ರಾಯಚೂರು | ಒಳ ಮೀಸಲಾತಿ ಜಾರಿಗೆ ನೀಡಿರುವ ಸಮ್ಮತಿ ರದ್ದತಿ ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ

Date:

Advertisements

ಸುಪ್ರಿಂಕೋರ್ಟಿನ ನ್ಯಾಯಮೂರ್ತಿ ಅರುಣ ಮಿಶ್ರಾ ನೇತೃತ್ವದ ಐದು ಮಂದಿ ನ್ಯಾಯಮೂರ್ತಿಗಳ ಪೀಠವು ಎಸ್‌ಸಿ ಮೀಸಲಾತಿಯಲ್ಲಿ ಒಳ ಮೀಸಲಾತಿ ಜಾರಿ ಮಾಡಲು ಸಮ್ಮತಿಸಿದೆ. ಪೀಠದ ಆದೇಶವನ್ನು ರದ್ದುಗೊಳಿಸುವಂತೆ ಕೋರಿ ಸುಪ್ರಿಂಕೋರ್ಟಿಗೆ ಮಧ್ಯಸ್ಥಿಕೆ ಅರ್ಜಿ ಸಲ್ಲಿಸಲಾಗಿದೆ ಎಂದು ಡಾ. ಬಿ.ಆರ್ ಅಂಬೇಡ್ಕರ್ ಪರಿಶಿಷ್ಟ ಜಾತಿಗಳ ಒಕ್ಕೂಟದ ರಾಜ್ಯಾಧ್ಯಕ್ಷ ಮಹೇಂದ್ರ ಮಿತ್ರ ಹೇಳಿದ್ದಾರೆ.

ರಾಯಚೂರಿನಲ್ಲಿ ಸುದ್ದಿಗೋ‍ಷ್ಠಿ ನಡೆಸಿ ಮಾತನಾಡಿದ ಅವರು, “ಸಂವಿಧಾನದಲ್ಲಿ ಒಳಮೀಸಲಾತಿಗೆ ಅವಕಾಶವಿಲ್ಲ. ಪಂಜಾಬ್‌ನಲ್ಲಿ ಒಳ ಮೀಸಲಾತಿಯನ್ನು ಚಂಡೀಗಡ ಹೈಕೋರ್ಟ್‌ ರದ್ದುಗೊಳಿತ್ತು. ಅದನ್ನು ಪ್ರಶ್ನಿಸಿ ಪಂಜಾಬ್ ಸರ್ಕಾರ 2014ರಲ್ಲಿ ಸುಪ್ರಿಂಕೋರ್ಟ್‌ ಮೊರೆ ಹೋಗಿತ್ತು. ನ್ಯಾಯಾಲಯವು ಅರ್ಜಿಯನ್ನು ಸಂವಿಧಾನ ಪೀಠಕ್ಕೆ ವರ್ಗಾವಣೆ ಮಾಡಿತ್ತು. 2020ರಲ್ಲಿ ನ್ಯಾಯಮೂರ್ತಿ ಅರುಣ ಮಿಶ್ರಾ ನೇತೃತ್ವದ ಐದು ನ್ಯಾಯಮೂರ್ತಿ ಒಳ ಮೀಸಲಾತಿ ಜಾರಿಗೆ ಸಮ್ಮತಿ ನೀಡಿತ್ತು. ಆ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲಾಗಿದೆ. ಅರ್ಜಿಯನ್ನು ಏಳು ಮಂದಿ ನ್ಯಾಯಮೂರ್ತಿಗಳ ಪೀಠಕ್ಕೆ ವರ್ಗಾಯಿಸಲಾಗಿದೆ” ಎಂದು ವಿವರಿಸಿದ್ದಾರೆ.

“ಏಳು ಮಂದಿ ನ್ಯಾಯಮೂರ್ತಿಗಳ ಪೀಠದಲ್ಲಿ ವಿಚಾರಣೆ ನಡೆಯಬೇಕಿದೆ. ಒಳ ಮೀಸಲಾತಿ ಬೇಕೆನ್ನುವ ಸಂಘಟನೆಗಳು ಸುಪ್ರಿಂಕೋರ್ಟಿನಲ್ಲಿ ಮಧ್ಯಸ್ಥಿಕೆ ಅರ್ಜಿ ಸಲ್ಲಿಸಲು ಅವಕಾಶವಿದೆ. ರಾಜ್ಯದ ಹಿಂದಿನ ಬಿಜೆಪಿ ಸರ್ಕಾರ ಮಾಧುಸ್ವಾಮಿ ನೇತೃತ್ವದ ಉಪ ಸಮಿತಿ ಶಿಫಾರಸ್ಸಿನ ಮೇರೆಗೆ ಒಳ ಮೀಸಲಾತಿ ನಿಗಧಿಗೊಳಿಸಿ ಕೇಂದ್ರಕ್ಕೆ ರಾಜ್ಯ ಸರ್ಕಾರ ಶಿಫಾರಸ್ಸು ಮಾಡಿದೆ. ಆದರೆ, ಸಮಿತಿ ನೀಡಿರುವ ದತ್ತಾಂಶ ಪೂರಕವಾಗಿಲ್ಲ” ಎಂದು ಹೇಳಿದ್ದಾರೆ.

Advertisements

“ನ್ಯಾಯಮೂರ್ತಿ ಎ.ಜೆ ಸದಾಶಿವ ಆಯೋಗದ ವರದಿಯನ್ನು ಬಿಜೆಪಿ ಸರ್ಕಾರ ಅಂಗೀಕರಿಸಿಲ್ಲ. ನೀಡಿರುವ ಅಂಕಿ ಅಂಶಗಳು ಪೂರಕವಾಗಿಲ್ಲದೇ ಇರುವುದರಿಂದ ಸಮಿತಿ ಶಿಫಾರಸ್ಸು ಮಾನ್ಯ ಆಗುವದಿಲ್ಲ. ಬಿಜೆಪಿ ಸರ್ಕಾರವೇ ಮುಸ್ಲಿಂ ಸಮುದಾಯಕ್ಕೆ ನೀಡಲಾಗಿದ್ದ ಮೀಸಲಾತಿ ರದ್ದುಗೊಳಿಸಿರುವ ಶಿಫಾರಸ್ಸನ್ನು ಈಗಾಗಲೇ ಸುಪ್ರಿಂಕೋರ್ಟ ರದ್ದುಗೊಳಸಿದೆ. ಅದೇ ಮಾದರಿಯಲ್ಲಿ ಮಾಧುಸ್ವಾಮಿ ನೇತೃತ್ವದ ಉಪ ಸಮಿತಿ ಶಿಫಾರಸ್ಸು ಕೂಡ ರದ್ದುಗೊಳ್ಳುತ್ತದೆ” ಎಂದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X