ರಾಯಚೂರು | ಎಸ್‌ಸಿ ಎಸ್‌ಟಿ ಹಣ ದುರ್ಬಳಕೆ; ಸರ್ಕಾರದ ವಿರುದ್ಧ ಜೆಡಿಎಸ್ ಪ್ರತಿಭಟನೆ

Date:

Advertisements

ರಾಜ್ಯ ಸರ್ಕಾರದ ಆಡಳಿತ ವೈಫಲ್ಯ ಹಾಗೂ ಎಸ್‌ಸಿಪಿ, ಟಿಎಸ್‌ಪಿ ಅನುದಾನ ದುರ್ಬಳಕೆ ಖಂಡಿಸಿ ಜೆಡಿಎಸ್ ರಾಯಚೂರು ತಾಲೂಕು ಘಟಕದ ವತಿಯಿಂದ ನಿನ್ನೆ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಪಟ್ಟಣದ ಬಸವ ವೃತ್ತದಲ್ಲಿ ಜಮಾಯಿಸಿದ ಪಕ್ಷದ ನೂರಾರು ಕಾರ್ಯಕರ್ತರು ರಾಜ್ಯ ಸರ್ಕಾರದ ಧೋರಣೆಗಳನ್ನು ಖಂಡಿಸಿ ಧರಣಿ ನಡೆಸಿದರು.

ಪ್ರತಿಭಟನೆ ಉದ್ದೇಶಿಸಿ ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ಮಾತನಾಡಿ, “ಗ್ಯಾರಂಟಿ ಯೋಜನೆಗಳ ಭರವಸೆ ನೀಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಜನಸಾಮಾನ್ಯರ ಹಿತ ಕಾಯುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಗ್ಯಾರಂಟಿ ಯೋಜನೆಗಳಿಗೆ ಎಸ್‌ಸಿಪಿ, ಟಿಎಸ್‌ಪಿ ಅನುದಾನ ಬಳಸುವ ಮೂಲಕ ದಲಿತ ವಿರೋಧಿ ನೀತಿ ಅನುಸರಿಸುತ್ತಿದೆ” ಎಂದು ದೂರಿದರು.

ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ ಹಾಗೂ ಸ್ಥಳೀಯರಾದ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಬೋಸರಾಜು ಅವರು ಜಿಲ್ಲೆಯ ಅಭಿವೃದ್ಧಿ ಕಡೆಗಣಿಸಿದ್ದಾರೆ. ಸಚಿವ ಬೋಸರಾಜು ಅಕ್ರಮವಾಗಿ ಮರಳು ಹಾಗೂ ಅಕ್ಕಿ ಸಾಗಣೆ ಮಾಡುವ ದಂಧೆಕೋರರು, ಗೂಂಡಾಗಿರಿ‌ ಮಾಡುವವರಿಗೆ ಬೆಂಬಲ ನೀಡುತ್ತಿದ್ದಾರೆ” ಎಂದು ವಾಗ್ದಾಳಿ ನಡೆಸಿದರು.

“ತುಂಗಭದ್ರಾ ಎಡದಂಡೆ ನಾಲೆಯ ಅಸಮರ್ಪಕ ನಿರ್ವಹಣೆಯಿಂದಾಗಿ ತಾಲೂಕಿನ ರೈತರು ಕಾಲುವೆ ನೀರಿನ ಸಮಸ್ಯೆ ಎದುರಿಸುವಂತಾಗಿದೆ. ತುಂಗಭದ್ರಾ ಜಲಾಶಯ ಸಂಪೂರ್ಣವಾಗಿ ಭರ್ತಿಯಾಗಿದ್ದರೂ ಕಾಲುವೆಯಲ್ಲಿ ನೀರು ಹರಿಯದೆ ಬೆಳೆ ಹಾನಿ ಅನುಭವಿಸುವಂತಾಗಿದೆ. ಏ.20ರ ವರೆಗೆ ಕಾಲುವೆಗಳಿಗೆ ನೀರು ಹರಿಸಬೇಕು” ಎಂದು ಒತ್ತಾಯಿಸಿದರು.

ಬಸವ ವೃತ್ತದಿಂದ ತಹಶೀಲ್ದಾರ್ ಕಚೇರಿವರೆಗೆ ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಯಿತು. ಮೆರವಣಿಗೆಯುದ್ದಕ್ಕೂ ಪ್ರತಿಭಟನಾಕಾರರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನಂತರ ರಾಜ್ಯಪಾಲರಿಗೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ್ ಅಬ್ದುಲ್ ವಾಹಿದ್ ಅವರಿಗೆ ಸಲ್ಲಿಸಲಾಯಿತು.

ಇದನ್ನೂ ಓದಿ: ರಾಯಚೂರು| ಅಕ್ರಮ ಮರಳು ಸಾಗಾಟ; ತಡೆಯಲು ಮುಂದಾದ ಪೊಲೀಸ್ ಮೇಲೆ ಹಲ್ಲೆ

ಜೆಡಿಎಸ್ ಪಕ್ಷದ ತಾಲೂಕು ಘಟಕದ ಅಧ್ಯಕ್ಷ ಈರಣ್ಣ ಮರ್ಲಟ್ಟಿ, ಮುಖಂಡರಾದ ರಾಜಾ ರಾಮಚಂದ್ರ ನಾಯಕ, ಮಲ್ಲಿಕಾರ್ಜುನ ಪಾಟೀಲ, ಜೆ.ಎಚ್.ದೇವರಾಜ, ಸಾಜಿದ್ ಖಾದ್ರಿ, ಪಿ.ರವಿಕುಮಾರ, ಸುಬಾನ್ ಬೇಗ್, ಶರಣಪ್ಪ ಮೇದಾ, ಬಾಷಾ ಸಾಬ್, ಬಸವರಾಜ ಭಜಂತ್ರಿ, ಬಿ.ಮಲ್ಲಪ್ಪ ಹೂಗಾರ, ಚೆನ್ನಬಸಯ್ಯ ಸ್ವಾಮಿ, ಮೌನೇಶ ಹರೇಟನೂರ, ಎಸ್.ವೆಂಕೋಬ, ವಿಜಯ್ ನಾಯಕ, ಲಕ್ಷ್ಮಣ ಯಾದವ್, ಶಿವರಾಜ ನಾಯಕ ಚಾಗಬಾವಿ, ಮೌಲಾಸಾಬ್, ಬಿ.ಸಂತೋಷ ಹೂಗಾರ, ವೀರೇಶ ಉಪ್ಪಾರ್, ಜಸ್ವಂತ್ ಸೇಠ್, ಮ್ಯಾಕಲ್ ಮೌನೇಶ ನಾಯಕ, ಬಸನಗೌಡ ಉಟಕನೂರು ಮತ್ತು ವಿವಿಧ ಘಟಕಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

Advertisements
ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X