ಹೆರಿಗೆಯ ವೇಳೆ ತೀವ್ರ ರಕ್ತಸ್ರಾವವಾಗಿ ತಾಯಿ ಮತ್ತು ಮಗು ಇಬ್ಬರೂ ಸಾವನ್ನಪ್ಪಿದ ಘಟನೆ ರಾಯಚೂರು ನಗರದ ಬೆಟ್ಟದೂರು ಆಸ್ಪತ್ರೆಯಲ್ಲಿ ನಡೆದಿದೆ.
ಮೃತ ಬಾಣಂತಿ ಶಿವಗಂಗೆಮ್ಮ ಎಂದು ಗುರುತಿಸಲಾಗಿದೆ. ಮೂಲತಃ ದೇವದುರ್ಗ ತಾಲ್ಲೂಕು ಬಿಆರ್ ಗುಂಡ ಗ್ರಾಮದವರು ಎನ್ನಲಾಗಿದೆ.
ಪ್ರಾಥಮಿಕ ವರದಿ ಪ್ರಕಾರ, ಗರ್ಭಿಣಿ ಮಹಿಳೆಗೆ ಪ್ರಸವ ವೇದನೆ ಆರಂಭವಾದ ಬಳಿಕ ಸಮೀಪದ ದೇವದುರ್ಗ ಆಸ್ಪತ್ರೆಗೆ ಕರೆದೊಯ್ಯಲಾಯಿತು. ನಂತರ ರಾಯಚೂರು ಬೆಟ್ಟದೂರು ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಲಾಯಿತು. ಆದರೆ ತಕ್ಷಣ ತೀವ್ರ ರಕ್ತಸ್ರಾವ ಉಂಟಾಗಿ ಮಗುವಿನ ಜೊತೆಗೆ ತಾಯಿಯೂ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಈ ಸುದ್ದಿ ಓದಿದ್ದೀರಾ? ರಾಯಚೂರು | ನವಜಾತ ಶಿಶು ಪತ್ತೆ : ಜಿಲ್ಲೆಯಲ್ಲಿ ಮೂರು ಪ್ರಕರಣಗಳು
ದೇವದುರ್ಗ ಸರಕಾರಿ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯ ಕಾರಣಕ್ಕೆ ಘಟನೆ ಸಂಭವಿಸಿದೆ ಎಂದು ಕುಟುಂಬಸ್ಥರು ಆರೋಪಿಸಿದರು.
