ರಾಯಚೂರು | ದಸರಾ ಪ್ರಯುಕ್ತ‌ ಬಹುಭಾಷಾ ಕವಿಗೋಷ್ಠಿ

Date:

Advertisements

ರಾಯಚೂರು ಪರಂಪರೆಯ ಜಿಲ್ಲೆಯಾಗಿದ್ದು, ಇಲ್ಲಿ ದಾಸ ಸಾಹಿತ್ಯ, ಗಝಲ್ ಸಾಹಿತ್ಯ, ಪ್ರಾಚೀನ ಇತಿಹಾಸದಿಂದ ಮಧ್ಯಕಾಲೀನ ಇತಿಹಾಸದವರೆಗೆ ನಾನಾ ರೀತಿಯ ಸಾಹಿತ್ಯಗಳು ಹುಟ್ಟಿ ಬೆಳೆದಿವೆ ಎಂದು ನಗರಸಭೆ ಪೌರಾಯುಕ್ತ ಗುರು ಸಿದ್ದಯ್ಯ ಹೇಳಿದರು.

ರಾಯಚೂರಿನ ಐತಿಹಾಸಿಕ ಕೋಟೆ ಅಧ್ಯಯನ ಸಮಿತಿ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಆಯೋಜಿಸಿದ್ದ ಬಹುಭಾಷಾ ಕವಿಗೋಷ್ಠಿಯಲ್ಲಿ ಅವರು ಮಾತನಾಡಿದರು. “ಪ್ರಸ್ತುತ ಸಮಾಜಕ್ಕೆ ಸಾಹಿತ್ಯದ ಮುಖಾಂತರ ಜಾಗೃತಿ ಮೂಡಿಸುವುದು ಅತ್ಯವಶ್ಯಕವಾಗಿದೆ” ಎಂದರು.

ನಗರಸಭೆಯ ಹಿರಿಯ ಸದಸ್ಯ, ಐತಿಹಾಸಿಕ ಕೋಟೆ ಅಧ್ಯಯನ ಸಂಸ್ಥೆಯ ಗೌರವಾಧ್ಯಕ್ಷ ಜಯಣ್ಣ ಮಾತನಾಡಿ, “ಈ ಕಾರ್ಯಕ್ರಮವು ಸುಮಾರು 30 ವರ್ಷಗಳಿಂದ ನಡೆದುಕೊಂಡು ಬಂದಿದ್ದು, ಜಿಲ್ಲೆಯ ಸಾಹಿತ್ಯ ಕಾರ್ಯಕ್ರಮಗಳು ಅತ್ಯವಶ್ಯಕವಾಗಿದೆ” ಎಂದು ಹೇಳಿದರು.

Advertisements

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಡಾ ಜಯಲಕ್ಷ್ಮಿ ಮಂಗಳ ಮೂರ್ತಿ ಮಾತನಾಡಿ, “ಕವಿ ಕಲ್ಪನೆಯ ಸಾಹಿತ್ಯವನ್ನು ಇಂತಹ ಕಾರ್ಯಕ್ರಮಗಳಲ್ಲಿ ಮಾಡುವುದು ಅತ್ಯಂತ ಮಹತ್ವವಾಗಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ತೋಟಗಾರಿಕೆ ಪಿತಾಮಹ ಡಾ. ಎಂ ಎಚ್ ಮರೀಗೌಡ ಪುತ್ಥಳಿ ಅನಾವರಣ

ಈ ವೇಳೆ ಸದಸ್ಯ ದರೂರ್ ಬಸವರಾಜ್, ಉರ್ದು ಹಿರಿಯ ಕವಿ ವಹಿದ್ ವಾಜಿದ್, ವೀರ ಹನುಮಾನ್, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ರಂಗಣ್ಣ ಪಾಟೀಲ್, ತಾಲೂಕು ಅಧ್ಯಕ್ಷ ವೆಂಕಟೇಶ್ ಬೇವಿನ ಬೆಂಚಿ, ನಗರಸಭೆಯ ಅಭಿಯಂತರದ ಮಹೇಶ್ ಕುಮಾರ್, ಐತಿಹಾಸಿಕ ಕೋಟೆ ಸಮಿತಿಯ ಅಧ್ಯಕ್ಷ ಕೆ ಸತ್ಯನಾರಾಯಣ, ಕಾರ್ಯದರ್ಶಿಗಳಾದ ಸೈಯದ ಹಫೀಜುಲ್ಲಾ, ಜುನಾಥ್ ಐಲಿ ಸೇರಿದಂತೆ ಇತರರು ಇದ್ದರು.

ವರದಿ : ಹಫೀಜುಲ್ಲ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X