ರಾಯಚೂರು | ಹೊರಗುತ್ತಿಗೆ ಕಾರ್ಮಿಕರಿಗೆ ಐದು ತಿಂಗಳಿಂದ ಸಿಗದ ವೇತನ

Date:

Advertisements

ಕವಿತಾಳ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕೆಲಸಮಾಡುತ್ತಿರುವ ‘ಡಿ’ ಗ್ರೂಪ್ ಕಾರ್ಮಿಕರಿಗೆ ಕಳೆದ ಐದು ತಿಂಗಳಿಂದ ವೇತನ ಪಾವತಿಸಿಲ್ಲ ಎಂದು ಕಾರ್ಮಿಕರು ಆರೋಪಿಸಿದ್ದಾರೆ.

ಅವಿಭಜಿತ ಮಾನ್ವಿ ತಾಲೂಕು ವ್ಯಾಪ್ತಿಯ ವಿವಿಧ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುತ್ತಿರುವ 30ಕ್ಕೂ ಹೆಚ್ಚು ಕಾರ್ಮಿಕರಿಗೆ ವೇತನ ಸಿಗದೇ ಕಂಗಾಲಾಗಿದ್ದಾರೆ. ಮನೆ ನಿರ್ವಹಣೆ, ಮಕ್ಕಳ ಓದಿನ ಖರ್ಚು ಸೇರಿದಂತೆ ವಿವಿಧ ರೀತಿಯ ವೆಚ್ಚಗಳನ್ನು ಭರಿಸಲಾಗದೆ ಪರದಾಡುತ್ತಿದ್ದಾರೆ.

ಕವಿತಾಳ ಆಸ್ಪತ್ರೆಯಲ್ಲಿ ಗ್ರೂಪ್ ‘ಡಿ’ ಮತ್ತು ನಾನ್ ಕ್ಲಿನಿಕ್ ಕಾರ್ಮಿಕರಾಗಿ ಏಳು ಮಂದಿ ಕೆಲಸ ಮಾಡುತ್ತಿದ್ದೇವೆ. ನಮಗೆ ತಿಂಗಳಿಗೆ 11,500 ರೂ. ವೇತನವಿದೆ. ಅದನ್ನೂ ಐದು ತಿಂಗಳಿಂದ ಕೊಟ್ಟಿಲ್ಲ. ಹೀಗಾದರೆ ನಾವು ಜೀವನ ನಡೆಸುವುದಾದರೂ ಹೇಗೆ? ಈಗ ಮೂರು ತಿಂಗಳಿಂದ ಕೆಲಸದಿಂದ ತೆಗೆದು ಹಾಕಿದ್ದಾರೆ ಎಂದು ಹೆಸರು ಬಹಿರಂಗಪಡಿಸಲು ಇಚ್ಛಿಸದ ಕಾರ್ಮಿಕರೊಬ್ಬರು ಮಾದ್ಯಮದವರ ಎದುರು ಅಳಲು ತೋಡಿಕೊಂಡಿದ್ದಾರೆ.

Advertisements

ಮನೆಯಲ್ಲಿ ವಯಸ್ಸಾದ ತಂದೆ-ತಾಯಿ ಇದ್ದಾರೆ. ಎರಡು ಜನ ಮಕ್ಕಳು ಶಾಲೆಗೆ ಹೋಗುತ್ತಾರೆ. ಪತ್ನಿಗೆ ಆರೋಗ್ಯ ಸಮಸ್ಯೆ. ಹೀಗಾಗಿ ನನ್ನ ಮೇಲೆಯೇ ಹೆಚ್ಚಿನ ಜವಾಬ್ದಾರಿ ಇದೆ. ನಮಗಿರುವುದು ಇದೊಂದೇ ಸಂಬಳ. ಬೇರೆ ಆದಾಯದ ಮೂಲಗಳಿಲ್ಲ. ಬರುವ ಸಂಬಳದಲ್ಲೇ ಪ್ರತೀ ತಿಂಗಳು ಮನೆಗೆ ದಿನಸಿ, ಅಪ್ಪ-ಅಮ್ಮನ ಔಷಧ, ಮಕ್ಕಳ ಶಿಕ್ಷಣದ ಖರ್ಚು ನಿಭಾಯಿಸಬೇಕಿದೆ. ಗುತ್ತಿಗೆ ಏಜೆನ್ಸಿ ಬದಲಾವಣೆ ಹಿನ್ನೆಲೆಯಲ್ಲಿ ನಮ್ಮನ್ನು ಕೆಲಸದಿಂದ ತೆಗೆಯಲಾಗಿದೆ ಎನ್ನಲಾಗುತ್ತಿದೆ. ಹಿಂದೆ ಕೆಲಸ ಮಾಡಿದ ಐದು ತಿಂಗಳ ವೇತನವಾದರೂ ಪಾವತಿಸಿದರೆ ಅನುಕೂಲವಾಗುತ್ತದೆ ಎಂದು ಕಾರ್ಮಿಕರು ಹೇಳುತ್ತಾರೆ.

ಪ್ರತಿನಿತ್ಯ 200ಕ್ಕೂ ಅಧಿಕ ಹೊರ ರೋಗಿಗಳು ಚಿಕಿತ್ಸೆಗೆ ಬರುತ್ತಾರೆ. ಸಿಬ್ಬಂದಿ ಕೊರತೆಯಿಂದ ಆಸ್ಪತ್ರೆಯಲ್ಲಿ ಸ್ವಚ್ಛತೆ ಕೈಗೊಳ್ಳಲು ಮತ್ತು ರೋಗಿಗಳನ್ನು ನಿಭಾಯಿಸಲು ಸಮಸ್ಯೆಯಾಗುತ್ತಿದೆ ಎನ್ನುತ್ತಾರೆ ಸಮುದಾಯ ಆರೋಗ್ಯ ಕೇಂದ್ರದ ವೈದ್ಯರು.

ಸಂಬಂಧ ಪಟ್ಟ ವೈದ್ಯರು ಆದಷ್ಟು ಬೇಗ ನಮ್ಮ ಸಮಸ್ಯೆ ಬಗೆ ಹರಿಸಿ, ವೇತನ ಪಾವತಿಗೆ ಕ್ರಮ ಕೈಗೊಳ್ಳಲಿ ಎಂದು ಆಗ್ರಹಿಸುತ್ತಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಕಲಬುರಗಿ | ಯುವಕರು ಮಾರಕಾಸ್ತ್ರ ಹಿಡಿದ ವಿಡಿಯೊ ವೈರಲ್: ನಾಲ್ವರು ಯುವಕರ ವಿರುದ್ಧ ಎಫ್‌ಐಆರ್

ಕಲಬುರಗಿಯ ದೇವಿ ನಗರದಲ್ಲಿ ನಾಲ್ವರು ಯುವಕರು ಕೈಯಲ್ಲಿ ಮಾರಕಾಸ್ತ್ರಗಳು ಹಿಡಿದು ವಿಡಿಯೋ...

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

Download Eedina App Android / iOS

X