ರಾಯಚೂರು | ಟೋಲ್ ಗೇಟ್ ನಿರ್ಮಿಸಿ ವಸೂಲಿಗೆ ಮುಂದಾದರೆ ಕಾನೂನು ಹೋರಾಟ: ಶಾಸಕಿ ಕರೆಮ್ಮ ನಾಯಕ್

Date:

Advertisements

ತಿಂಥಣಿ ಬ್ರಿಡ್ಜ್‌ನಿಂದ ರಾಯಚೂರು ಜಿಲ್ಲೆಗೆ ಹೋಗುವ ಮಾರ್ಗದಲ್ಲಿ ಟೋಲ್ ಗೇಟ್‌ಗಳ ನಿರ್ಮಾಣ ಕಾಮಗಾರಿ ನಡೆಯುತ್ತಿದೆ. ಇದೇ ನೆಪದಲ್ಲಿ ಕರವಸೂಲಿಗೆ ಮುಂದಾದರೆ ಕಾನೂನು ಹೋರಾಟ ಮಾಡಬೇಕಾಗುತ್ತದೆ ಎಂದು ಶಾಸಕಿ ಕರೆಮ್ಮ ಜಿ. ನಾಯಕ ಎಚ್ಚರಿಕೆ ನೀಡಿದರು.

ಮಾಧ್ಯಮಗಳ ಜೊತೆ ಮಾತನಾಡಿ, “ಕಳೆದ 2 ವರ್ಷಗಳಿಂದ ಟೋಲ್ ಗೇಟ್ ನಿರ್ಮಾಣಕ್ಕೆ ಮುಂದಾದಾಗ ಸಂಬಂಧಪಟ್ಟ ಗುತ್ತಿಗೆದಾರರನ್ನು ಟೋಲ್ ಗೇಟ್ ನಿರ್ಮಿಸದಿರಲು ಒತ್ತಡ ಹೇರಲಾಗಿತ್ತು. ಈಗ ಪುನಃ ಟೋಲ್ ಗೇಟ್ ನಿರ್ಮಾಣಕ್ಕೆ ಮುಂದಾಗಿ ಬಡವರ ಹಣ ಲೂಟಿ ಹೊಡೆಯುವುದಕ್ಕೆ ದಾರಿ ಕಂಡುಕೊಳ್ಳಲಾಗುತ್ತಿದೆ. ಇದರ ಹಿಂದೆ ಪ್ರಬಲ ಶಕ್ತಿಗಳ ಕೈವಾಡವಿದೆ” ಎಂದು ಆರೋಪಿಸಿದರು.

“ಈ ಮಾರ್ಗದಲ್ಲಿ ಭಾರಿ ವಾಹನಗಳಾಗಲೀ, ವಾಣಿಜ್ಯಕ್ಕೆ ಸಂಬಂಧಿಸಿದ ವಾಹನಗಳಾಗಲೀ ಹೆಚ್ಚಿನ ಸಂಖ್ಯೆಯಲ್ಲಿ ಸಂಚಾರ ನಡೆಸುವುದಿಲ್ಲ. ತಾಲೂಕಿನ ಬಡಜನರು, ಕೂಲಿಕಾರರು, ಮಧ್ಯಮವರ್ಗದವರೇ ಹೆಚ್ಚಾಗಿ ಓಡಾಡುವ ಈ ರಸ್ತೆಯಲ್ಲಿ ವಿನಾಕಾರಣ ಟೋಲ್ ಗೇಟ್ ನಿರ್ಮಿಸಿ ಲೂಟಿ ಹೊಡೆಯುವ ಹುನ್ನಾರ ನಡೆದಿದೆ” ಎಂದು ಬೇಸರ ವ್ಯಕ್ತಪಡಿಸಿದರು.

“ಕ್ಷೇತ್ರದ ಜನತೆ ಯಾವುದೇ ಕಾರಣಕ್ಕೂ ಆತಂಕಕ್ಕೆ ಒಳಗಾಗಬಾರದು. ಈ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರು ಯಾವುದೇ ಕಾರಣಕ್ಕೂ ಹಣ ಪಾವತಿಸಬಾರದು. ಒತ್ತಡದಿಂದ ವಸೂಲಿಗೆ ಮುಂದಾದರೆ ಕಾನೂನು ಹೋರಾಟ ನಡೆಸಲಾಗುವುದು. 2020ರಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ರಸ್ತೆ ಕಾಮಗಾರಿ ನಡೆದಿತ್ತು. ಟೋಲ್ ಗೇಟ್‌ಗಳ ನಿರ್ಮಾಣದ ಕುರಿತು ಚರ್ಚಿಸಬೇಕಾಗಿತ್ತು. ರಸ್ತೆ ನಿರ್ಮಾಣ ವೇಳೆ ಯಾವುದೇ ಟೋಲ್ ಗೇಟ್ ನಿಯಮವಿಲ್ಲದೆ ಇದ್ದಕ್ಕಿದ್ದಂತೆ ನಿರ್ಮಾಣಕ್ಕೆ ಮುಂದಾಗಿದ್ದು ಅಕ್ಷಮ್ಯ ಅಪರಾಧ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ?: ರಾಯಚೂರು | ನಿಯಮಾನುಸಾರ ಮರಳು ಕೇಂದ್ರ ಸ್ಥಾಪನೆಗೆ ಸಿಐಟಿಯು ಒತ್ತಾಯ

“ನಾಲ್ಕೈದು ವರ್ಷಗಳು ಕಳೆದ ಮೇಲೆ ಇದೀಗ ಟೋಲ್ ಗೇಟ್‌ಗಳ ನಿರ್ಮಾಣ ಕಾರ್ಯ ನಡೆದಿದೆ. ಸಂಬಂಧ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಟೋಲ್ ಗೇಟ್ ಕಾಮಗಾರಿ ನಿಲ್ಲಿಸಲಾಗುವುದು” ಎಂದು ತಿಳಿಸಿದರು.

Advertisements
ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X