ರಾಯಚೂರು | ರಾತ್ರಿಯಿಡೀ ಸುರಿದ ಮಳೆಯಿಂದ ತೋಯ್ದ ಭತ್ತ; ಜನಜೀವನ ಅಸ್ತವ್ಯಸ್ತ

Date:

Advertisements

ರಾಯಚೂರು ನಗರದ ಎಪಿಎಂಸಿಯಲ್ಲಿ ಮಾರಾಟಕ್ಕೆ ತಂದ ಭತ್ತ ಮಳೆಯ ನೀರಿನಿಂದ ತೋಯ್ದು ಲಕ್ಷಾಂತರ ಮೌಲ್ಯದ ಮಾಲು ಹಾನಿಯಾಗಿದೆ.

ಬಿಸಿಲಿನಿಂದ ತತ್ತರಿಸಿದ್ದ ಜನರಿಗೆ ರಾತ್ರಿಯಿಡೀ ಸುರಿದ ಮಳೆಯಿಂದ ತಂಪು ವಾತಾವರಣ ಆಹ್ಲಾದ ತಂದರೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನ ಜೀವನ ಅಸ್ತವ್ಯಸ್ತಗೊಂಡಿರುವ ಘಟನೆ ನಡೆದಿದೆ.

“ತೆಲಂಗಾಣ, ಆಂಧ್ರಪ್ರದೇಶ ಸೇರಿದಂತೆ ಜಿಲ್ಲೆಯ ರೈತರ ಭತ್ತ ನೀರುಪಾಲಾಗಿದೆ. ಕೆಲ ವರ್ತಕರು ಖರೀದಿಸಿದ್ದ ಭತ್ತವೂ ನೀರನಲ್ಲಿ ತೆಲುವಂತಾಗಿದೆ. ಸಾಯಿ ಕೃಪಾ ಟ್ರೇಡರ್ಸ್‌ಗೆ ಸೇರಿದ ನಾಲ್ಕು ನೂರು ಚೀಲ ನೀರಿನಲ್ಲಿ ಆವೃತ್ತವಾಗಿದೆ. ಎಪಿಎಂಸಿಯಲ್ಲಿ ರೈತರ ಬೆಳೆಗಳಿಗೆ ರಕ್ಷಣೆ ಇಲ್ಲದಂತಾಗಿ ಪ್ರತಿಬಾರಿಯೂ ಆರ್ಥಿಕ ನಷ್ಟಕ್ಕೆ ಕಾರಣವಾಗುತ್ತಿದೆ. ರೈತರಿಂದ ಕರ ಸಂಗ್ರಹಿಸುವ ಎಪಿಎಂಸಿ ರೈತರ ಮಾಲಿಗೆ ರಕ್ಷಣೆ ನೀಡುತ್ತಿಲ್ಲ. ಮಳೆಯಿಂದ ಉಂಟಾಗಿರುವ ಹಾನಿಗೆ ಒಳಗಾಗಿರುವ ಸಂತ್ರಸ್ಥ ರೈತರಿಗೆ ಪರಿಹಾರ ಒದಗಿಸಬೇಕು” ಎಂದು ರೈತರು ಒತ್ತಾಯಿಸಿದರು.

Advertisements

ತಾಲೂಕಿನ ಅನೇಕ ಗ್ರಾಮಗಳಲ್ಲಿಯೂ ರೈತರ ಜಮೀನಿಗೆ ನೀರು ನುಗ್ಗಿ ಸಮಸ್ಯೆಯಾಗಿದೆ. ಚಂದ್ರಬಂಡಾ, ಕಡಗಂದೊಡ್ಡಿ, ಸಿಂಗನೋಡಿ, ಸಗಮಕುಂಟಾ ಸೇರಿದಂತೆ ಹತ್ತಾರು ಗ್ರಾಮಗಳಲ್ಲಿ ಬೆಳೆ ನಷ್ಟವಾಗಿದೆ. ಮಾವು, ಮೋಸಂಬಿ, ಪಪ್ಪಾಯಿ, ದಾಳಿಂಬೆ ಫಸಲು ಗಾಳಿಗೆ ನೆಲಕ್ಕುರುಳಿವೆ.
ರಾತ್ರಿ ನಿದ್ದೆಯಲ್ಲಿದ್ದ ಜನರಿಗೆ ಏಕಾಏಕಿ ಜೋರಾದ ಮಳೆಯಿಂದಾಗಿ ಜಾಗರಣೆ ಮಾಡುವಂತಾಗಿದೆ. ಮಳೆಯಿಂದ ಆಶ್ರಯ ಪಡೆಯಲು ಜನರು ಬೇರೆ ಸ್ಥಳಕ್ಕೆ ತೆರಳುವಂತಾಗಿದೆ.

ಮಳೆಯಿಂದ ಅವಾಂತರ

ನಗರದ ತಗ್ಗುಪ್ರದೇಶಗಳಿಗೆ ನೀರು ನುಗ್ಗಿ ಜನರು ಪರತಪಿಸುವಂತಾಯಿತು. ಬಿಸಿಲಿನಿಂದ ತತ್ತರಿಸಿ ಹೋಗಿದ್ದ ಜನರಿಗೆ ಮೊದಲ ಮಳೆಯೇ ಸಮಸ್ಯೆಯನ್ನು ಸೃಷ್ಟಿಸಲು ಕಾರಣವಾಯಿತು.
ರಾಯಚೂರು ತಾಲೂಕಾದ್ಯಂತ ರಾತ್ರಿಯಿಡೀ ಬಾರಿ ಮಳೆಯಾಗಿದ್ದು, ಯರಗೇರಾ ಹೋಬಳಿಯಲ್ಲಿ 136 ಮಿಲಿ ಮೀಟರ್ ದಾಖಲೆ ಮಳೆಯಾಗಿದೆ ಎಂದು ತಿಳಿದುಬಂದಿದೆ.

ಯರಗೇರಾ ಹೋಬಳಿ ವ್ಯಾಪ್ತಿಯಲ್ಲಿ 136 ಮಿಮೀ ಮಳೆಯಾಗಿ ಮೊದಲ ಮಳೆ ದಾಖಲೆ ನಿರ್ಮಿಸಿದೆ. ಇನ್ನು ಸಿಂಗನೋಡಿ ವ್ಯಾಪ್ತಿಯಲ್ಲಿ 52.5 ಮಿಮೀ ಅತಿ ಕಡಿಮೆ ಮಳೆಯಾಗಿದೆ. ಮಿಟ್ಟಿ ಮಲ್ಕಾಪೂರದಲ್ಲಿ 132 ಮಿಮೀ ಮಳೆಯಾಗಿದೆ. ಕಲಮಲ ಹೋಬಳಿಯಲ್ಲಿ, 115 ಮಿಮೀ ಮಳೆಯಾಗಿದೆ. ಬೀಜನಗೇರಾದಲ್ಲಿ 111ಮೀಮೀ ಮಳೆಯಾಗಿದೆ. ಶಾಖವಾದಿಯಲ್ಲಿ 105.5 ಮಿಮೀ ಮಳೆಯಾಗಿದೆ. ಮರ್ಚೆಟಾಳ ವ್ಯಾಪ್ತಿಯಲ್ಲಿ 102.5 ಮಿಮೀ ಮಳೆಯಾಗಿದೆ. ಪೂರ್ತಿಪ್ಲಿಯಲ್ಲಿ 89ಮಿಮೀ ಮಳೆಯಾಗಿದೆ.

ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | ಪ್ರತಿಯೊಬ್ಬರಿಗೂ ಕಾನೂನಿನ ಅರಿವು ಅತ್ಯಗತ್ಯ: ನ್ಯಾ ಎ ಅರುಣ ಕುಮಾರಿ

ಕಾಡ್ಲೂರು ವ್ಯಾಪ್ತಿಯಲ್ಲಿ 87ಮಿಮೀ ಮಳೆಯಾಗಿದೆ. ಯಾಪಲದಿನ್ನಿ ವ್ಯಾಪ್ತಿಯಲ್ಲಿ 87
ಮಿಮೀ ಮಳೆಯಾಗಿದೆ. ಲಿಂಗನಖಾನದೊಡ್ಡಿಯಲ್ಲಿ 84ಮಿಮೀನಷ್ಟು ಮಳೆಯಾಗಿದೆ. ಚಂದ್ರಬಂಡಾ ವ್ಯಾಪ್ತಿಯಲ್ಲಿ 64 ಮಿಮೀ ಮಳೆಯಾಗಿದೆ. ಚಿಕ್ಕಸೂಗುರು ವ್ಯಾಪ್ತಿಯಲ್ಲಿ 63.5 ಮಿಮೀ ಮಳೆಯಾಗಿದೆ.
ಗಾಣದಾಳ ವ್ಯಾಪ್ತಿಯಲ್ಲಿ 63.5 ಮಿಮೀ ಮಳೆಯಾಗಿದೆ. ಇಡಪನೂರಿನಲ್ಲಿ 59 ಮಿಮೀ ಮಳೆಯಾಗಿದೆ. ಸಿಂಗನೋಡಿ ವ್ಯಾಪ್ತಿಯಲ್ಲಿ 52.5 ಮಿಮೀ ಮಳೆ ದಾಖಲಾಗಿದೆ.

ವರದಿ : ಹಫೀಜುಲ್ಲ

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಅಧಿಕ ಮಳೆಯಿಂದ ಹಾನಿಗೀಡಾದ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಿ : ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್

 "ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಿಂದ ಸಾಕಷ್ಟು ಮಳೆಯಾಗುತ್ತಿದ್ದು, ಮಳೆಯಿಂದ ಹಾನಿಗೊಳಗಾಗುವ ಪ್ರದೇಶಗಳ ಸಾರ್ವಜನಿಕರ...

ಬೀದರ್‌ | ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಸಚಿವದ್ವಯರ ಭೇಟಿ; ಪರಿಶೀಲನೆ

ಕಮಲನಗರ ಹಾಗೂ ಔರಾದ್‌ ತಾಲೂಕಿನಲ್ಲಿ ಅಧಿಕ ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಉಸ್ತುವಾರಿ...

ಹಾವೇರಿ | ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಅರ್ಜಿ ಆಹ್ವಾನ

"ಪರಿಶಿಷ್ಟ ವರ್ಗದ ಜನಾಂಗದ ಏಳಿಗಾಗಿ ಶ್ರಮಿಸಿದ ಅರ್ಹ ವ್ಯಕ್ತಿಗಳಿಗೆ ಶ್ರೀ ಮಹರ್ಷಿ...

ಉಡುಪಿ | ಶಾಸಕ ಯಶ್ಪಾಲ್ ಸುವರ್ಣರವರ ಮೇಲೆ ಕಠಿಣ ಸಾಂವಿಧಾನಿಕ ಕ್ರಮ ಜರುಗಿಸಿ – ಕೆ ಫಣಿರಾಜ್

ತಮ್ಮ ಶಾಸಕ ಸ್ಥಾನದ ಸಂವಿಧಾನಿಕ ಮರ್ಯಾದೆಯನ್ನು ಮೀರಿ ವರ್ತಿಸಿರುವ ಉಡುಪಿಯ ಶಾಸಕ...

Download Eedina App Android / iOS

X