ರಾಯಚೂರು | ಒಳಮೀಸಲಾತಿ ಜಾರಿ: ಆಗಸ್ಟ್ 11ರಿಂದ ಬೆಂಗಳೂರು ಫ್ರೀಡಂ ಪಾರ್ಕ್‌ನಲ್ಲಿ ಧರಣಿ

Date:

Advertisements

ಮುಂಗಾರು ಅಧಿವೇಶನದಲ್ಲಿಯೇ ನ್ಯಾಯಮೂರ್ತಿ ನಾಗಮೋಹನದಾಸ್ ವರದಿ ಜಾರಿಯಾಗಬೇಕು ಎಂದು ಆಗ್ರಹಿಸಿ ಆಗಸ್ಟ್ 11 ರಿಂದ ಬೆಂಗಳೂರಿನ‌ ಫ್ರೀಡಂ ಪಾರ್ಕ್ ನಲ್ಲಿ ಅನಿರ್ಧಿಷ್ಠಾವಧಿ ಧರಣಿ ಆಯೋಜಿಸಿದ್ದು ಸಮುದಾಯದ ಎಲ್ಲಾ ಮುಖಂಡರು, ಒಳ ಮೀಸಲಾತಿ ಹೋರಾಟಗಾರರು ಭಾಗವಹಿಸಬೇಕು ಎಂದು ಸಾಮಾಜಿಕ ನ್ಯಾಯಕ್ಕಾಗಿ ಒಳ ಮೀಸಲಾತಿ ಹೋರಾಟ ಸಮಿತಿ ರಾಜ್ಯ ಸಂಚಾಲಕ ಎಸ್.ಮಾರೆಪ್ಪ ಹೇಳಿದರು.

ನಗರದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನ್ಯಾಯಮೂರ್ತಿ ನಾಗಮೋಹನದಾಸ ನೇತೃತ್ವದ ಆಯೋಗ ನೀಡಿರುವ ವರದಿಯನ್ನು ಸರ್ಕಾರ ಪಡೆದು ವಿಶೇಷ ಸಚಿವ ಸಂಪುಟದಲ್ಲಿ ಚರ್ಚಿಸುವುದಾಗಿ ಹೇಳುತ್ತಿದೆ. ಸರ್ಕಾರದ ವಿಳಂಬ ಧೋರಣೆಗೆ ಅವಕಾಶ ನೀಡದೇ ಅನುಮೋದನಡೆ ನೀಡಿ ಇದೇ ಅಧಿವೇಶನದಲ್ಲಿ ಅಂಗೀಕಾರಗೊಳಿಸಬೇಕು. ಇಲ್ಲದೇ ಹೊದಲ್ಲಿ ರಾಜ್ಯದಲ್ಲಿ ಯಾವ ಸಚಿವರು ಪ್ರವಾಸ ಮಾಡದಂತೆ ತಡೆಯುವ ಹೋರಾಟ ನಡೆಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ನಾಗಮೋಹನ ದಾಸ್ ಆಯೋಗ ವರದಿಗೆ ಛಲವಾದಿ ಸಮಾಜ ಆಕ್ಷೇಪ ವ್ಯಕ್ತಪಡಿಸಿ ದೂರು ನೀಡಿದೆ. ಆದರೆ ಆಯೋಗ ವರದಿಯಲ್ಲಿ ಆಕ್ಷೇಪಗಳು ಸರಿಪಡಿಸಿಕೊಳ್ಳಬಹುದೇ ಹೊರತು ಇಡಿ ಆಯೋಗವರದಿಯನ್ನೇ ತಿರಸ್ಕರಿ ಸಬೇಕೆನ್ನುವದು ಸರಿಯಾದುದ್ದಲ್ಲ. ಯಾವ ಆಯೋಗ ವರದಿಗಳು ಸಹ ನೂರಕ್ಕೆ ನೂರರಷ್ಟು ಸರಿ ಇರಲ್ಲ. ವ್ಯತ್ಯಾಸಗಳಿರುವದು ಸಹಜ. ಪರಿಶೀಷ್ಟ ಜಾತಿಗಳಲ್ಲಿಯೇ 65 ಜಾತಿಗಳು ಅತ್ಯಂತ ಹಿಂದುಳಿದಿವೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಶೈಕ್ಷಣಿಕವಾಗಿ 45 ಜಾತಿಗಳು ಶಿಕ್ಷಣ ಪಡೆದಿದರೆ ಮಾದಿಗ ಮತ್ತು ಅಲೆಮಾರಿ ಸಮೂದಾಯಗಳು ಶೇ 60ಕ್ಕಿಂತ ಕಡಿಮೆ ಶಿಕ್ಷಣ ಪಡೆದಿವೆ ಎಂದು ಆಯೋಗ ವರದಿ ಮಾಡಿದೆ. ಉದ್ಯೋಗದಲ್ಲಿಯೂ ಅನ್ಯಾಯವಾಗಿದೆ. ಮೀಸಲಾತಿಯನ್ನು ಹೆಚ್ಚಾಗಿ ಪಡೆದ ಜಾತಿಗಳು ಸಹ ಸಾಮಾಜಿಕನ್ಯಾಯವನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಒತ್ತಾಯಿಸಿದರು.

ರಾಜ್ಯ ಮುಖ್ಯಮಂತ್ರಿಗಳು ರಾಜಕೀಯ ಪ್ರಭಾವವನ್ನು ಪರಿಗಣಿಸದೇ ತೆಲಂಗಾಣದ ಮುಖ್ಯಮಂತ್ರಿ ಕೈಗೊಂಡಿರುವ ನಿರ್ಧಾರವನ್ನು ರಾಜ್ಯದಲ್ಲಿಯೂ ಪ್ರದರ್ಶಿಸಬೇಕಿದೆ. ಆ.11 ರಿಂದ 22 ವರೆಗೆ ವಿಧಾನಮಂಡಲದ ಅಧಿವೇಶನ ನಡೆಯಲಿದೆ. ಸದನದಲ್ಲಿ ಮಂಡಿಸಿ ಅಂಗೀಕಾರಗೊಳಿಸದೇ ಹೋದರೆ ರಾಜ್ಯದಾಧ್ಯಂತ ಗಂಭೀರ ಸ್ವರೂಪದ‌ ಹೋರಾಟ ಮಾಡುತ್ತೇವೆ ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಸಿಂಧನೂರು | ಮುಕ್ಕುಂದಾ ಗ್ರಾಮದಲ್ಲಿ ಶವಸಂಸ್ಕಾರಕ್ಕೆ ಸೌಲಭ್ಯಗಳ ಅಭಾವ – ದಲಿತ ಸೇನೆ ಒತ್ತಾಯ

ಒಳ ಮೀಸಲಾತಿ ಹೋರಾಟ ಸಮಿತಿಯ ರಾಜ್ಯ ಸಂಚಾಲಕ ಹೇಮರಾಜ ಅಸ್ಕಿಹಾಳ, ಆಂಜಿನೇಯ್ಯ ಉಟ್ಕೂರು, ನರಸಿಂಹಲು ಮರ್ಚಟ್ಟಾಳ, ಶ್ರೀನಿವಾಸ ಕೊಪ್ಪರ, ಆಂಜನೇಯ ಕುರುಬದೊಡ್ಡಿ, ತಾಯಪ್ಪ ಗಧಾರ ಗೋಷ್ಠಿಯಲ್ಲಿ ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಸಂಸದ ರಾಘವೇಂದ್ರ, ವಿಜಯೇಂದ್ರ ಯಾವ ಕೋಟದಲ್ಲಿ ಹುದ್ದೆ ಪಡೆದಿದ್ದಾರೆ? ಆಯನೂರು ಮಂಜುನಾಥ ಪ್ರಶ್ನೆ

ಶಿವಮೊಗ್ಗ, ಸಂಸದ ರಾಘವೇಂದ್ರ ಮೊದಲ ಬಾರಿ ಯಾವ ಕೋಟದಲ್ಲಿ ಲೋಕಸಭಾ ಸದಸ್ಯರಾಗಿದ್ದಾರೆ,...

ಶಿವಮೊಗ್ಗ | ಅ. 9ರಿಂದ ವಿಮಾನ ನಿಲ್ದಾಣದ ಮುಖ್ಯದ್ವಾರದಲ್ಲಿ ಅನಿರ್ದಿಷ್ಟವಧಿ ಧರಣಿ

ಶಿವಮೊಗ್ಗ, ತಾಲೂಕಿನ ನಿಧಿಗೆ ಹೋಬಳಿ ಸೋಗಾನೆ ಗ್ರಾಮದ ವಿಮಾನ ನಿಲ್ದಾಣಕ್ಕೆ ಜಮೀನು...

ಕೊರಟಗೆರೆ | ರಾಮಾಯಣ ಮಹಾಕಾವ್ಯ ಬೇರೆ ದೇಶದಲ್ಲಿಯೂ ಪ್ರಚಲಿತದಲ್ಲಿದೆ : ಗೋಪಿನಾಥ್

ನಿಸರ್ಗದೊಂದಿಗೆ ನಿಕಟ ಸಂಪರ್ಕ ಹೊಂದಿದ್ದ ಮಹರ್ಷಿ ವಾಲ್ಮೀಕಿ ಅವರಲ್ಲಿ ಕವಿತ್ವ ಭಾವನೆ...

ವೀಲ್ ಚೇರ್ ಬ್ಯಾಸ್ಕೆಟ್ ಬಾಲ್ ರಾಜ್ಯ ತಂಡಕ್ಕೆ ಗುಬ್ಬಿಯ ಗಂಗರಾಜು ಆಯ್ಕೆ

 ಗೋವಾ ರಾಜ್ಯದಲ್ಲಿ ನಡೆದಿರುವ ಇಂಟರ್ ನ್ಯಾಷನಲ್ ಪರ್ಪಲ್ ಫೆಸ್ಟ್ 2025 ಹಿನ್ನಲೆ...

Download Eedina App Android / iOS

X