ರಾಯಚೂರು | ಊಟಿ ಚಿನ್ನದ ಗಣಿ ರಸ್ತೆ ದುರಸ್ತಿಗೆ ಕೆಪಿಆರ್ ಎಸ್ ಆಗ್ರಹ

Date:

Advertisements

ಯಲಗಟ್ಟಾ ಗ್ರಾಮದಿಂದ ಊಟಿ ಚಿನ್ನದ ಗಣಿ ಕಂಪನಿಗೆ ಸಂಪರ್ಕ ಕಲ್ಪಿಸುವ ರಸ್ತೆ ತೀವ್ರ ಹದಗೆಟ್ಟಿದ್ದು, ಗ್ರಾಮಸ್ಥರು ಹಾಗೂ ರೈತ ಕೂಲಿ ಕಾರ್ಮಿಕರಿಗೆ ಸಂಚಾರದಲ್ಲಿ ಭಾರೀ ಅಸೌಕರ್ಯ ಉಂಟಾಗಿದೆ. ಕಂಪನಿಯ ಅಧಿಕಾರಿಗಳ ವಾಹನಗಳು ಮಾತ್ರ ಸಂಚರಿಸಲು ಅನುಕೂಲವಾಗುತ್ತಿದ್ದರೆ, ಸಾಮಾನ್ಯ ಜನರಿಗೆ ರಸ್ತೆ ಇಲ್ಲದಂತಾಗಿದೆ ಎಂಬ ಆಕ್ರೋಶ ವ್ಯಕ್ತವಾಗಿದೆ.

ಈ ಹಿನ್ನೆಲೆಯಲ್ಲಿ ಕರ್ನಾಟಕ ಪ್ರಾಂತ ರೈತ ಸಂಘ, ಲಿಂಗಸಗೂರು ತಾಲೂಕು ಸಮಿತಿಯ ಯಲಗಟ್ಟಾ ಘಟಕದ ವತಿಯಿಂದ ಹಟ್ಟಿ ಚಿನ್ನದ ಗಣಿ ಕಂಪನಿಯ ಮುಖ್ಯ ಏಜೆಂಟ್ ಹಾಗೂ ಪ್ರಭಾರಿ ಉಪ ಪ್ರಧಾನ ವ್ಯವಸ್ಥಾಪಕರಾದ ಮಂಜುನಾಥ ಕಡ್ಲೇರ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ರಸ್ತೆಯನ್ನು ತಕ್ಷಣ ದುರಸ್ತಿ ಮಾಡುವಂತೆ ಮನವಿಯಲ್ಲಿ ಆಗ್ರಹಿಸಲಾಗಿದ್ದು, ರಸ್ತೆ ಸಮಸ್ಯೆ ಬಗೆಹರಿಯದಿದ್ದಲ್ಲಿ ತೀವ್ರ ಹೋರಾಟ ಕೈಗೊಳ್ಳುವುದಾಗಿ ರೈತ ಸಂಘ ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ರೈಲಿನಿಂದ ಇಳಿಯುವಾಗ ಬಿದ್ದು : ಕಾರ್ಮಿಕ ಸಾವು

ಈ ವೇಳೆ ಕೆಪಿಆರ್ ಎಸ್ ಲಿಂಗಸೂಗೂರು ತಾಲೂಕು ಸಂಚಾಲರಾದ ನಿಂಗಪ್ಪ ಎಂ ವೀರಾಪೂರು, ತಾಲ್ಲೂಕು ಮುಖಂಡರು ಮಹಾಂತೇಶ, ಗೋಪಾಲ್ ಬಂಡೋಳ್ಳಿ, ಕಾರ್ಮಿಕ ಸಂಘದ ಕಾರ್ಯದರ್ಶಿ ಯಂಕೋಬ ಮಿಯ್ಯಾಪುರ,ಯಲಗಟ್ಟಾ ಗ್ರಾಮದ ಕೆಪಿಆರ್ ಎಸ್ ಅಧ್ಯಕ್ಷರಾದ ನಾಗಪ್ಪ, ಕಾರ್ಯದರ್ಶಿ ಅಂಬಣ್ಣ ಮಾಲಿ ಪಾಟೀಲ್, ಖಜಾಂಚಿಯಾದ ಅಲೇಸಾಬ ಪೂಜಾರಿ, ಭೀಮೇಶ್ ಯಲಗಟ್ಟಾ, ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗದ ಸಂಚಾರ ವ್ಯವಸ್ಥೆಯಲ್ಲಿ ಅರಾಜಕತೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಾಗರಿಕರು ಹೈರಾಣು

ಒಮ್ಮೆ ಶಾಂತ, ಶಿಕ್ಷಣ ಹಾಗೂ ಸಂಸ್ಕೃತಿಯ ತಾಣವಾಗಿದ್ದ ಶಿವಮೊಗ್ಗ ನಗರ ಇತ್ತೀಚಿನ...

ತುಮಕೂರು | ಗಾಂಧೀ ತತ್ವಗಳಿಗೆ ವಿಶ್ವ ಮನ್ನಣೆ : ಡಾ. ಜಿ.ಪರಮೇಶ್ವರ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಹಿಂಸಾ ತತ್ವಗಳಿಗೆ ಇಡೀ ವಿಶ್ವದಲ್ಲಿಯೇ ಮನ್ನಣೆ ದೊರೆತಿದೆ...

ಶಿವಮೊಗ್ಗ | ಸತ್ಯ – ಅಹಿಂಸೆ ಪ್ರಬಲ ಅಸ್ತ್ರಗಳು : ಡಾ. ಟಿ. ಅವಿನಾಶ್

ಶಿವಮೊಗ್ಗ, ಭಾರತ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಡಲು ಮಹಾತ್ಮ ಗಾಂಧೀಜಿಯವರು ಬಳಸಿದ ಅಸ್ತ್ರಗಳೆಂದರೆ...

ಉಡುಪಿ | ಕಾರ್ಕಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಹಾತ್ಮಾ ಗಾಂಧೀಜಿ ಹಾಗೂ ಶಾಸ್ತ್ರಿ ಜಯಂತಿ ಆಚರಣೆ

ದೇಶದಲ್ಲಿ ಸಮಾನತೆಯನ್ನು ಬಯಸಿದ್ದೇ ಗಾಂಧೀಜಿಯವರ ಹತ್ಯೆಗೆ ಕಾರಣವಾಯಿತು, ಶೂದ್ರ ಮತ್ತು ಅತ್ಯಂತ...

Download Eedina App Android / iOS

X