ರಾಯಚೂರು | 86 ಮಂದಿ ಸಫಾಯಿ ಕರ್ಮಚಾರಿಗಳಿಗೆ ಎಂಎಸ್‌ಐಡಿ ಗುರುತಿನ ಚೀಟಿ ವಿತರಣೆ

Date:

Advertisements

ರಾಯಚೂರು ಜಿಲ್ಲೆಯ 86 ಮಂದಿ ಸಫಾಯಿ ಕರ್ಮಚಾರಿ ಫಲಾನುಭವಿಗಳಿಗೆ ಎಂಎಸ್‌ಐಡಿ ಗುರುತಿನ ಚೀಟಿ ನೀಡಲಾಗಿದೆ. ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ಒದಗಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ ಸೂಚನೆ ನೀಡಿದರು.

ಮ್ಯಾನ್ಯುಯಲ್ ಸ್ಕ್ಯಾವೆಂಜರ್‌ಗಳ ನೇಮಕಾತಿ ನಿಷೇಧ ಮತ್ತು ಅವರ ಪುನರ್ವಸತಿ ಅಧಿನಿಯಮ 2013ರ ಕಾಯ್ದೆಯಡಿ ಜಿಲ್ಲಾ ಮಟ್ಟದ ಸಫಾಯಿ ಕರ್ಮಚಾರಿಗಳ ಜಾಗೃತಿ ಸಮಿತಿ ರಚನೆಯಾಗಿದೆ. ಆ ಸಮಿತಿಯ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯು ರಾಯಚೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದಿದ್ದು, ಸಭೆಯಲ್ಲಿ ಅವರು ಮಾತನಾಡಿದರು. “ರಾಜ್ಯ ಸಫಾಯಿ ಕರ್ಮಚಾರಿ ಆಯೋಗಕ್ಕೆ ಸಲ್ಲಿಸಿದ ವರದಿಯಲ್ಲಿ 86 ಮಂದಿಗೆ ಎಂಎಸ್‌ಐಡಿ ಗುರುತಿನ ಚೀಟಿ ನೀಡಲು ಆದೇಶಿಸಿದೆ” ಎಂದರು.

“ಸಫಾಯಿ ಕರ್ಮಚಾರಿಗಳ ಸಮುದಾಯ ಭವನ ನಿರ್ಮಾಣಕ್ಕೆ ಜಿಲ್ಲಾಧಿಕಾರಿ, ನಗರಸಭೆ, ಶಾಸಕರ ನಿಧಿ, ವಿಧಾನ ಪರಿಷತ್ ನಿಧಿ ಸೇರಿದಂತೆ ಒಟ್ಟು 17.16 ಲಕ್ಷ ರೂ. ಬಿಡುಗಡೆಯಾಗಿದೆ. ಸಮುದಾಯ ಭವನ ನಿರ್ಮಾಣ ಕಾಮಗಾಗರಿ ಅರ್ಧಕ್ಕೆ ನಿಂತಿದೆ. ಉಳಿದ ಕಾಮಗಾರಿ ಪೂರ್ಣಣಕ್ಕೆ ನಗರಸಭೆಯಿಂದ 5 ಲಕ್ಷ ಮತ್ತು ಶಾಸಕರ ನಿಧಿಯಿಂದ 5 ಲಕ್ಷ ಒಟ್ಟು 10 ಲಕ್ಷ ರೂ.ನಲ್ಲಿ ಸಮುದಾಯ ಭವನ ಕಾಮಗಾರಿ ಪೂರ್ಣಕ್ಕೆ ಶಾಸಕರಿಗೆ ತಿಳಿಸಲಾಗುವುದು” ಎಂದರು.

Advertisements

“ಸಿಯಾತಲಾಬ್ ಬಡಾವಣೆಯಲ್ಲಿ 10 ತೆರೆದ ಗುಂಡಿಗಳಿದ್ದು, ಅವುಗಳನ್ನು ಮುಚ್ಚಲು ಈಗಾಗಲೇ ನಗರಸಭೆಗೆ ಸೂಚಿಸಲಾಗಿದೆ. ಒಂದು ವಾರದೊಳಗೆ ತೆರೆದ ಗುಂಡಿಗಳನ್ನು ಮುಚ್ಚಬೇಕು” ಎಂದು ಸೂಚಿಸಿದರು.

ಮನೆ ನಿರ್ಮಾಣಕ್ಕೆ ಅರ್ಜಿ ಸಲ್ಲಿಸಿದ್ದು 86 ಕುಟುಂಬಗಳಿಗೆ ಯಾವುದೇ ಮನೆಗಳಿಲ್ಲ. ಸರ್ವೆ ನಂ. 209ರಲ್ಲಿ ಏಗನೂರು ಟೆಂಪಲ್ ಹತ್ತಿರ 6 ಎಕರೆ ಸರ್ಕಾರಿ ಭೂಮಿ ಇದ್ದು, 2 ಎಕರೆಯಲ್ಲಿ ಸಫಾಯಿ ಕರ್ಮಚಾರಿಗಳಿಗೆ ಮನೆ ನೀಡಲು ಅನುಮೋದನೆ ನೀಡಿದರು.

ಮ್ಯಾನ್ಯುಯಲ್ ಸ್ಕ್ಯಾವೆಂಜರ್‌ಗಳಿಗೆ ಶೈಕ್ಷಣಿಕ ಸೌಲಭ್ಯಕ್ಕಾಗಿ ಶೇ.24.10, ಎಸ್‌ಸಿಪಿ, ಟಿಎಸ್‌ಪಿ ಅನುದಾನ ಶೇ.20ರಷ್ಟು ಮೀಸಲಿಟ್ಟು ವಿದ್ಯಾರ್ಥಿ ವೇತನ ಒದಗಿಸಬೇಕು. ಸಫಾಯಿ ಕರ್ಮಚಾರಿಗಳಿಗಾಗಿ ನಿಗದಿಪಡಿಸಿದ ಸ್ಮಶಾನ ಭೂಮಿ ಒತ್ತುವರಿಯಾಗಿದ್ದು, ತೆರವುಗೊಳಿಸಲಾಗಿದೆ. ಸ್ಮಶಾನ ಭೂಮಿ ಸರ್ವೆ ಮಾಡಿಸಿ ಹದ್ದುಬಸ್ತು ಮಾಡಬೇಕು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಗದಗ | ಮನರೇಗಾ ಯೋಜನೆ ಅನುಷ್ಠಾನ; ಗದಗ ಜಿಲ್ಲಾ ಪಂಚಾಯತಿಗೆ ಎರಡನೇ ಸ್ಥಾನ

ಈ ವೇಳೆ ಸಫಾಯಿ ಕರ್ಮಚಾರಿಗಳಿಗೆ ಎಂಎಸ್‌ಐಡಿ ಕಾರ್ಡ್ ವಿತರಣೆ ಮಾಡಲಾಯಿತು.

ಜಿ.ಪಂ. ಸಿಇಒ ರಾಹುಲ್ ತುಕಾರಾಂ ಪಾಂಡ್ವೆ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಬಿ.ನಿಖಿಲ್, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಮಹೇಶ, ನಗರಸಭೆ ಪೌರಾಯುಕ್ತ ಗುರುಸಿದ್ದಯ್ಯ ಹಿರೇಮಠ, ಪರಿಶಿಷ್ಟ ವರ್ಗದ ಕಲ್ಯಾಣ ಇಲಾಖೆಯ ಅಧಿಕಾರಿ ರಾಜೇಂದ್ರ ಜಲ್ದಾರ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

ವರದಿ: ಹಫೀಜುಲ್ಲ, ಸಿಟಿಜನ್ ಜರ್ನಲಿಸ್ಟ್‌, ರಾಯಚೂರು

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X