ರಾಯಚೂರು | ಅಕ್ರಮ ಕಲ್ಲು ಗಣಿಗಾರಿಕೆ ವಿರೋಧಿಸಿ ಧರಣಿ

Date:

Advertisements

ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನ ನೀರಮಾನ್ವಿ ಗ್ರಾಮದ ಜಮೀನೊಂದರಲ್ಲಿ ನಡೆಯುತ್ತಿರುವ ಅಕ್ರಮ ಕಲ್ಲು ಗಣಿಗಾರಿಕೆ ವಿರೋಧಿಸಿ ವಿವಿಧ ಸಂಘಟನೆಗಳ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ತಾಲ್ಲೂಕು ಪಂಚಾಯಿತಿ ಕಚೇರಿ ಆವರಣದಲ್ಲಿ ಧರಣಿ ನಡೆಸಿದರು.

ನೀರಮಾನ್ವಿ ಗ್ರಾಮದ ಸ.ನಂ. 55/1 ಮತ್ತು ಸ.ನಂ. 56 ರ ಕೃಷಿ ಜಮೀನಿನಲ್ಲಿ ಸಣ್ಣ ಪ್ರಮಾಣದ ಕಲ್ಲುಬಂಡೆಗಳನ್ನು ತೆಗೆಯುತ್ತೇವೆ ಎಂದು ಗಣಿ ಇಲಾಖೆಯಿಂದ ಪರವಾನಿಗೆ ಪಡೆದು ಅಕ್ರಮವಾಗಿ ಗಣಿಗಾರಿಕೆ ನಡೆಸಲಾಗುತ್ತಿದೆ. ಈ ಕೂಡಲೇ ಸರ್ಕಾರ ಸೂಕ್ತ ತನಿಖೆ ನಡೆಸಿ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.

ಅಕ್ರಮವಾಗಿ ನಡೆಯುತ್ತಿರುವ ಗಣಿಗಾರಿಕೆಯಿಂದ ಸುಮಾರು ಒಂದು ಲಕ್ಷ ಟನ್ ಹೆಚ್ಚುವರಿ ಕಲ್ಲನ್ನು ಗಣಿಗಾರಿಕೆ ಮಾಡಿದ್ದು, ಇದರ ಕುರಿತು ಸಂಬಂಧಿಸಿದ ಅಧಿಕಾರಿಗಳಿಂದ ಯಾವುದೇ ದಂಡ ವಿಧಿಸಿಲ್ಲ. ಘಟನೆ ತಿಳಿದಿದ್ದೂ ನಿರ್ಲಕ್ಷ್ಯ ವಹಿಸಿದ ಗಣಿ ಇಲಾಖೆಯ ಹಿರಿಯ ಭೂ ವಿಜ್ಞಾನಿ ಪುಷ್ಪಲತಾ ಕವಲೂರು ಅವರನ್ನು ತಕ್ಷಣ ವರ್ಗಾಯಿಸಬೇಕು ಎಂದು ಒತ್ತಾಯಿಸಿದರು.

Advertisements

ಗಣಿ ಇಲಾಖೆಯ ಹೆಚ್ಚುವರಿ ನಿರ್ದೇಶಕರ ಕಚೇರಿ ಸಿಬ್ಬಂದಿ ಹಾಗೂ ರಾಯಚೂರು ಗಣಿ ಇಲಾಖೆ ಸಿಬ್ಬಂದಿ ಜಂಟಿಯಾಗಿ ಸ್ಥಾನಿಕ ಪರಿಶೀಲನೆ ಮಾಡಿ ಹಾಗೂ ಡಿಜಿಪಿಎಸ್ ಡೋಸ್ ಸರ್ವೆ ಮಾಡಿ ಪರವಾನಿಗೆ ಪಡೆದದ್ದಕ್ಕಿಂತಲೂ ಹೆಚ್ಚುವರಿಯಾಗಿ 18 ಸಾವಿರ ಟನ್ ಕಲ್ಲು ಬಂಡೆಗಳನ್ನು ತೆಗೆದಿರುತ್ತಾರೆ ಎಂದು ಅಧಿಕಾರಿಗಳೇ ಮಾಹಿತಿ ನೀಡಿದ್ದರೂ ಯಾವುದೇ ಕ್ರಮ ಜರುಗಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸರ್ಕಾರದ ನಿಯಮಗಳ ಪ್ರಕಾರ ಪ.ಜಾತಿ, ಪ.ಪಂಗಡದವರಿಗೆ ಕಲ್ಲು ಕಟ್ಟಡ ಕ್ವಾರಿಯನ್ನು ಗುರುತಿಸಿ ಕಲ್ಲುಗಣಿಗಾರಿಕೆ ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಅವರು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ?: ರಾಯಚೂರು | ಕಾರ್ಮಿಕರ ಮೇಲೆ ಹಲ್ಲೆ: ಕಠಿಣ ಕ್ರಮಕ್ಕೆ ಆಗ್ರಹ

ಧರಣಿಯಲ್ಲಿ ಅಂಬೇಡ್ಕರ್ ದಲಿತ ಸೇನೆಯ ಮುಖಂಡ ಗುರುರಾಜ ಎನ್ ನಾಗಲಾಪುರ, ರೈತ ಸಂಘದ ಅಧ್ಯಕ್ಷ ಹೊಳೆಯಪ್ಪ ಉಟಕನೂರು, ದಲಿತಪರ ಸಂಘಟನೆಗಳ ಒಕ್ಕೂಟದ ಮುಖಂಡರಾದ ನರಸಪ್ಪ ಜೂಕೂರು ಹಾಗೂ ಹನುಮಂತ ಸೀಕಲ್, ನೀರಮಾನ್ವಿ ಗ್ರಾಮಸ್ಥರಾದ ಶಿವು, ಮರಿಸ್ವಾಮಿ, ವೆಂಕಟೇಶ, ಜಗದೀಶ, ರಾಜ, ಕೃಷ್ಣ, ಸುರೇಶ, ರಾಮಣ್ಣ ಭೋವಿ ಭಾಗವಹಿಸಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X