ರಾಯಚೂರು | ಪಿಡಿಒ ಪ್ರಶ್ನೆಪತ್ರಿಕೆ ಸೋರಿಕೆಯಾಗಿಲ್ಲ: ಪರೀಕ್ಷಾ ಮುಖ್ಯಸ್ಥ ಸ್ಪಷ್ಟನೆ

Date:

Advertisements

ಪಿಡಿಒ ಪ್ರಶ್ನೆಪತ್ರಿಕೆಗಳನ್ನು ಕೊಠಡಿಗೆ ಕೊಡಬೇಕಾದಾಗ ಪ್ರಶ್ನೆಪತ್ರಿಕೆಯ ಕ್ರಮ ಸಂಖ್ಯೆಗಳು ಅದಲು ಬದಲಾಗಿತ್ತು. ಇದನ್ನು ಸರಿಪಡಿಸುವಷ್ಟರಲ್ಲಿ ಒಬ್ಬ ವಿದ್ಯಾರ್ಥಿ ಸೋರಿಕೆಯಾಗಿದೆಯೆಂದು ಅನುಮಾನಪಟ್ಟು ಗೊಂದಲ ಸೃಷ್ಟಿಸಿದ್ದಾರೆ ಎಂದು ಪರೀಕ್ಷಾ ಮುಖ್ಯಸ್ಥ ಬಸವರಾಜ್ ತಡಕಲ್ ಸ್ಪಷ್ಟೀಕರಣ ನೀಡಿದ್ದಾರೆ.

“ಬೆಳಿಗ್ಗೆ 9-30ಕ್ಕೆ ವಿಡಿಯೋ ಕ್ಯಾಮೆರಾ ಸಹಿತ 4 ಪೆಟ್ಟಿಗೆಗಳಲ್ಲಿ ಪ್ರಶ್ನೆಪತ್ರಿಕೆಗಳನ್ನು ಪರೀಕ್ಷೆ ಕೇಂದ್ರಕ್ಕೆ ತರಲಾಯಿತು. ಅವುಗಳನ್ನು ತೆರೆದಿದ್ದು, ಪರೀಕ್ಷಾ ಕೊಠಡಿಗಳಿಗೆ ಕಳುಹಿಸಲಾಯಿತು. ಯಾವುದೇ ಗೊಂದಲವಿಲ್ಲದೆ ಪ್ರಶ್ನೆಪತ್ರಿಕೆಗಳನ್ನು ಕೊಠಡಿಗೆ ತಲುಪಿಸುವುದರಲ್ಲಿ ಅದಲುಬದಲು ಕಾರಣಕ್ಕೆ ಇದನ್ನು ಸರಿಪಡಿಸುವಷ್ಟರಲ್ಲಿ ಒಬ್ಬ ಅಭ್ಯರ್ಥಿ ಮೊದಲೇ ಪ್ರಶ್ನೆಪತ್ರಿಕೆಗಳನ್ನು ತೆರೆಯಲಾಗಿದೆಯೆಂದು ಆರೋಪ ಮಾಡಿದರು” ಎಂದರು.

“ಸಮಾಧಾನಪಡಿಸಿದರೂ ಅರ್ಥ ಮಾಡಿಕೊಳ್ಳದೇ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆಯೆಂದು ಕೂಗುತ್ತ ಹೊರನಡೆದು ಕೆಲವು ವಿದ್ಯಾರ್ಥಿಗಳು ಹಿಂದೆ ಸೇರಿ ಗೊಂದಲದಿಂದ ಇಷ್ಟೊಂದು ಸಮಸ್ಯೆಯಾಗಿದೆ” ಎಂದು ಹೇಳಿದರು.

Advertisements

ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ವಸತಿ ಶಾಲೆಗಳಲ್ಲಿ ವಿಶೇಷಚೇತನರಿಗೆ ನೇರಪ್ರವೇಶ ಕಲ್ಪಿಸಿ: ಆಯುಕ್ತ ದಾಸ್ ಸೂರ್ಯವಂಶಿ ಸೂಚನೆ

ಪ್ರತಿಭಟನೆ ಮುಂದುವರೆದಿದೆ: ಪಿಡಿಒ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪ್ರಶ್ನೆಪತ್ರಿಕೆ ವಿತರಣೆ ಎಡವಟ್ಟು ಆರೋಪಿಸಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯದೆ ಕಾಲೇಜಿನ ಮುಂಭಾಗ ವಿವಿಧ ವಿದ್ಯಾರ್ಥಿ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

Download Eedina App Android / iOS

X