ರಾಯಚೂರು | ರಾಮಮಂದಿರ ಉದ್ಘಾಟನೆ ಕಾರ್ಯದಲ್ಲಿ ಮೋದಿ ಭಾಗಿ; ಸಿಪಿಐಎಂಎಲ್‌ ಖಂಡನೆ

Date:

Advertisements

ಅಯೋಧ್ಯೆಯ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ದೇಶದ ಪ್ರಧಾನಿ ನರೇಂದ್ರ ಮೋದಿಯವರು ಭಾಗವಹಿಸುವುದನ್ನು ಸಿಪಿಐ(ಎಂಎಲ್) ರೆಡ್‌ಸ್ಟಾರ್ ರಾಯಚೂರು ಜಿಲ್ಲಾ ಸಮಿತಿ ತೀವ್ರವಾಗಿ ಖಂಡಿಸಿದೆ.

ರಾಯಚೂರು ನಗರದ ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು ʼರಾಮಮಂದಿರ ಉದ್ಘಾಟನೆಗೆ ಮೋದಿಯವರು ಹೋಗಬಾರದುʼ ಎಂದು ಘೋಷಣೆ ಕೂಗುವ ಮೂಲಕ ಪ್ರತಿಭಟನೆ ನಡೆಸಿದರು.

“ಭಾರತ ಒಂದು ಸ್ವಾತಂತ್ರ್ಯ, ಸಾರ್ವಭೌಮ ಜಾತ್ಯತೀತ, ಸಮಾಜವಾದಿ ಆಶಯವನ್ನು ಹೊಂದಿರುವಂತಹ ದೇಶವಾಗಿದೆ. ದೇಶದ ಅಭಿವೃದ್ಧಿಗೆ ಪೂರಕವಾಗಿ ಹಾಗೂ ಸಂವಿಧಾನಾತ್ಮಕವಾಗಿ ಕಾರ್ಯನಿರ್ವಹಿಸಬೇಕಾದ ಸರ್ಕಾರಗಳು ಒಂದು ಧರ್ಮದ ವಕಾಲತ್ತು ವಹಿಸುವುದು ದೇಶದ ಸಂವಿಧಾನಕ್ಕೆ ಮಾಡಿದ ಅಪಚಾರವಾಗಿದೆ. ಈಗಾಗಲೇ ದೇಶಾದ್ಯಂತ ನಿರುದ್ಯೋಗ, ಹಸಿವು, ಬಡತನ, ಬೆಂಬಲ ಬೆಲೆಯ ಕೊರತೆ, ಆರೋಗ್ಯದ ಸಮಸ್ಯೆ ಹೀಗೆ ಹಲವಾರು ಗಂಭೀರ ಸಮಸ್ಯೆಗಳನ್ನು ಎದುರಿಸುತ್ತಿರುವ ಸಂದರ್ಭದಲ್ಲಿ ಜನತೆಯ ನೆರವಿಗೆ ಬಾರದೆ ಜನರಿಂದ ಸಂಗ್ರಹಿಸಲ್ಪಟ್ಟ ತೆರಿಗೆಯ ಸಾವಿರಾರು ಕೋಟಿ ರೂಪಾಯಿ ಹಣವನ್ನು ಮಂದಿರ ಕಟ್ಟುವುದಕ್ಕೆ ಬಳಸುವುದೂ ಕೂಡ ಸಂವಿಧಾನದ ಉಲ್ಲಂಘನೆಯಾಗಿದೆ” ಎಂದರು.

Advertisements

“ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ರೈತ ವಿರೋಧಿ, ಕಾರ್ಮಿಕ ವಿರೋಧಿ, ಜಾತ್ಯತೀತ ವಿರೋಧಿ, ಆದಿವಾಸಿ ವಿರೋಧಿ ಹಾಗೂ ದಲಿತ, ಅಲ್ಪಸಂಖ್ಯಾತರ ವಿರೋಧಿ ನೀತಿಗಳನ್ನು ಜಾರಿ ಮಾಡುತ್ತಲೇ ಬಂದಿದ್ದು, ದೇಶದ ಸಂಪನ್ಮೂಲಗಳನ್ನು ಹಾಗೂ ಸೇವಾ ವಲಯಗಳನ್ನು ಕಾರ್ಪೊರೇಟರ್ ಲಾಭಕ್ಕೆ ತಕ್ಕಂತೆ ಖಾಸಗೀಕರಿಸುತ್ತಾ, ದೇಶದ ಅಭಿವೃದ್ಧಿಗೆ ಮಾರಕವಾದ ನೀತಿಗಳನ್ನು ಅನುಸರಿಸುತ್ತಿದೆ. ಒಂದೆಡೆ ಬಂಡವಾಳಿಗರ ಬಂಡವಾಳ ದುಪ್ಪಟ್ಟಾಗುತ್ತಿದ್ದು, ಕೂಲಿ ಕಾರ್ಮಿಕರ ರೈತರ ಬದುಕು ಹೀನಾಯವಾಗುತ್ತಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ಟ್ಯಾಕ್ಸಿ ಲಾರಿ ಚಾಲಕರ ಕಾರ್ಮಿಕ ವಿರೋಧಿ ರಿಲಯನ್ಸ್ ಎಸ್‌ಆರ್ ಎಂಬ ಕಂಪನಿಗಳ ಪರವಾದ ವಿದೇಯಕವನ್ನು ಮಂಡಿಸುವುದರ ಮೂಲಕ ಇದೀಗ ಅಮಾಯಕ ಚಾಲಕರನ್ನು ಬಲಿಕೊಡುವ ಕೆಲಸದಲ್ಲಿ ಕೇಂದ್ರ ಸರ್ಕಾರ ನಿರತವಾಗಿದೆ” ಎಂದು ಆರೋಪಿಸಿದರು.

“ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಅಧಿಕಾರಕ್ಕೆ ಬರುವ ಸಲುವಾಗಿ ಹಿಂದೂ ಮೂಲಭೂತವಾದವನ್ನು ಗಟ್ಟಿಗೊಳಿಸುತ್ತಾ, ರಾಷ್ಟ್ರೀಯ ಸರಕು ಸಾಗಾಣಿಕೆಯ ಖಾಸಗೀಕರಣ ಹಾಗೂ ಮುಸ್ಲಿಂ ವಿರೋಧಿ ರಾಜಕಾರಣ ಷಡ್ಯಂತ್ರವಾಗಿದೆ. ಜತೆಗೆ ಮನೆ ಮನೆಗೆ ಅಕ್ಷತೆಯ ಹೆಸರಲ್ಲಿ ಅಮಾಯಕ ಜನತೆಯನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಮೂಲಕ ಈ ತಂತ್ರಗಾರಿಕೆಯನ್ನು ಮಾಡುತ್ತಿದೆ” ಎಂದರು.

“ಕರ್ನಾಟಕದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಗ್ಯಾರಂಟಿಗಳ ಜಾರಿಯಲ್ಲಿಯೇ ಮಗ್ನವಾಗಿದ್ದು, ಸಾಮಾನ್ಯ ಜನರ ಸಮಸ್ಯೆಗಳಿಗೆ ಹಾಗೂ ರಾಜ್ಯದ ಅಭಿವೃದ್ಧಿ ಕೆಲಸಗಳಿಗೆ ಪೂರಕವಾದ ಯೋಜನೆಗಳನ್ನು ರೂಪಿಸುವಲ್ಲಿ ವಿಫಲವಾಗಿದೆ. ಜಾತಿಗಣತಿ ವರದಿಯನ್ನು ಬಿಡುಗಡೆ ಮಾಡದೆ ತಮ್ಮದೇ ಪಕ್ಷದ ಕೆಲವೇ ಕೆಲವು ಮಂತ್ರಿಗಳು ಮತ್ತು ಜಾತಿವಾದಿ ಶಾಸಕರುಗಳ ನಿರ್ದೇಶನದಂತೆ ತಡೆಹಿಡಿಯಲಾಗಿದೆ. ಈ ಕೂಡಲೇ ರಾಜ್ಯ ಸರ್ಕಾರ ಜಾತಿಗಣತಿ ವರದಿಯನ್ನು ಜಾರಿ ಮಾಡಬೇಕು” ಎಂದು ಸಿಪಿಐ(ಎಂಎಲ್) ರೆಡ್‌ಸ್ಟಾರ್ ಪಕ್ಷ ರಾಯಚೂರು ಜಿಲ್ಲಾ ಸಮಿತಿ ಮುಖಂಡರು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ರಾಮಮಂದಿರದಲ್ಲಿ ಮುಸ್ಲಿಂ‌ ಬಾಂಧವರಿಂದ ಪೂಜೆ

ಎಂ ಡಿ ಅಮೀರ್ ಅಲಿ, ಚಿನ್ನಪ್ಪ ಕೊಟ್ರಿಕಿ, ಜಿ ಅಮರೇಶ, ಎಂ ಗಂಗಾಧರ, ಆರ್ ಹುಚ್ಚರೆಡ್ಡಿ, ಮಲ್ಲಯ್ಯ ಕಟ್ಟಿಮನಿ, ಸೈಯದ್ ಅಬ್ಬಾಸ್ ಅಲಿ, ಜಿ ಅಡವಿರಾವ್, ಅಜೀಜ್ ಜಾಗೀರದಾರ್, ಆದಿ ನಗನೂರು, ಸಂತೋಷ ದಿನ್ನಿ, ತಿಪ್ಪರಾಜ ಗೆಜ್ಜಲಗಟ್ಟಾ, ವೆಂಕಟೇಶ ನಾಯಕ, ಯಲ್ಲಪ್ಪ ಊಟಕನೂರು, ಗಿರಿಲಿಂಗಸ್ವಾಮಿ ಸೇರಿದಂತೆ ಬಹುತೇಕ ಕಾರ್ಯತರ್ಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X