ರಾಯಚೂರು | ಕುಡಿಯುವ ನೀರು ಒದಗಿಸುವಂತೆ ಸಂಘಟನೆಗಳ ಆಗ್ರಹ

Date:

ಕುಡಿಯುವ ನೀರಿನ ಸಮಸ್ಯೆ ಬಗೆಹರಿಸದೆ ನಿರ್ಲಕ್ಷ್ಯ ವಹಿಸುತ್ತಿರುವ ಆಡಳಿತ ನಡೆ ವಿರೋಧಿಸಿ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಶನ್(ಡಿವೈಎಫ್ಐ) ಮತ್ತು ಕರ್ನಾಟಕ ಪ್ರಾಂತ ರೈತ ಸಂಘಟನೆ (ಕೆಪಿಆರ್‌ಎಸ್) ನೇತೃತ್ವದಲ್ಲಿ ಗೆಜ್ಜಲಗಟ್ಟಾ ಗ್ರಾಮ ಪಂಚಾಯಿತಿ ಪಿಡಿಒ ಗುರುಸಿದ್ದಪ್ಪ ಅವರಿಗೆ ಮನವಿ ಸಲ್ಲಿಸಿದರು.

- Advertisement -

ರಾಯಚೂರು ಜಿಲ್ಲೆ ಹಟ್ಟಿ ಪಟ್ಟಣ ಸಮೀಪದ ಗೆಜ್ಜಲಗಟ್ಟಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿಲೋಗಲ್ ಗ್ರಾಮದ 2ನೇ ವಾರ್ಡಿನ ನಿವಾಸಿಗಳಿಗೆ ಕುಡಿಯುವ ನೀರಿನ ಕೊರತೆ ಉಂಟಾಗಿದ್ದು, ನಿತ್ಯವೂ ಪರದಾಡುವಂತಾಗಿದೆ. ಈ ಬಗ್ಗೆ ಹಲವು ಬಾರಿ ಆಡಳಿತದ ಗಮಕ್ಕೆ ತಂದರೂ ನಿರ್ಲಕ್ಷ್ಯ ವಹಿಸಿದ್ದಾರೆಯೇ ಹೊರತು ಯಾವುದೇ ಪ್ರಯೋಜನವಾಗಿಲ್ಲ” ಎಂದು ಸಂಘಟನಾಕಾರರು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

“ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಂತೆ ಸ್ಥಳೀಯರು ಪಂಚಾಯಿತಿಯಲ್ಲಿ ಕೇಳಿದರೆ ʼನಿಮ್ಮದು ಭಾರೀ ಕಿರಿಕಿರಿ ಆಗಿದೆಯೆಂದು ಪಂಚಾಯತ್ ಸಿಬ್ಬಂದಿ ವೆಂಕಟೇಶ ಚಿಕ್ಕನಗನೂರು ಉಡಾಫೆಯಾಗಿ ಮಾತನಾಡುತ್ತಾರೆ. ಆಡಳಿತದ ಬೇಜವಾಬ್ಧಾರಿಯನ್ನು ಎತ್ತಿ ತೋರಿಸುತ್ತದೆ. ಇಂತಹ ನಡೆ ಖಂಡನೀಯ ಎಂದರು.

“ವಾರ್ಡಿನ ನೀರಿನ ಮೋಟಾರ್ ಕೆಟ್ಟು ಹೋಗಿದ್ದು, ಕೂಡಲೇ ದುರಸ್ಥಿಗೊಳೀಸಬೇಕು. ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲ ವಾರ್ಡ್‌ಗಳ ಸಮಸ್ಯೆಗಳನ್ನು ಇತ್ಯರ್ಥ ಮಾಡಬೇಕು. ನಿರ್ಲಕ್ಷ್ಯ ವಹಿಸಿದರೆ ಪಂಚಾಯಿತಿ ಎದುರು ಅನಿರ್ದಿಷ್ಟಾವಧಿ ಧರಣಿ ನಡೆಸಲಾಗುವುದು ಎಂದು ಡಿವೈಎಫ್ಐ ಮತ್ತು ಕೆಪಿಆರ್‌ಎಸ್ ಜಂಟಿ ಸಂಘಟನೆಗಳು ಎಚ್ಚರಿಕೆ ನೀಡಿವೆ.

ಈ ಸುದ್ದಿ ಓದಿದ್ದೀರಾ? ಬಾಗಲಕೋಟೆ | ಆರು ವರ್ಷ ಕಳೆದರೂ ವಿದ್ಯುತ್ ಕಾಮಗಾರಿ ಅಪೂರ್ಣ: ರೈತರಿಗೆ ಅನ್ಯಾಯ; ಆರೋಪ

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ರಮೇಶ್ ವೀರಾಪೂರ, ಕೆಪಿಆರ್‌ಎಸ್ ಮುಖಂಡರುಗಳಾದ ನಿಂಗಪ್ಪ ಎಂ, ಹನುಮಂತ ಉಪ್ಪಾರ, ಶಂಕರ್ ಗೌಡ, ಡಿವೈಎಫ್ಐ ಮುಖಂಡರುಗಳಾದ ಸಿದ್ದು ಪೂಜಾರಿ, ನಾಗರಾಜ್ ಅಂಗಡಿ, ಅಭಿಷೇಕ್, ಹುಸೇನ್ ಪಾಷಾ, ಶಿವಲಿಂಗ, ರವಿಕುಮಾರ, ವಿಶಾದ, ಶ್ರೀನಿವಾಸ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾಪುವಿನಲ್ಲಿ ಪ್ರಜಾಸೇವಾ ಆಂದೋಲನ: 75 ಅಹವಾಲು ಸ್ವೀಕಾರ, ಅಧಿಕಾರಿಗಳಿಂದ ಪರಿಹಾರದ ಭರವಸೆ

ಜನಸಾಮಾನ್ಯರ ಕೆಲಸ ಕಾರ್ಯಗಳನ್ನು ಇದ್ದಲ್ಲಿಯೇ ಮಾಡಿಕೊಡುವ ಉದ್ದೇಶದಿಂದ ಸಚಿವರು, ಜನಪ್ರತಿನಿಧಿಗಳು ಹಾಗೂ...

ವಿಜಯಪುರ | ರೇಬಿಸ್ ತಡೆಗೆ ಜಾಗೃತಿ ಮುಖ್ಯ; ಬೀದಿ ನಾಯಿ ಕಡಿತದ ಬಗ್ಗೆ ಜನರಲ್ಲಿ ಅರಿವು

ರೇಬಿಸ್ ವೈರಾಣು ಹರಡುವಿಕೆ, ನಾಯಿ ಕಡಿತದಿಂದ ಉಂಟಾಗಬಹುದಾದ ಅಪಾಯ ಹಾಗೂ ಮುನ್ನೆಚ್ಚರಿಕಾ...

ಜಮಖಂಡಿ | ಸರ್ವೆ ನಂ.71/4ರಲ್ಲೇ ಸ್ಮಶಾನಕ್ಕೆ ಜಾಗ ನೀಡುವಂತೆ ದಲಿತ ಸಮುದಾಯದ ಆಗ್ರಹ

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಕಲಬೀಳಗಿ ಗ್ರಾಮದ ಪರಿಶಿಷ್ಟ ಜಾತಿ ಕಾಲೋನಿ...

ಸಿದ್ದರಾಮಯ್ಯ ಪ್ರತಿಮೆ ತೆರವು ಖಂಡಿಸಿ ವಿಜಯಪುರದಲ್ಲಿ ಬೃಹತ್ ಪ್ರತಿಭಟನೆ

ಕಲಬುರಗಿಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಮೆ ತೆರವುಗೊಳಿಸಿರುವುದನ್ನು ಖಂಡಿಸಿ, ಸಿದ್ದರಾಮಯ್ಯ...