ರಾಯಚೂರು | ಮಾನ್ವಿ ಜಲಸಂಪನ್ಮೂಲ ಕಚೇರಿಯಲ್ಲಿ 22 ಎಂಜಿನಿಯರ್ ಹುದ್ದೆ ಖಾಲಿ

Date:

Advertisements

ರಾಯಚೂರು ಜಿಲ್ಲೆಯ ಮಾನ್ವಿಯಲ್ಲಿರುವ ಜಲಸಂಪನ್ಮೂಲ ಇಲಾಖೆಯ ಉಪ ವಿಭಾಗ ಕಚೇರಿಗಳಲ್ಲಿ 22 ಎಂಜಿನಿಯರ್ ಹುದ್ದೆಗಳು ಖಾಲಿ ಉಳಿದಿವೆ. ಈವರೆಗೆ ಆ ಹುದ್ದೆಗಳಿಗೆ ನೇಮಕಾತಿ ನಡೆದಿಲ್ಲ. ಪರಿಣಾಮ ತಾಲೂಕಿನಲ್ಲಿ ಕಾಲುವೆಗಳಿಗೆ ಸಮರ್ಪಕವಾಗಿ ನೀರು ಹರಿಸಲಾಗುತ್ತಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲೂಕಿನಲ್ಲಿರುವ ತುಂಗಭದ್ರ ಜಲಾಶಯದಿಂದ ತಂಗಭದ್ರ ಎಡದಂಡೆ ನಾಲಾ ಯೋಜನೆ ಮೂಲಕ ಮಾನ್ವಿ ಮತ್ತು ಸಿರವಾರವರೆಗೆ ಕೃಷಿ ಭೂಮಿಗಳಿಗೆ ನಾಲೆಗಳ ಮೂಲಕ ನೀರು ಹರಿಸಲಾಗುತ್ತದೆ. ನಾಲಾ ಯೋಜನೆಯ ಕೊನೆಯ ಭಾಗವು (70-104 ಕಿ.ಮೀ) ಜಲಸಂಪನ್ಮೂಲ ಇಲಾಖೆಯ ಸಿರವಾರ ಮುಖ್ಯ ವಿಭಾಗಕ್ಕೆ ಒಳಪಡುತ್ತದೆ. ಈ ವಿಭಾಗವು ಸಿರವಾರ ಮತ್ತು ಮಾನ್ವಿ ತಾಲೂಕಿನ 20 ವಿತರಣಾ ನಾಲೆಗಳಿಗೆ ನೀರು ಹರಿಸುವುದನ್ನು ನಿರ್ವಹಿಸುವ ಜವಬ್ದಾರಿ ಹೊಂದಿದೆ.

ಆದರೆ, ಮಾನ್ವಿ ಉಪ ವಿಭಾಗದ ಕಚೇರಿಯಲ್ಲಿ 22 ಎಂಜಿನಿಯರ್‌ ಹುದ್ದೆಗಳು ಖಾಲಿ ಇರುವುದರಿಂದ ತಾಲೂಕಿನ ಕೃಷಿ ಭೂಮಿಗೆ ನೀರು ಸಿಗದಂತಾಗಿದೆ. ಹಲವು ನಾಲೆಗಳು ಬತ್ತಿ ಹೋಗಿವೆ. ಜೊತೆಗೆ, ಸಿರವಾರ ಕಚೇರಿಯಲ್ಲಿಯೂ ಐದು ಎಂಜಿನಿಯರ್‌ ಹುದ್ದೆಗಳು ಖಾಲಿ ಇವೆ.

Advertisements

ಈ ಸುದ್ದಿ ಓದಿದ್ದೀರಾ?: ಸಿಎಂ ಸಿದ್ದರಾಮಯ್ಯಗೆ ‘ದಲಿತ ರತ್ನ’ ಪ್ರಶಸ್ತಿ

ತುಂಗಭದ್ರ ನಾಲಾ ಯೋಜನೆಯ ವ್ಯಾಪ್ತಿಯಲ್ಲಿ ನಾಲೆಗಳ ಆರಂಭದ ಭಾಗದಲ್ಲಿ ಹಲವಾರು ಪ್ರದೇಶಗಳು ಅನಧಿಕೃತವಾಗಿ ನೀರಾವರಿ ಸೌಲಭ್ಯಗಳನ್ನು ಪಡೆದುಕೊಳ್ಳುತ್ತಿವೆ. ಹೀಗಾಗಿ, ನಾಲೆಯ ಕೊನೆಯ ಭಾಗಕ್ಕೆ ನೀರು ಹರಿದುಬರುತ್ತಿಲ್ಲ. ಮಾನ್ವಿ ತಾಲೂಕಿನ ನಾಲೆಗಳು ನೀರು ಕಂಡು ವರ್ಷಗಳೇ ಕಳೆದಿವೆ. ಸರ್ಕಾರ ಮತ್ತು ಸ್ಥಳೀಯ ಶಾಸಕರು ಸಮರ್ಪಕ ನೀರಿನ ಹರಿವಿಗೆ ಕ್ರಮ ಕೈಗೊಳ್ಳಬೇಕು. ಖಾಲಿ ಇರುವ ಎಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಬೇಕು” ಎಂದು ಸ್ಥಳೀಯ ರೈತರು ಒತ್ತಾಯಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X