ರಾಯಚೂರು ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ಕಾಮಗಾರಿ, ಹೊಸ ಕೈಗಾರಿಕೆಗಳಿಗೆ ಭೂ ಲಭ್ಯತೆ ಹಾಗೂ ಕೈಗಾರಿಕಾ ಸಂಬಂಧಿಸಿದ ಸಮಸ್ಯೆಗಳ ಕುರಿತು ಜಿಲ್ಲೆಯ ಸಣ್ಣ ನೀರಾವರಿ ಹಾಗೂ ವಿಜ್ಞಾನ ತಂತ್ರಜ್ಞಾನ ಸಚಿವ ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕೆಯ ಸಚಿವ ಎಂ ಬಿ ಪಾಟೀಲ್ ಅಧ್ಯಕ್ಷತೆಯಲ್ಲಿ ಜನವರಿ 16ರಂದು ಬೆಂಗಳೂರು ನಗರದ ವಿಧಾನಸೌಧದ 3ನೇ ಮಹಡಿಯಲ್ಲಿರುವ ಸಭೆ ನಡೆಯಿತು.
ವಿಮಾನ ನಿಲ್ದಾಣದ ಅಭಿವೃದ್ಧಿ, ಹೊಸ ಕೈಗಾರಿಕೆಗಳಿಗೆ ಭೂಸ್ವಾಧೀನ ಮತ್ತು ಕೈಗಾರಿಕಾ ವಿನ್ಯಾಸದಲ್ಲಿ ವಸತಿಗಳ ಆನ್ಲೈನ್ ಮಾರಾಟ ಸಮಸ್ಯೆ ಬಗೆಹರಿಸಲು ಮುಂದಾಗಿ ತ್ವರಿತಗತಿಯಲ್ಲಿ ನಿರ್ದೇಶನ ನೀಡಲಾಯಿತು.
ಈ ಸುದ್ದಿ ಓದಿದ್ದೀರಾ? ರಾಯಚೂರು | ಧೂಳಿನ ಸಮಸ್ಯೆ ನಿವಾರಣೆಗೆ ಜಯ ಕರವೇ ಮನವಿ
ಸಭೆಯಲ್ಲಿ ಜಿಲ್ಲಾಧಿಕಾರಿ ನಿತೇಶ್ ಕೆ, ರಾಯಚೂರು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿಯ ಅಧ್ಯಕ್ಷ, ಎಸ್ ಕಮಲ್ ಕುಮಾರ್, ಜಂಟಿ ಕಾರ್ಯದರ್ಶಿ ಲಕ್ಷ್ಮಿ ರೆಡ್ಡಿ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಬಸವರಾಜ್, ಮುಖಂಡರಾದ ರವಿ ಬೋಸರಾಜು, ಸಾಜೀದ್ ಸಮೀರ್, ಮಹಮ್ಮದ್ ಶಾಲಂ ಇದ್ದರು.
