ರಾಯಚೂರು | ಹಿಂದಿನ ಕಾಂಗ್ರೆಸ್ ಪಕ್ಷ ಅಂಬೇಡ್ಕರ್ ಸಮಾಧಿಗೆ ಜಾಗ ಕೊಡಲಿಲ್ಲ: ವಿರೂಪಾಕ್ಷಪ್ಪ

Date:

Advertisements

ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರು 1956ನೇ ಡಿಸೆಂಬರ್‌ 6ರಂದು ವಿಧಿವಶರಾದಾಗ ಕಾಂಗ್ರೆಸ್ ಪಕ್ಷ ಅವರ ಸಮಾಧಿಗೆ ಜಾಗ ಕೊಡಲಿಲ್ಲ ಎಂದು ಜೆಡಿಎಸ್ ಮುಖಂಡ ವಿರೂಪಾಕ್ಷಪ್ಪ ಹೇಳಿದರು.

ರಾಯಚೂರು ನಗರದ ರಂಗ ಮಂದಿರದಲ್ಲಿ ಭೀಮ್ ಆರ್ಮಿ ಭಾರತ ಏಕತಾ ಮಿಷನ್ ರಾಯಚೂರು ಜಿಲ್ಲಾ ಘಟಕದಿಂದ ಆಯೋಜಿಸಿದ್ದ ಅಂಬೇಡ್ಕರ್ ಅವರ 68ನೇ ಮಹಾ ಪರಿನಿಬ್ಬಾಣ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

“ಕಾಂಗ್ರೆಸ್ ಪಕ್ಷ ದೆಹಲಿಯಲ್ಲಿ ಮಹಾತ್ಮ ಗಾಂಧಿ ಸಮಾಧಿಗೆ 20 ಎಕರೆ ಜಾಗ ನೀಡಿದೆ. ಇಂದಿರಾ ಗಾಂಧಿ, ನೆಹರು ಸೇರಿದಂತೆ ಇನ್ನಿತರ ಎಲ್ಲರ ಸಮಾಧಿಗೂ ಜಾಗವಿದೆ. ಆದರೆ ಅಂಬೇಡ್ಕರ್ ಅವರಿಗೆ ಮಾತ್ರ ಜಾಗ ನೀಡಲಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

Advertisements

“ಅಂಬೇಡ್ಕರ್ ಅವರು ಕೆಳ ಜಾತಿಯಲ್ಲಿ ಹುಟ್ಟಿದ್ದಾರೆಂಬ ಕಾರಣಕ್ಕೆ ಸಾಕಷ್ಟು ನೋವುಗಳನ್ನು ಅನುಭವಿಸಿದ್ದಾರೆ. ಶಾಲೆಯ ಹೊರಗಡೆ, ಕೆಳಗಡೆ ಕೂತುಕೊಂಡು ಪಾಠ ಕೇಳುವ ಸನ್ನಿವೇಶವಿತ್ತು. ವಿದ್ಯುತ್ ಇಲ್ಲದೆ ರಸ್ತೆ ಬದಿಗೆ ಹಾಕಿರುವ ವಿದ್ಯುತ್ ಕಂಬದ ಬೆಳಕಿನಲ್ಲಿ ಹಗಲು ರಾತ್ರಿ ಓದಿ ಸಮಾಜದ ಕತ್ತಲು ನಿವಾರಣೆಗೆ ಬೆಳಕು ಮೂಡಿಸಿದ ಮಹಾನ್ ನಾಯಕ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಗದಗ | ಮಹಾ ಪರಿನಿಬ್ಬಾಣ ದಿನ; ದಲಿತಪರ ಸಂಘಟನೆಗಳಿಂದ ಅಂಬೇಡ್ಕರ್‌ ನೆನಪು

“ಎಲ್ಲ ದೇಶಕ್ಕಿಂತ ನಮ್ಮ ದೇಶದ ಸಂವಿಧಾನ ಮಹತ್ವವಾಗಿದ್ದು, ಮಿಗಿಲಾಗಿದೆ. ಅಂಬೇಡ್ಕರ್‌ ಅವರ ಮಾರ್ಗದಲ್ಲಿ ನಡೆಯುವುದರ ಮೂಲಕ ಅವರ ಮತ್ತು ಸಂವಿಧಾನದ ಆಶಯಗಳನ್ನು ಮುಂದಿನ ಪೀಳಿಗೆಗೆ ತೋರಿಸಿಕೊಡಬೇಕು” ಎಂದು ಹೇಳಿದರು.

ಈ ವೇಳೆ ಅಂಬಣ್ಣ ಆರೋಲಿಕರ, ಶಿವುಕುಮಾರ ಮ್ಯಾಗಳಮನಿ, ಖಾಜ ಅಸ್ಲಾಂ, ಎಂ ಆರ್ ಭೇರಿ, ಪ್ರವೀಣ, ಶಾಲಾ ಮಕ್ಕಳು ಸೇರಿದಂತೆ ಇತರರು ಇದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X