ರಾಯಚೂರು | ಪಿಡಿಒ ಪ್ರಶ್ನೆಪತ್ರಿಕೆ ಸೋರಿಕೆ ; ಪ್ರತಿಭಟಿಸಿದ್ದ ಅಭ್ಯರ್ಥಿಗಳ ವಿರುದ್ಧ ಎಫ್‌ಐಆರ್!

Date:

Advertisements

ರಾಯಚೂರು ಜಿಲ್ಲೆಯಲ್ಲಿ ಪಿಡಿಓ ಹುದ್ದೆಗಳಿಗೆ ನಡೆದ ಪರೀಕ್ಷೆಯಲ್ಲಿ ವಿಳಂಬ ಮಾಡಿ ಪ್ರಶ್ನೆಪತ್ರಿಕೆ ನೀಡಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ 12 ಜನ ಅಭ್ಯರ್ಥಿಗಳ ವಿರುದ್ದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಭಾನುವಾರ ಸಿಂಧನೂರು ಕಾಲೇಜಿನಲ್ಲಿ ನಡೆದ ಪರೀಕ್ಷೆಯ ವೇಳೆ ಪ್ರಶ್ನೆಪತ್ರಿಕೆ ವಿಳಂಬವಾಗಿ ನೀಡಿದ್ದನ್ನು ಖಂಡಿಸಿ ಪರೀಕ್ಷಾ ಕೇಂದ್ರ ಮುಂದೆ ಪ್ರತಿಭಟನೆ ನಡೆಸಿ ಪೇಪರ್ ಲೀಕ್ ಆಗಿದೆ ಎಂದು ಆರೋಪಿಸಿದ್ದರು.

ಈಗ ಪ್ರತಿಭಟನೆ ನಡೆಸಿದವರ ಮೇಲೆ ಸಿಂಧನೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸಿಂಧನೂರು ಪಟ್ಟಣದ ಪರೀಕ್ಷಾ ಕೇಂದ್ರಗಳಲ್ಲಿ ನಡೆದ ಅವ್ಯವಸ್ಥೆ ಕುರಿತು ಪರೀಕ್ಷಾರ್ಥಿಗಳು ವಿರೋಧಿಸಿ ದಿಢೀರ್ ರಸ್ತೆ ತಡೆದು ಪ್ರತಿಭಟನೆ ನಡೆಸಿ, ಪರೀಕ್ಷಾ ಪ್ರಾಧಿಕಾರದ ಎಡವಟ್ಟಿಗೆ ಆಕ್ಷೇಪ ವ್ಯಕ್ತಪಡಿಸಿದ್ದರು.

Advertisements

ಇದನ್ನು ಓದಿದ್ದೀರಾ? ಮಂಗಳೂರು | ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್ ಸಲ್ಲಿಸಿದ್ದ ಅರ್ಜಿ ತಿರಸ್ಕೃತ

ಪರೀಕ್ಷಾ ಕೇಂದ್ರ ಮೇಲ್ವಿಚಾರಕ ಬಸವರಾಜ ತಡಕಲ್ ನೀಡಿದ ದೂರಿನ ಮೇರೆಗೆಪ್ರತಿಭಟನೆ ನಡೆಸಿದವರ ವಿರುದ್ಧ ದೂರು ದಾಖಲಾಗಿದೆ. ಅಭ್ಯರ್ಥಿಗಳಿಗೆ ಆಗಿರುವ ತೊಂದರೆ ನಿವಾರಿಸಬೇಕಾದವರೇ, ಈಗ ಪ್ರಕರಣ ದಾಖಲಿಸಿರುವುದಕ್ಕೆ ವಿರೋಧ ವ್ಯಕ್ತವಾಗಿದೆ. ದೂರು ದಾಖಲಿಸಿದವರ ಹಾಗೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವಿರುದ್ಧ ಕೂಡ ಕೇಸು ದಾಖಲಿಸಲು ಅಭ್ಯಥಿಗಳು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X