ರಾಯಚೂರು | ಕಲ್ಲೂರು ಗ್ರಾಮಕ್ಕೆ ದಾಳಿ ನಡೆಸಿ ಮೇಕೆ ತಿಂದ ಚಿರತೆ; ಜನರಲ್ಲಿ ಆತಂಕ

Date:

Advertisements

ರಾಯಚೂರು ಜಿಲ್ಲೆ ಸಿರವಾರ ತಾಲೂಕಿನ ಕಲ್ಲೂರು ಗ್ರಾಮಕ್ಕೆ ದಾಳಿ ನಡೆಸಿರುವ ಚಿರತೆಗಳು, ಎರಡು ಮೇಕೆಗಳನ್ನು ತಿಂದು ಹಾಕಿರುವ ಘಟನೆ ನಡೆದಿದೆಎ. ಈ ಬೆಳವಣಿಗೆಯಿಂದ ಗ್ರಾಮಸ್ಥರಲ್ಲಿ ಭೀತಿ ಉಂಟಾಗಿದ್ದು, ಗ್ರಾಮದಲ್ಲಿ ರಾತ್ರಿ ವೇಳೆ ಓಡಾಡಲು ಭಯಪಡುತ್ತಿದ್ದಾರೆ.

ಗ್ರಾಮದ ಬಂಡಿ ಮಹಮ್ಮದ್ ಎಂಬುವರಿಗೆ ಸೇರಿ ಎರಡು ಮೇಕೆಗಳನ್ನು ದಾಳಿ ನಡೆಸಿದ ವೇಳೆ ಚಿರತೆ ತಿಂದು ಹಾಕಿದೆ.

ದೊಡ್ಡಿಯಲ್ಲಿ ಮೇಕೆಗಳಿದ್ದು ಎರಡು ಚಿರತೆಗಳು ದೊಡ್ಡಿ ಮೇಲೆ ದಾಳಿ ನಡೆಸಿ ಮೇಕೆ ತಿಂದು ಹಾಕಿವೆ. ಮೇಕೆಗಳ ಚೀರಾಟದಿಂದ ಮಾಲೀಕರು ಸ್ಥಳಕ್ಕೆ ತೆರಳಿದಾಗ ಎರಡು ಚಿರತೆಗಳು ಓಡಿಹೋಗಿವೆ ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ.

Advertisements

ಘಟನೆ ಕುರಿತು ಮಾಹಿತಿ ಪಡೆದಿರುವ ಅರಣ್ಯ ಇಲಾಖೆ ಅಧಿಕಾರಿಗಳು ಈಗಾಗಲೇ ಚಿರತೆಗಳನ್ನು ಬಲೆಗೆ ಬೀಳಿಸಲು ಬೋನು ಅಳವಡಿಸಿದ್ದಾರೆ. ಚಿರತೆಯ ಹೆಜ್ಜೆ ಗುರುತು ಸಹ ಅರಣ್ಯ ಇಲಾಖೆ ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ಕೂಡಲೇ ಚಿರತೆಯನ್ನು ಪತ್ತೆ ಮಾಡಿ ರಕ್ಷಿಸಬೇಕೆಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ.

ದೇವದುರ್ಗ ತಾಲೂಕಿನ ಕಮದಾಳ ಗ್ರಾಮದಲ್ಲಿ ಇತ್ತೀಚಿಗೆ ಚಿರತೆ ಪತ್ತೆಯಾಗಿತ್ತು, ಗ್ರಾಮಸ್ಥರು ಆತಂಕದಿಂದ ಕೊಂದು ಹಾಕಿದ್ದರು. ಈಗ ಕಲ್ಲೂರು ಗ್ರಾಮದಲ್ಲಿ ಎರಡು ಚಿರತೆಗಳು ಇರುವುದು ಪತ್ತೆಯಾಗಿದೆ. ಅರಣ್ಯ ಇಲಾಖೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ವರದಿ : ಹಫೀಜುಲ್ಲ

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

Download Eedina App Android / iOS

X