ರಾಯಚೂರು | ಪಬ್ಲಿಕ್ ಶಾಲೆ ತೆರೆಯುವ ಬಜೆಟ್ ಖಂಡಿಸಿ ಪ್ರತಿಭಟನೆ

Date:

Advertisements

ರಾಜ್ಯದಲ್ಲಿ 400 ಪಬ್ಲಿಕ್ (ಕೆಪಿಎಸ್) ಶಾಲೆಗಳನ್ನು ತೆರೆಯುವ ಕುರಿತು ನೀಡಿರುವ ಬಜೆಟ್ ಹೇಳಿಕೆ ವಿರೋಧಿಸಿ ರಾಯಚೂರು ಜಿಲ್ಲಾ ಕನ್ನಡ ಕ್ರಿಯಾ ಸಮಿತಿ ವತಿಯಿಂದ ನಗರದ ಡಾ. ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.

ಮಾ.7 ರಂದು ಕರ್ನಾಟಕ ಬಜೆಟ್ ಭಾಷಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ 400 ಪಬ್ಲಿಕ್ ಶಾಲೆಗಳನ್ನು ಆರಂಭಿಸುವುದಾಗಿ ಘೋಷಿಸಿರುವುದು ಆಘಾತಕಾರಿಯಾಗಿದೆ. ಕನ್ನಡ ಭಾಷೆಗೆ, ಕನ್ನಡ ಮಾಧ್ಯಮ ಶಿಕ್ಷಣಕ್ಕೆ ಇದು ಭಾರೀ ದೊಡ್ಡ ಹೊಡೆತ ನೀಡುವ ವಿಷಯವಾಗಿದೆ. ಈಗಾಗಲೇ ಪಬ್ಲಿಕ್ ಸ್ಕೂಲ್ ಹೆಸರಲ್ಲಿ ಸರಕಾರಿ ಆಂಗ್ಲ ಮಾಧ್ಯಮ ಪ್ರಾಥಮಿಕ, ಪ್ರೌಢಶಾಲೆಗಳು ಆರಂಭಗೊಂಡು ಕನ್ನಡ ಮಾಧ್ಯಮ ಶಿಕ್ಷಣ ಪಡೆಯುವ ಮಕ್ಕಳಲ್ಲಿ ಕೀಳರಿಮೆ ಮೂಡಿಸಿದೆ ಹಾಗೆ ಇಂಗ್ಲಿಷ್ ಮಾಧ್ಯಮ ಸೆಳೆತ ಮೂಡಿಸಿ ಕನ್ನಡ ಮಾಧ್ಯಮಕ್ಕೆ ಕೊಡಲಿಪೆಟ್ಟು ಬೀಳಹತ್ತಿದೆ. ಹೀಗಾದರೆ ಮುಂದಿನ ಐದಾರು ವರ್ಷಗಳಲ್ಲಿ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಕನ್ನಡ ಮಾಧ್ಯಮ ಮುಚ್ಚಿಹೋಗಬಹುದು” ಎಂದು ಸಮಿತಿಯ ಮುಖಂಡರು ಆತಂಕ ವ್ಯಕ್ತಪಡಿಸಿದರು.

“ಕೂಡಲೇ 400 ಅಂಗ್ಲ ಮಾಧ್ಯಮ ಪಬ್ಲಿಕ್ ಶಾಲೆಗಳನ್ನು ತೆರೆಯುವ ಘೋಷಣೆ ಕೈ ಬಿಡಬೇಕು. ಈಗಾಗಲೇ ಎಲ್ಲಾ ಜಿಲ್ಲೆ ಮತ್ತು ತಾಲೂಕುಗಳಲ್ಲಿ ತೆರೆದಿರುವ ಇಂಗ್ಲಿಷ್ ಮಾಧ್ಯಮದ ಪಬ್ಲಿಕ್ ಶಾಲೆಗಳನ್ನು ಕೂಡಲೇ ಮುಚ್ಚಬೇಕು. ಎಲ್ ಕೆ ಜಿ, ಯು ಕೆ ಜಿಯಿಂದ ಹತ್ತನೇ ತರಗತಿವರೆಗೆ ಸರ್ಕಾರಿ ಶಾಲೆಗಳಲ್ಲಿ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಾತ್ರ ನಡೆಸಬೇಕು. ಇದು ರಾಜ್ಯ ಭಾಷಾ ನೀತಿಗೆ ಅನುಗುಣವಾಗಿದೆ. ಕನ್ನಡ ಮಾಧ್ಯಮ ಬಿಟ್ಟು ಉಳಿದೆಲ್ಲ ಶಿಕ್ಷಣ ಮಾಧ್ಯಮ ರದ್ದುಪಡಿಸಬೇಕೆಂದು” ಅವರು ಒತ್ತಾಯಿಸಿದರು.

ಇದನ್ನೂ ಓದಿ: ರಾಯಚೂರು | ಸೂಕ್ತ ಸಾರಿಗೆ ವ್ಯವಸ್ಥೆ ಕಲ್ಪಿಸುವಂತೆ ತಹಶೀಲ್ದಾರರಿಗೆ ಮನವಿ

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ನಡುಮನಿ, ಪ್ರಧಾನ ಕಾರ್ಯದರ್ಶಿ ಹನುಮಂತು ಆಲೂರು, ಸಹ ಕಾರ್ಯದರ್ಶಿ ಸಿದ್ರಾಮಪ್ಪ ಮಾಲೀಪಾಟೀಲ್, ಉಪಾಧ್ಯಕ್ಷರಾದ ರಾಮಣ್ಣ ಮ್ಯಾದಾರ, ರಾಮಲಿಂಗಪ್ಪ, ಪ್ರಮುಖರಾದ ಬಶೀರ ಅಹ್ಮದ್ ಹೊಸಮನಿ, ರುದ್ರಯ್ಯ ಗಣಾರಿ, ವೆಂಕಟರೆಡ್ಡಿ, ಹನುಮಂತಪ್ಪ, ರಫೀಕ್ ಅಹ್ಮದ್, ಅಶೋಕಕುಮಾರ ಜೈನ್, ಈರಣ್ಣ ಬೆಂಗಾಲಿ ಸೇರಿದಂತೆ ಇತರರಿದ್ದರು.

Advertisements
ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X