ರಾಯಚೂರು | ಶಾಖೋತ್ಪನ್ನ ಕೇಂದ್ರದಲ್ಲಿ ಆರು ಘಟಕಗಳ ಉತ್ಪಾದನೆ ಸ್ಥಗಿತ

Date:

Advertisements

ರಾಜ್ಯದಲ್ಲಿ ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲವೆಂದು ಒಂದು ಕಡೆ ಸರ್ಕಾರ ಹೇಳುತ್ತಿದ್ದರೆ, ಮತ್ತೊಂದು ಕಡೆಯಿಂದ ಶಾಖೋತ್ಪನ್ನ ಕೇಂದ್ರಗಳ ವಿದ್ಯುತ್ ಉತ್ಪಾದನೆ ಇಳಿಕೆಯಾಗಿದ್ದು, ರಾಯಚೂರು ಶಾಖೋತ್ಪನ್ನ ಕೇಂದ್ರದಲ್ಲಿ ಆರು ಘಟಕಗಳ ಉತ್ಪಾದನೆ ಸ್ಥಗಿತಗೊಂಡಿದೆ.

210 ಮೆ.ವ್ಯಾ ವಿದ್ಯುತ್ ಉತ್ಪಾದಿಸುವ ಐದು ಘಟಕ ಹಾಗೂ 250 ಮೆ.ವ್ಯಾ ವಿದ್ಯುತ್ ಉತ್ಪಾದಿಸುವ 8ನೇ ಘಟಕಗಳು ಸ್ಥಗಿತಗೊಂಡಿದ್ದ, ನಾಲ್ಕು ಮತ್ತು ಐದನೇ ಘಟಕ ಮಾತ್ರ ಉತ್ಪಾದನೆಯಲ್ಲಿ ತೊಡಗಿದ್ದು 1720 ಮೆ.ವ್ಯಾ ವಿದ್ಯುತ್ ಸಾಮರ್ಥ್ಯ ಹೊಂದಿರುವ ಕೇಂದ್ರದಲ್ಲಿ 250 ಮೆ.ವ್ಯಾ ವಿದ್ಯುತ್ ಉತ್ಪಾದಿಸಲಾಗುತ್ತಿದೆ.‌

ಕರ್ನಾಟಕ ವಿದ್ಯುತ್ ನಿಗಮ ಐದು ಘಟಕಗಳ ಸ್ಥಗಿತಗೊಳ್ಳಲು ತಾಂತ್ರಿಕ ಕಾರಣಗಳನ್ನು ಉಲ್ಲೇಖಿಸಿದ್ದು, ಬಂಕರ್‌ ಸೇರಿದಂತೆ ಇತರೆ ಕಾರಣ ನೀಡಿ ಘಟಕಗಳನ್ನು ಸ್ಥಗಿತಗೊಳಿಸಲಾಗಿದೆ. ಬಳ್ಳಾರಿ ಶಾಖೋತ್ಪನ್ನ ಕೇಂದ್ರದ ಮೂರು ಘಟಕಗಳಲ್ಲಿ ಎರಡನೇ ಘಟಕ ಸ್ಥಗಿತಗೊಂಡಿದೆ.

Advertisements

ಈ ಸುದ್ದಿ ಓದಿದ್ದೀರಾ? ಮೇಕೆದಾಟು | ಸಹಕಾರ ಕೋರಿ ತಮಿಳುನಾಡು ಸರ್ಕಾರಕ್ಕೆ ಮನವಿ ಮಾಡುವೆ: ಡಿಕೆ ಶಿವಕುಮಾರ್

ವೈಟಿಪಿಎಸ್‌ನ ಎರಡು ಘಟಕಗಳು ಉತ್ಪಾದನೆಯಲ್ಲಿ ತೊಡಗಿವೆ. ಜಲಾಧಾರಿತ ಘಟಕಗಳೂ ಕೂಡ ಸ್ಥಗಿತಗೊಂಡಿದ್ದರಿಂದ ರಾಜ್ಯ ಬೇಡಿಕೆ ಉತ್ಪಾದನೆಯಲ್ಲಿ ಕೊರತೆ ಕಂಡಿದೆ. 11 ಸಾವಿರ ಮೆ.ವ್ಯಾ ವಿದ್ಯುತ್ ಉತ್ಪಾದನೆ ಸಾಮರ್ಥ್ಯದಲ್ಲಿ 3 ಸಾವಿರ ಮೆ.ವ್ಯಾ ವಿದ್ಯುತ್ ಉತ್ಪಾದನೆಯಾಗುತ್ತಿದೆ. ಆದರೂ ಪರ್ಯಾಯ ಮೂಲಗಳಿಂದ ವಿದ್ಯುತ್ ಉತ್ಪಾದನೆ ಮಾಡಲಾಗುತ್ತಿದೆ ಎಂದು ನಿಗಮ ಹೇಳಿಕೊಂಡಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X