‌ರಾಯಚೂರು | ಮೂಲ ಸೌಕರ್ಯ ಕಲ್ಪಿಸಲು ಶಾಸಕ ಶಿವರಾಜ ಪಾಟೀಲ ವಿಫಲ; ಗ್ರಾಮಸ್ಥರಿಂದ ಘೇರಾವ್

Date:

ʼತಮ್ಮ ಗ್ರಾಮಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ವಿಫಲವಾಗಿದ್ದೀರಿʼ ಎಂದು ಆರೋಪಿಸಿರುವ ಗ್ರಾಮಸ್ಥರು, ಮತ ಪ್ರಚಾರಕ್ಕೆ ತೆರಳಿದ ಬಿಜೆಪಿ ಶಾಸಕ ಡಾ. ಶಿವರಾಜ ಪಾಟೀಲರಿಗೆ ಘೇರಾವ್ ಹಾಕಿರುವ ಘಟನೆ ರಾಯಚೂರಿನ ಪೋತಗಲ್ ಗ್ರಾಮದಲ್ಲಿ ನಡೆದಿದೆ.

ರಾಯಚೂರು ವಿಧಾನಸಭಾ ಕ್ಷೇತ್ರದ ಪೋತಗಲ್, ಅಮರಾವತಿ ಗ್ರಾಮದಲ್ಲಿ ಶಾಸಕ ಡಾ.ಶಿವರಾಜ ಪಾಟೀಲ ತಮ್ಮ ಬೆಂಬಲಿಗರೊಂದಿಗೆ ಮತಯಾಚನೆ ಮಾಡಲು ತೆರಳಿದ್ದರು. ಈ ವೇಳೆ, ಗ್ರಾಮಸ್ಥರು ಶಾಸಕರಿಗೆ ಘೇರಾವ್ ಹಾಕಿದ್ದಾರೆ.

“ಪೋತಗಲ್ ಮತ್ತು ಅಮರಾವತಿ ಗ್ರಾಮದಲ್ಲಿ ಚರಂಡಿ, ಶುದ್ಧ ಕುಡಿಯುವ ನೀರು ಹಾಗೂ ಮೂಲಸೌಕರ್ಯವಿಲ್ಲ. 5 ವರ್ಷವಾದರೂ ಯಾವುದೇ ಅಭಿವೃದ್ಧಿ ಕಾಮಗಾರಿ ನಡೆದಿಲ್ಲ. ಈಗ ಮತ್ತೆ ಮತ ಕೇಳಲು ಬಂದಿದ್ದೀರಾ” ಎಂದು ಶಾಸಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಮಾದಿಗರ ರಾಜಕೀಯವನ್ನು ಬಿಜೆಪಿಗೆ ಅನೈತಿಕವಾಗಿ ಅಡಮಾನ ಮಾಡಬೇಕೆ?: ಹನುಮೇಶ್‌ ಗುಂಡೂರು

ಗ್ರಾಮಸ್ಥರೊಂದಿಗೆ ಮಾತನಾಡಿದ ಶಾಸಕ ಡಾ.ಶಿವರಾಜ ಪಾಟೀಲ, “ಎಲ್ಲ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತೇನೆ. ನನಗೆ ಮತ ಹಾಕಿ” ಎಂದು ಮನವೊಲಿಸಲು ಮುಂದಾದರು. ಆದರೂ, ಅವರ ಮಾತಿಗೆ ಗ್ರಾಮಸ್ಥರು ಮಣಿಯಲಿಲ್ಲ. ಬಳಿಕ ಶಾಸಕರು ಸ್ಥಳದಿಂದ ಕಾಲ್ಕಿತ್ತರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಬಿಜೆಪಿ ಶ್ರೀಮಂತರ ಓಲೈಕೆ ರಾಜಕಾರಣ ಮಾಡುತ್ತಿದೆ: ಕಿಮ್ಮ‌ನೆ ರತ್ನಾಕರ

ಬಿಜೆಪಿಯಿಂದ ಶ್ರೀಮಂತರ ಓಲೈಕೆಯ ರಾಜಕಾರಣ ನಡೆಯುತ್ತಿದೆ‌. ಅದನ್ನು ತಡೆಯಬೇಕಿದೆ ಎಂದು ಮಾಜಿ...

ಬೆಂಗಳೂರು | ಬರೋಬ್ಬರಿ ₹67.5 ಕೋಟಿಗೆ ಸೇಲ್ ಆದ ಕೋರಮಂಗಲದ ನಿವೇಶನ

ರಾಜ್ಯ ರಾಜಧಾನಿ ಬೆಂಗಳೂರು ಅಭಿವೃದ್ಧಿ ಹೊಂದುತ್ತಿರುವ ನಗರ. ನಗರದಲ್ಲಿ ಒಂದು ಸ್ವಂತ...

ತುಮಕೂರು | ‘ದಲಿತರ ಸಂವಿಧಾನ’ ಎಂದು ವಿವಾದ ಸೃಷ್ಟಿಸಿದ ಬಿಜೆಪಿ ಶಾಸಕ ಬಿ ಸುರೇಶ್ ಗೌಡ

ಲೋಕಸಭಾ ಚುನಾವಣೆಯಲ್ಲಿ ಸಂವಿಧಾನ ಬದಲಾವಣೆ ವಿಷಯ ಮಹತ್ವ ಪಡೆದುಕೊಂಡಿದೆ. ಸಂವಿಧಾನ ಬದಲಿಸುತ್ತೇವೆ...

ಬೆಂಗಳೂರು | ಗೋವಾ ಕನ್ನಡಿಗರ ಮೇಲೆ ದೌರ್ಜನ್ಯ; ನ್ಯಾಯಕ್ಕಾಗಿ ರಾಷ್ಟ್ರಪತಿಗೆ ಕರವೇ ಮನವಿ

ಗೋವಾ ಕನ್ನಡಿಗರ ರಕ್ಷಣೆಗೆ ರಾಷ್ಟ್ರಪತಿಯರು ಮಧ್ಯೆ ಪ್ರವೇಶಿಸಿ ನ್ಯಾಯ ನೀಡಬೇಕು ಎಂದು...