ರಾಯಚೂರು | ನಾರಾಯಣಪುರ ಬಲದಂಡೆ ಕಾಲುವೆಗೆ ಬಸಿನೀರು ಹರಿಸಲು ರೈತರ ಆಗ್ರಹ

Date:

Advertisements

ನಾರಾಯಣಪುರ ಬಲದಂಡೆ ಕಾಲುವೆಗೆ ಪ್ರತಿ ವರ್ಷ ಬಸಿನೀರು ಹರಿಯುತ್ತಿತ್ತು ಈ ವರ್ಷ ಏಕಾಏಕಿ ಬಂದ ಮಾಡಿರುವುದರಿಂದ ಕೇಳ ಭಾಗದ ರೈತರಿಗೆ ಹಾಗೂ ಜಾನುವಾರುಗಳಿಗೆ ತುಂಬಾ ಸಮಸ್ಯೆ ಉಂಟಾಗಿದೆ ತಕ್ಷಣ ನೀರು ಹರಿಸಬೇಕು ಎಂದು ಲಿಂಗಸುಗೂರು ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಿದರು.

1995 ರಿಂದ ನಾರಾಯಣಪೂರ ಬಲದಂಡೆ ಕಾಲುವೆಗೆ ಬಸಿನೀರು ಬರುತಿತ್ತು.ಈ ಭಾಗದ ಕೆಳ ಭಾಗದ ರೈತರಿಗೆ ಬಸಿನೀರಿಂದ ಹಲವು ರೀತಿಯ ವ್ಯವಸಾಯ ಚಟುವಟಿಕೆಗೆ ಉಪಯೋಗವಾಗುತ್ತಿತ್ತು. ಈ ಬಾರಿ ಏಕಾಏಕಿ ಬಸಿನೀರು ಮಾಡಿದ್ದರಿಂದ ಸಮಸ್ಯೆ ಎದುರಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಲಿಂಗಸುಗೂರು ಹೋಬಳಿಯ ರೋಡಲಬಂಡಾ, ಹಿರೇಜಾವೂರು, ಮೇಲಿನಗಡ್ಡಿ, ಜಂಗಿನಗಡ್ಡಿ, ಜಂಗಿರಾಂಪೂರುತಾಂಡ, ಹಾಲಭಾವಿ, ಚಿಕ್ಕ ಉಪ್ಪೇರಿ, ಗೋರೆಬಾಳ ತಾಂಡ, ಕಾಳಾಪೂರು, ಹಳ್ಳಿ, ದೊಡ್ಡಿ, ತಾಂಡಗಳಲ್ಲಿ ಹಾಗೂ ಗುರುಗುಂಟಾ ಹೋಬಳಿಯ ದೇವರಭೂಪರು, ರಾಯದುರ್ಗ, ಟಣಮಕಲ್, ಐದಭಾವಿ, ಗೌಡೂರು, ಚೆಂಚಲದೊಡ್ಡಿ ಹಳ್ಳಿ, ದೊಡ್ಡಿ, ತಾಂಡ ಸೇರಿ ಇನ್ನಿತರ ಸಣ್ಣ ಪುಟ್ಟ ಗ್ರಾಮದಲ್ಲಿ ಇದೆ ನೀರು ಆಸರೆಯಾಗಿತ್ತು ಎಂದು ಒತ್ತಾಯಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ರಾಯಚೂರು | ಮೇ 17,18 ರಂದು ಸಿಂಧನೂರಿನಲ್ಲಿ ಮೇ ಸಾಹಿತ್ಯ ಮೇಳ

ಕಳೆದ ಒಂದು ತಿಂಗಳ ಹಿಂದೆ ಏಕಾಏಕಿ ಕಾಲುವೆ ಬಸಿನೀರು ನಿಲ್ಲಿಸಿದ್ದರಿಂದ ಸಮಸ್ಯೆ ಎದುರಾಗಿದೆ.ಇಲಾಖೆ ಅಧಿಕಾರಿಗಳು ಇತ್ತಕಡೆ ಗಮನ ಹರಿಸಿ ನಾರಾಯಣಪೂರ ಬಲದಂಡೆ ಕಾಲುವೆಗೆ ಬಸಿನೀರು ಬಿಡಬೇಕು. ಒಂದು ವಾರದೊಳಗೆ ಕಾಲುವೆ ಬಸಿನೀರು ಬಿಡದಿದ್ದರೆ, ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಈ ವೇಳೆ ರೈತ ಮುಖಂಡ ಶಿವಪುತ್ರಗೌಡ , ಬಸವರಾಜ್ ಅಂಗಡಿ , ಹನುಮನ ಗೌಡ ,ದುರ್ಗಾಪ್ರಸಾದ , ಭೀಮನಗೌಡ ,ತಿಮ್ಮನಗೌಡ , ರಂಜಾನ್ ಸಾಬ್ ,ಶಂಕ್ರಪ್ಪ ಇನ್ನಿತರರು ಹಾಜರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X