ರಾಯಚೂರು |ನರೇಗಾ ಯೋಜನೆಯಲ್ಲಿ ಅವ್ಯವಹಾರ; ಅಮಾನತಿಗೆ ಒತ್ತಾಯ

Date:

Advertisements

ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯ 15 ನೇ ಸಾಲಿನ ಅನುದಾನದಲ್ಲಿ ಕೈಗೊಂಡ ಕಾಮಗಾರಿಗಳಲ್ಲಿ ಬಾರಿ ಅವ್ಯವಹಾರ ಮತ್ತು ಭ್ರಷ್ಟಚಾರ ನಡೆದಿದ್ದು ತನಿಖೆ ಮಾಡಿ ತಪ್ಪಿತಸ್ಥರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಬಹುಜನ ಸಂಘರ್ಷ ಸಮಿತಿ ವತಿಯಿಂದ ತಾಲ್ಲೂಕು ಕಾರ್ಯ ನಿರ್ವಾಹಕ ಅಧಿಕಾರಿಗೆ ದೂರು ಸಲ್ಲಿಸಿದರು.

ದೇವದುರ್ಗ ವಿಧಾನಸಭಾ ಕ್ಷೇತ್ರದ ಅರಕೇರಾ ತಾಲೂಕಿನ ಜಾಗಿರ ಜಾಡಲದಿನ್ನಿ ಗ್ರಾಮ ಪಂಚಾಯತಿಯಲ್ಲಿ 2024-25ನೇ ಸಾಲಿನ 15ನೇ ಹಣಕಾಸು ಯೋಜನೆಯ ಅನುದಾನದಲ್ಲಿ ಬರುವ ಕಾಮಗಾರಿಗಳನ್ನು ಕಳಪೆಯಾಗಿ ನಿರ್ವಹಿಸಿ ಬೋಗಸ್ ಬಿಲ್ ಸೃಷ್ಟಿಸಿ ಆಕ್ರಮ ಹಣ ಅವ್ಯವಹಾರ ನಡೆಸಿದ ಪಂಚಾಯತಿ ಅಭಿವೃಧಿ ಅಧಿಕಾರಿ ಮುರಳಿ ಮೋಹನ್ ಅವರಿಗೆ ಅಮಾನತುಗೊಳಿಸಬೇಕು ಎಂದು ದೂರಿನಲ್ಲಿ ತಿಳಿಸಿದರು.

ಈ ಸುದ್ಡಿ ಓದಿದ್ದೀರಾ? ರಾಯಚೂರು | ಸಿಡಿಲು ಬಡಿದು ಕುರಿಗಾಯಿ ಸಾವು

Advertisements

ನರೇಗಾ ಯೋಜನೆಯಡಿಯಲ್ಲಿ ಬರುವ ಜಾನುವಾರು ಶೆಡ್ಡುಗಳ ನಿರ್ಮಾಣ, ಬದು ನಿರ್ಮಾಣ, ರಸ್ತೆ, ಶೌಚಾಲಯ ನಿರ್ಮಾಣ ಸೇರಿದಂತೆ ಅನೇಕ ಕಾಮಗಾರಿಗಳನ್ನು ಅಕ್ರಮವಾಗಿ ಬೋಗಸ್ ಬಿಲ್ ಸೃಷ್ಟಿಸಿ ಅವ್ಯವಹಾರ ಹಾಗೂ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಕೂಡಲೇ ಪರಿಶೀಲಿಸಿ ತಕ್ಷಣ ತಪ್ಪಿತಸ್ಥರಿಗೆ ಅಮಾನತು ಮಾಡಬೇಕು ಎಂದು ಸಂಘಟನೆಯ ಮುಖಂಡ ಶರಣಪ್ಪ ಬಲ್ಲಟಗಿ ಹೇಳಿದರು.

ಸದರಿ ಕಾಮಗಾರಿಗಳನ್ನು ಕ್ರೀಯಾ ಯೋಜನೆಯಲ್ಲಿಯ, ಯೋಜನಾ ವರದಿ ಅಥವಾ ಅಂದಾಜು ಪತ್ರಿಕೆಯ ಪ್ರಕಾರ ಕಾಮಗಾರಿಗಳನ್ನು ನಿರ್ವಹಿಸದೇ ತಮಗೆ ಮನಸೋ ಇಚ್ಛೆ ತೋರಿದಂತೆ ಮಾಡಿದ್ದಾರೆ. ಇವರ ಬೇಜವಬ್ದಾರಿ ಮತ್ತು ಕರ್ತವ್ಯ ಲೋಪದಿಂದ ಸರಕಾರದ ಹಣ ದುರುಪಯೋಗವಾಗುತ್ತಿದೆ ಎಂದು ಆರೋಪಿಸಿದರು.

ದೂರನ್ನು ಗಂಭೀರವಾಗಿ ಪರಿಗಣಿಸಿ ಕೂಡಲೇ ತನಿಖೆ ತಂಡ ನೇಮಿಸಿ ಸೂಕ್ತ ತನಿಖೆ ಮಾಡಿ ತಪ್ಪಿತಸ್ಥರ ಮೇಲೆ ಕಾನೂನು ಕ್ರಮ ಕೈಗೊಂಡು ಸೇವೆಯಿಂದ ಅಮಾನತ್ತುಗೊಳಿಸಬೇಕೆಂದು ಒತ್ತಾಯಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X