ರಾಯಚೂರು | ಮಳಿಗೆ ತೆರವು ಮಾಡಲು ಹೋಗಿದ್ದ ನಗರಸಭೆ ಸಿಬ್ಬಂದಿ; ಮಾರಕಾಸ್ತ್ರ ಹಿಡಿದು ಬೆದರಿಕೆ

Date:

Advertisements

ನಗರಸಭೆ ವ್ಯಾಪ್ತಿಗೆ ಬರುವ ಮಳಿಗೆಗಳನ್ನು ಖಾಲಿಮಾಡಿಸಲು ಹೋಗಿದ್ದ ನಗರಸಭೆ ಸಿಬ್ಬಂದಿಗಳಿಗೆ ಮಾರಕಾಸ್ತ್ರ ಹಿಡಿದು ಜೀವ ಬೆದರಿಕೆ ಹಾಕಿರುವ ಘಟನೆ ರಾಯಚೂರು ನಗರದ ಮಹಿಳಾ ಸಮಾಜದ ಬಳಿ ನಡೆದಿದೆ.

ಟೆಂಡರ್ ಅವಧಿ ಮುಗಿದಿದ್ದರಿಂದ ಬಾಕಿಯಿರುವ ಬಾಡಿಗೆ ಹಣ ಪಾವತಿಸಿ ಮಳಿಗೆಗಳನ್ನು ಖಾಲಿ ಮಾಡಿ ಟೆಂಡರ್ ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ನಗರಸಭೆ ಪೌರಾಯುಕ್ತರು 2023ರಲ್ಲಿ ಮಳಿಗೆಗಳ ಬಾಡಿಗೆದಾರರಿಗೆ ನೋಟಿಸ್ ನೀಡಿದ್ದರು. ಅಲ್ಲಿಂದ ಇಲ್ಲಿಯವರಗೆ ಬಾಡಿಗೆಯನ್ನೂ ಪಾವತಿಸದೇ, ಮಳಿಗೆಗಳನ್ನು ಖಾಲಿಯೂ ಮಾಡದೇ ವ್ಯಾಪಾರ ವಹಿವಾಟು ನಡೆಸುತ್ತಿದ್ದರಿಂದ ನಗರಸಭೆ ಸಿಬ್ಬಂದಿ ಇಂದು (ಫೆ.23) ಬೆಳಿಗ್ಗೆ ಮಳಿಗೆ ಖಾಲಿ ಮಾಡಿಸಲು ಮುಂದಾಗಿದ್ದಾರೆ.

ಆದರೆ, ಮಳಿಗೆಯಲ್ಲಿದ್ದ ಶಂಶುದ್ದೀನ್ ಎಂಬ ತೆಂಗಿನ ಕಾಯಿ ವ್ಯಾಪಾರಿ ಕಳೆದ 15ವರ್ಷಗಳಿಂದ ಬಾಡಿಗೆಯಲ್ಲಿದ್ದು, ಏಕಾಎಕಿ ಖಾಲಿಮಾಡುವದಿಲ್ಲ ಎಂದು ವಾಗ್ವಾದ ನಡೆಸಿ, ಸಿಬ್ಬಂದಿಗಳಿಗೆ ಮಚ್ಚು ತೋರಿಸಿ ಬೆದರಿಸಿದ್ದಾನೆ. ಘಟನೆಯಿಂದ ವಿಚಲಿತರಾದ ಸಿಬ್ಬಂದಿ ಮಳಿಗೆ ತೆರವುಗೊಳಿಸಬೇಕೆಂದು ಎಚ್ಚರಿಸಿದ್ದಾರೆ. ಸಾರ್ವಜನಿಕರು ಅನೇಕರು ಮಧ್ಯಪ್ರವೇಶಿಸಿ ಮಾರಕಾಸ್ತ್ರ ಬಿಡುವಂತೆಯೂ ಮನವಿ ಮಾಡಿದ್ದಾರೆ.

Advertisements

ಬೇರೊಬ್ಬರ ಹೆಸರಿನಲ್ಲಿ ಬಾಡಿಗೆ ಪಡೆದು ವ್ಯವಹಾರ ನಡೆಸುತ್ತಿದ್ದ ಎಂದು ಹೇಳಲಾಗುತ್ತಿದ್ದು, ಘಟನೆಯನ್ನು ಗಂಭೀರವಾಗಿ ಪರಿಗಣಸಿರುವ ನಗರಸಭೆ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಂತರ ನಗರಸಭೆ ಕಚೇರಿ ಹೊಂದಿಕೊಂಡಿರುವ ಮಳಿಗೆಗಳಿಗೆ ಬೀಗ ಹಾಕಿದ್ದಾರೆ. ನಗರದ ವಿವಿಧ ಕಡೆಗಳಲ್ಲಿರುವ ಮಳಿಗೆ ಟೆಂಡರ್ ಆಹ್ವಾನಿಸಿದ್ದು ಟೆಂಡರ್ ಮೂಲಕ ಪಡೆಯುವಂತೆ ನಗರಸಭೆ ಸಿಬ್ಬಂದಿ ಮನವಿ ಮಾಡಿದ್ದಾರೆ. ಪೊಲೀಸ್ ಬಂದೋಬಸ್ತ್‌ನಲ್ಲಿ ಮಳಿಗೆ ತೆರವು ಕಾರ್ಯ ನಡೆಸಲಾಗುತ್ತಿದೆ.

ಮಳಿಗೆದಾರರು ಪ್ರತಿಭಟನೆ ನಡೆಸಿ ಪೌರಾಯುಕ್ತರಿಗೆ ಮನವಿ ಸಲ್ಲಿಸಿದರು. ಏಕಾಎಕಿ ತೆರವುಗೊಳಿಸದೇ ಕಾಲಾವಕಾಶ ನೀಡಬೇಕೆಂದು ಮನವಿ ಮಾಡಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X