ರಾಯಚೂರು | ಲಾರಿ ಡಿಕ್ಕಿ; ಇಬ್ಬರ ಸಾವು

Date:

Advertisements

ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ರಾಯಚೂರು ನಗರದ ಹೊರವಲಯದ ವೈಟಿಪಿಎಸ್ ಬಳಿ ನಡೆದಿದೆ.

ರಾಯಚೂರು-ಹೈದ್ರಬಾದ್ ಹೆದ್ದಾರಿಯ ವೈಟಿಪಿಎಸ್ ಬಳಿ ಇಂದು ಮದ್ಯಾಹ್ನ ಲಾರಿ ಹಿಂದಿನಿಂದ ಬಂದು ಬೈಕ್ ಗೆ ಡಿಕ್ಕಿ ಹೊಡೆದಿದೆ.

ಜನಾರ್ಧನ್ (35) , ಚನ್ನಬಸವ ಪಾಟೀಲ್ (26) ಸ್ಥಳದಲ್ಲಿ ಮೃತಪಟ್ಟ ಯುವಕರು ಎಂದು ಗುರುತಿಸಲಾಗಿದೆ.

Advertisements

ಮೃತ ಜನಾರ್ಧನ್ ಮಡಿವಾಳ ಚಿಕ್ಕಸೂಗೂರಿನಲ್ಲಿ ವಾಸಿಸುತ್ತಿದ್ದ ಆಂಧ್ರಪ್ರದೇಶ ಮೂಲದವರು ಎನ್ನಲಾಗಿದೆ. ಚನ್ನಬಸವ ಪಾಟೀಲ್ ಲಿಂಗಸಗೂರು ಮೂಲದ ನಿವಾಸಿ ಎಂದು ತಿಳಿದುಬಂದಿದೆ.

ಚಿಕ್ಕಸೂಗೂರಿನಿಂದ ರಾಯಚೂರು ನಗರಕ್ಕೆ ಬರುತ್ತಿದ್ದ ದ್ವಿಚಕ್ರ ವಾಹನಕ್ಕೆ ಶಕ್ತಿನಗರದಿಂದ ರಾಯಚೂರಿಗೆ ಬರುತ್ತಿದ್ದ ಲಾರಿ ಹಿಂದಿನಿಂದ ಬಂದು ಬೈಕ್‌ಗೆ ಡಿಕ್ಕಿ ಹೊಡೆದಿದ್ದು ಬೈಕ್‌ನಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ.

ರಾಯಚೂರು ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರಿಮ್ಸ್ ಅಸ್ಪತ್ರೆಗೆ ಸಾಗಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X