ರಾಯಚೂರು | ಮುತಾಲಿಕ್‌ನಿಂದ ಭಾರತವನ್ನು ಹಿಂದೂ ರಾಷ್ಟ್ರ ಮಾಡಲು ಸಾಧ್ಯವಿಲ್ಲ : ಆರ್ ಮಾನಸಯ್ಯ

Date:

Advertisements

ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಹಟ್ಟಿ ಪಟ್ಟಣದಲ್ಲಿ ಶ್ರೀ ರಾಮ ಸೇನೆ ಆಯೋಜಿಸಿದ್ದ ಪಥ ಸಂಚಲನದಲ್ಲಿ ಶ್ರೀ ರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಭಾರತವನ್ನು ಹಿಂದೂ ರಾಷ್ಟ್ರ ಮಾಡುತ್ತೇವೆ ಎಂದು ಕೋಮುವಾದ, ಪ್ರಚೋದನಕಾರಿ, ಅಸಾಂವಿಧಾನಿಕ ಮತ್ತು ದ್ವೇಷಪೂರಿತ ಭಾಷಣವನ್ನು ಮಾಡಿದ್ದಾರೆ. ಅವನೊಬ್ಬ ಹುಚ್ಚುನಾಯಿ ಎಂದು ಪ್ರಗತಿಪರ ಚಿಂತಕ ಆರ್ ಮಾನಸಯ್ಯ ಕಿಡಿಕಾರಿದ್ದಾರೆ.

ಈ ಬಗ್ಗೆ ಹೇಳಿಕೆ ನೀಡಿರುವ ಅವರು, ಮುಸ್ಲಿಮರು, ಕ್ರಿಶ್ಚಿಯನ್ನರು, ಕಮ್ಯುನಿಸ್ಟರು ಮತ್ತು ಬಹುಜನ ಭಾರತವನ್ನು ಗುರಿಯಾಗಿಸಿಕೊಂಡು ಅವರು ಯುವಕರಲ್ಲಿ ಹಿಂದೂ ರಾಷ್ಟ್ರ ,ಲವ್ ಜಿಹಾದ್ ಇನ್ನಿತರ ಬಗ್ಗೆ ವಿಷ ಬೀಜ ಬಿತ್ತಿ ಸೌಹಾರ್ದತೆ ನೆಲವನ್ನು ಅಶಾಂತಿ ಸೃಷ್ಟಿಸುವ ಹುನ್ನಾರ ಇದೆ ಎಂದು ದೂರಿದರು.

ಹಿಂದುತ್ವ ಅಜೆಂಡಾ ಸಾವರ್ಕರ್ ಅವರ ಸಿದ್ಧಾಂತದೊಂದಿಗೆ ಸಂಬಂಧ ಹೊಂದಿರುವ ಮುತಾಲಿಕ್ ಅವರ ಸಂಘಟನೆಯು ದಲಿತರಿಗೆ ಸ್ವಾತಂತ್ರ್ಯ ಮತ್ತು ಸಮಾನತೆಯನ್ನು ವಿರೋಧಿಸುತ್ತದೆ, ಜಾತಿ ವ್ಯವಸ್ಥೆ ಮತ್ತು ವರ್ಣವನ್ನು ಎತ್ತಿಹಿಡಿಯುತ್ತದೆ. ಇದು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಬಹು-ಸಾಂಸ್ಕೃತಿಕ, ಬಹು-ಧಾರ್ಮಿಕ ಮತ್ತು ಬಹು-ರಾಷ್ಟ್ರೀಯ ಭಾರತದ ತತ್ವಗಳಿಗೆ ವಿರುದ್ಧವಾಗಿದೆ ಎಂದರು.

Advertisements

ಇದನ್ನು ಓದಿದ್ದೀರಾ? ಕುಮಾರಸ್ವಾಮಿ, ಪ್ರಲ್ಹಾದ್‌ ಜೋಶಿ ರಾಜ್ಯದಿಂದ ಮಂತ್ರಿಗಳಾಗಿ ಏನು ಮಾಡುತ್ತಿದ್ದಾರೆ: ಸಿದ್ದರಾಮಯ್ಯ ಪ್ರಶ್ನೆ

ದಲಿತರನ್ನು ಒಬಿಸಿ ಮತ್ತು ಮುಸ್ಲಿಮರಿಂದ ವಿಭಜಿಸುವ ಮತ್ತು ಅಂಬೇಡ್ಕರ್ ಮತ್ತು ಕಮ್ಯುನಿಸ್ಟ್ ಚಿಂತನೆಗಳಿಂದ ಬೇರೆಡೆಗೆ ಸೆಳೆಯುವ ಉದ್ದೇಶದಿಂದ ಸಾವರ್ಕರ್ ಅವರ ಫೋಟೋದೊಂದಿಗೆ ಅಂಬೇಡ್ಕರ್ ಅವರ ಫೋಟೋವನ್ನು ವೇದಿಕೆ ಮೇಲೆ ಹಾಕಿದ್ದು ದುರುಪಯೋಗಪಡಿಸಿಕೊಳ್ಳುವುದನ್ನು, ಅಂಬೇಡ್ಕರ್ ಅವರ ಪರಂಪರೆಯನ್ನು, ದಲಿತರ ಅಸ್ಮಿತೆ ನೀಲಿಯನ್ನು ಚಡ್ಡಿಯನ್ನಾಗಿ ಬಳಸಿ ಅವಮಾನಿಸಿದ ಮುತಾಲಿಕ್ ಮತ್ತು ಕಾರ್ಯಕ್ರಮ ಸಂಘಟಕರ ವಿರುದ್ಧ ಹಟ್ಟಿ ಪೊಲೀಸರು ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕೆಂದು ಒತ್ತಾಯಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಕಲಬುರಗಿ | ಯುವಕರು ಮಾರಕಾಸ್ತ್ರ ಹಿಡಿದ ವಿಡಿಯೊ ವೈರಲ್: ನಾಲ್ವರು ಯುವಕರ ವಿರುದ್ಧ ಎಫ್‌ಐಆರ್

ಕಲಬುರಗಿಯ ದೇವಿ ನಗರದಲ್ಲಿ ನಾಲ್ವರು ಯುವಕರು ಕೈಯಲ್ಲಿ ಮಾರಕಾಸ್ತ್ರಗಳು ಹಿಡಿದು ವಿಡಿಯೋ...

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

Download Eedina App Android / iOS

X