ರಾಯಚೂರು | ಹಾಸ್ಟೆಲ್‌ ಸಮಸ್ಯೆ ಪರಿಹರಿಸುವಂತೆ ಕೆವಿಎಸ್‌ ಆಗ್ರಹ

Date:

Advertisements

ಸಿಂಧನೂರಿನ ಶಿವಜ್ಯೋತಿ ನಗರದಲ್ಲಿರುವ ಅಲ್ಪಸಂಖ್ಯಾತರ ಮೆಟ್ರಿಕ್‌ ನಂತರದ ವಿದ್ಯಾರ್ಥಿನಿಯರ ಹಾಸ್ಟೆಲ್‌ನಲ್ಲಿ ಹಲವಾರು ಸಮಸ್ಯೆಗಳಿವೆ. ಇದರಿಂದ ವಿದ್ಯಾರ್ಥಿನಿಯರ ವಿದ್ಯಾಭ್ಯಾಸಕ್ಕೆ ತೊಂದರೆಯಾಗುತ್ತಿದೆ. ಹಾಸ್ಟೆಲ್‌ ಸಮಸ್ಯೆಗಳನ್ನು ಕೂಡಲೇ ಪರಿಹರಿಸಬೇಕು ಎಂದು ಕರ್ನಾಟಕ ವಿಧ್ಯಾರ್ಥಿ ಸಂಘಟನೆ (ಕೆವಿಎಸ್‌) ಕಾರ್ಯಕರ್ತರು ಒತ್ತಾಯಿಸಿದ್ದಾರೆ.

ಸಿಂಧನೂರು ತಹಶೀಲ್ದಾರ್‌ ಮತ್ತು ಅಲ್ಪಸಂಖ್ಯಾತರ ಇಲಾಖೆ ಅಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ ಕಾರ್ಯಕರ್ತರು, “ಹಾಸ್ಟೆಲ್ ವಾರ್ಡ್‌ನ್ ಬೇಜವ್ದಾರಿ ಕಾರ್ಯನಿರ್ವಹಣೆ, ಮೂಲ ಸೌಕರ್ಯಗಳ ಕೊರತೆ ಹಾಗೂ ಅನಗತ್ಯ ಕಿರುಕುಳದಿಂದ ವಿದ್ಯಾರ್ಥಿನಿಯರು ಬೇಸತ್ತಿದ್ದಾರೆ. ಇದು ಅವರ ವಿದ್ಯಾಭ್ಯಾಸದ ಮೇಲೆ ಮತ್ತು ಪರೀಕ್ಷಾ ಫಲಿತಾಂಶದ ಮೇಲೆ ವ್ಯತಿರಿಕ್ತಿ ಪರಿಣಾಮ ಬೀರುತ್ತಿದೆ” ಎಂದು ಹೇಳಿದ್ದಾರೆ.

“ಹಾಸ್ಟೆಲ್‌ ಸಮಸ್ಯೆಗಳ ಕುರಿತು ಹಲವು ಬಾರಿ ಅಧಿಕಾರಿಗಳಿಗೆ ಮನವಿ ಮಾಡಿದರೂ, ಯಾವುದೇ ಪ್ರಯೋಜನವಾಗಿಲ್ಲ. ಸಮಸ್ಯೆಗಳ ಕಾರಣದಿಂದ ಹಾಸ್ಟೆಲ್‌ನ ವಿದ್ಯಾರ್ಥಿನಿಯರು ದಿನವೂ ಯಾತನೆ ಅನುಭವಿಸುವಂತಾಗಿದೆ. ದಿನದಿಂದ ದಿನಕ್ಕೆ ಪರಿಸ್ಥಿತಿಗೆ ಬಿಗಡಾಯಿಸುತ್ತಿದೆ. ಸಮಸ್ಯೆಗಳು ವಿಕೋಪಕ್ಕೆ ಹೋಗಿ ಪರಿಸ್ಥಿತಿ ಸಂಪೂರ್ಣ ಹದಗೆಡುವ ಮುನ್ನವೇ ಅಧಿಕಾರಿಗಳು ಎಚ್ಚೆತ್ತುಕೊಂಡು ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

Advertisements

“ಹದಿನೈದು ದಿನಗಳಲ್ಲಿ ಹಾಸ್ಟೆಲ್‌ ಸಮಸ್ಯೆಗಳನ್ನು ಪರಿಹರಿಸದಿದ್ದರೆ, ತಾಲೂಕು ಕಚೇರಿ ಮುಂದೆ ಧರಣಿ ನಡೆಸಲಾಗುತ್ತದೆ” ಎಂದು ಎಚ್ಚರಿಕೆ ನೀಡಿದ್ದಾರೆ.

ಹಾಸ್ಟೆಲ್‌ ವಿದ್ಯಾರ್ಥಿನಿಯರ ಬೇಡಿಕೆಗಳು

  1. ಹಾಸ್ಟೆಲ್‌ ವಾರ್ಡನ್ ಅಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿದ್ದು, ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ಹಾಗಾಗಿ ಕೂಡಲೇ ಅವರನ್ನು ಬೇರೆಡೆ ವರ್ಗಾವಣೆ ಮಾಡಬೇಕು.
  2. ರೇಷನ್ ಕೊರತೆ, ಊಟ ತಯಾರಿಕೆಯಲ್ಲಿ ಅಶುಚಿತ್ವ, ಗುಣಮಟ್ಟದ ತರಕಾರಿ ಬಳಸದೇ ಕೊಳೆತ ತರಕಾರಿ ಬಳಸಿ ಅಡುಗೆ ತಯಾರಿಸಲಾಗುತ್ತಿದೆ. ಅವ್ಯವಸ್ಥೆಯನ್ನು ಪರಿಹರಿಸಿ, ಗುಣಮಟ್ಟದ ಆಹಾರ ನೀಡಬೇಕು.
  3. ಗ್ರಂಥಾಲಯದಲ್ಲಿನ ಪುಸ್ತಕಗಳ ಕೊರತೆ ಪರಿಹರಿಸಬೇಕು.
  4. ಕ್ರೀಡಾ ಸಾಮಗ್ರಿಗಳನ್ನು ಒದಗಿಸಬೇಕು.
  5. ಹಾಸ್ಟೆಲ್‌ನ ವಾರ್ಡ್‌ನ್‌ ವಿದ್ಯಾರ್ಥಿನಿಯರ ಮೇಲೆ ಅನುಚಿತವಾಗಿ ವರ್ತಿಸುವುದಲ್ಲದೇ ಮಾನಸಿಕ ಕಿರುಕುಳ ನೀಡುತ್ತಿದ್ದು, ಅವರ ವಿರುದ್ಧ ಶಿಸ್ತುಕ್ರಮ ಜರುಗಿಸಬೇಕು.

ಹಕ್ಕೊತ್ತಾಯ ಪತ್ರ ಸಲ್ಲಿಸುವ ವೇಳೆ ಕರ್ನಾಟಕ ವಿಧ್ಯಾರ್ಥಿ ಸಂಘಟನೆ ರಾಜ್ಯ ಮುಖಂಡ ಗುರುಬಸವ ಬರಗೂರು, ತಾಲ್ಲೂಕು ಮುಖಂಡ ಚಾಂದ್ ಪಾಶ, ಸಮದ್ ಚೌದ್ರಿ, ಹಾಗೂ ವಿಧ್ಯಾರ್ಥಿಗಳು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X