಗಡೆಗೊಳಿಸಲಾಗಿದ್ದ 11.41 ಕೋಟಿ ರೂ. ಅನುದಾನವನ್ನು ಹಿಂಪಡೆಯಲಾಗಿದೆ. ಕಳೆದ ಐದಾರು ವರ್ಷಗಳಿಂದ ನಡೆದಿರುವ ನೀಡಿರುವ ದೂರುಗಳು ಇತ್ಯರ್ಥವಾಗಿದೆ. ಆದರೆ ವಿಳಂಬದಿಂದ ಎಸ್‌ಇಪಿ ಮತ್ತು ಟಿಎಸ್‌ಪಿ ಅನುದಾನ ಬಳಕೆಗೆ ಅಡ್ಡಿಯಾಗುವಂತಾಗಿದೆ. ಕೂಡಲೇ ಸಂಬಂಧಿಸಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಭ್ರೂಣಹತ್ಯೆ ಮಹಾ ಅಪರಾಧ, ಭ್ರೂಣಹತ್ಯೆ ನಿಲ್ಲಿಸಿ; ಸೀಮಂತ ಕಾರ್ಯಕ್ರಮದಲ್ಲಿ ಜಾಗೃತಿ

“ನಗರಸಭೆ ಪೌರಾಯುಕ್ತ ರಮೇಶ ನಾಯಕ, ಅಂದಿನ ನಗರಸಭೆ ಅಧ್ಯಕ್ಷ ಹೇಮಲತಾ ಬೂದೆಪ್ಪ ಹಾಗೂ ಅಭಿಯಂತರರುಗಳಾದ ಶರಣಪ್ಪ ಇತ್ಲಿ, ಕಾರ್ಯಪಾಲಕ ಅಭಿಯಂತರ ಮಲ್ಲಿಕಾರ್ಜುನ ಗೋಪಿಶೆಟ್ಟ, ಜಿಲ್ಲಾ ನಗರಾಭಿವೃದ್ದಿ ಕೋಶ ಹಿಂದಿನ ಯೋಜನಾಧಿಕಾರಿ ಈರಪ್ಪ ಬಿರಾದಾರ ಸೇರಿದಂತೆ ಎಂಟು ಮಂದಿ ವಿರುದ್ಧ ಆರೋಪ ಸಾಬೀತಾಗಿದ್ದು, ಕ್ರಮಕ್ಕೆ ಸಮಾಜ ಕಲ್ಯಾಣ ಇಲಾಖೆ ನಗರಾಭಿವೃದ್ದಿ ಇಲಾಖೆ ಸೂಚನೆ ನೀಡಿದೆ” ಎಂದು ಹೇಳಿದರು.

ಈ ಸಂರ್ಬದಲ್ಲಿ ಮಹಿಬೂಬ್, ಮೌನೇಶ ಕೋರಿ, ಗಂಗಾಧರ, ಪರಶುರಾಮ, ಜಗದೀಶ, ಬಸವರಾಜ ಗಟ್ಟು ಇದ್ದರು.

ವರದಿ : ಹಫೀಜುಲ್ಲ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X