ರಾಯಚೂರು | ಪಿಂಜಾರ ಅಭಿವೃದ್ಧಿ ನಿಗಮ ಸ್ಥಾಪಿಸಲು ಒತ್ತಾಯಿಸಿ ಶಾಸಕ ದದ್ದಲ್‌ಗೆ ಮನವಿ

Date:

Advertisements

ಪಿಂಜಾರ, ನದಾಫ್ ಸಮುದಾಯಕ್ಕೆ ಪ್ರತ್ಯೇಕ ಅಭಿವೃದ್ಧಿ ನಿಗಮ ಸ್ಥಾಪಿಸಲು ಮುಖ್ಯಮಂತ್ರಿಗೆ ಶಿಫಾರಸು ಮಾಡಬೇಕು ಎಂದು ಒತ್ತಾಯಿಸಿ ಅಖಿಲ ಕರ್ನಾಟಕ ಪಿಂಜಾರ, ನದಾಫ್, ಮನ್ಸೂರಿ ಹಕ್ಕುಗಳ ಸಂಘದ ವತಿಯಿಂದ ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಅವರಿಗೆ ಮನವಿ ಸಲ್ಲಿಸಲಾಯಿತು.

ರಾಜ್ಯದಲ್ಲಿ ಸುಮಾರು 35 ಲಕ್ಷ ಜನಸಂಖ್ಯೆ ಹೊಂದಿರುವ ನದಾಫ್, ಪಿಂಜಾರ ಜನಾಂಗ ಸಾಮಾಜಿಕ, ಶೈಕ್ಷಣಿಕ, ಸಾಂಸ್ಕೃತಿಕ, ಔದ್ಯೋಗಿಕ, ರಾಜಕೀಯ ಕ್ಷೇತ್ರಗಳಲ್ಲಿ ತೀರಾ ಹಿಂದುಳಿದಿದೆ. ಹಿಂದುಳಿದ ಪ್ರವರ್ಗ–1ರಲ್ಲಿ ಬರುವ ಶೋಷಿತ ಸಮಾಜವಾಗಿದ್ದು, ಸರ್ಕಾರದ ಯೋಜನೆಗಳು ಸಮುದಾಯದ ಜನರಿಗೆ ತಲುಪುತ್ತಿಲ್ಲ ಎಂದು ದೂರಿದರು.

ಪಿಂಜಾರ ಸಮುದಾಯಕ್ಕೆ ಪ್ರತ್ಯೇಕ ಅಭಿವೃದ್ಧಿ ಮಂಡಳಿ ಸ್ಥಾಪಿಸಬೇಕು ಎಂದು ಅನೇಕ ವರ್ಷಗಳಿಂದ ಹೋರಾಟ ಮಾಡುತ್ತಾ ಬಂದಿದ್ದೇವೆ. ಹಿಂದಿನ ಬಿಜೆಪಿ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ಬಸವರಾಜ ಬೊಮ್ಮಾಯಿ ಅವರು 2023ರ ಮಾರ್ಚ್ 24ರಂದು ನದಾಫ್ ಹಾಗೂ ಇತರೆ 13 ಜಾತಿಗಳನ್ನು ಸೇರಿಸಿ ಅಭಿವೃದ್ಧಿ ನಿಗಮ ಸ್ಥಾಪಿಸಿ ಘೊಷಣೆ ಮಾಡಿದ್ದರು. ಆದರೆ ನಂತರ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಯಾವುದೇ ಅನುದಾನ ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಿದರು.

Advertisements

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ನಮ್ಮ ಸಮುದಾಯದ ಮತಗಳೂ ನಿರ್ಣಾಯಕವಾಗಿವೆ. ಆದರೆ ಸಮುದಾಯಕ್ಕೆ ಕಡೆಗಣಿಸುತ್ತಿರುವುದು ಸರಿಯಲ್ಲ. ವಿಧಾನಸಭೆಯಲ್ಲಿ ಸಮುದಾಯದ ಪರ ಧ್ವನಿ ಎತ್ತಲು ಪಿಂಜಾರ ಸಮುದಾಯದ ಯಾವುದೇ ಒಬ್ಬ ಶಾಸಕರಿಲ್ಲ. ಹೀಗಾಗಿ ಸಮುದಾಯದ ಪರವಾಗಿ ಮುಖ್ಯಮಂತ್ರಿಗಳಿಗೆ ಶಿಫಾರಸು ಮಾಡಬೇಕು ಎಂದು ಮನವಿ ಮಾಡಿದರು.

ಇದನ್ನು ಓದಿದ್ದೀರಾ? ಮೈಸೂರು ದಸರಾದಲ್ಲೂ ಕೋಮು ದ್ವೇಷ; ದೀಪಾಲಂಕಾರಕ್ಕೂ ಬಿಜೆಪಿ ಅಪಸ್ವರ

ಸಂಘದ ರಾಜ್ಯಾಧ್ಯಕ್ಷ ಇಮ್ರಾನ್ ಬಡೇಸಾಬ್, ಜಿಲ್ಲಾ ಘಟಕದ ಅಧ್ಯಕ್ಷ ಎಂ.ಡಿ ಜಾವೀದ್, ಮಹಿಳಾ ಘಟಕದ ಅಧ್ಯಕ್ಷೆ ಖಾಸಿಂ ಬೀ, ಮುಖಂಡರಾದ ಗುಂಜಳ್ಳಿ ಶಫಿ, ಯಾಕೂಬ್ ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X